Dharwad: ಅನೈತಿಕ ಸಂಬಂಧಕ್ಕೆ ಅಡ್ಡಿ; ವಿಕಲಚೇತನ ಬಾಲಕಿಯ ಕೊಲೆ
ಬಾಲಕಿಯ ತಾಯಿ ಹಾಗೂ ಆಕೆಯ ಪ್ರಿಯಕರ ಪೊಲೀಸರ ವಶಕ್ಕೆ
Team Udayavani, Feb 8, 2024, 10:46 PM IST
ಧಾರವಾಡ : ಐದು ವರ್ಷದ ವಿಕಲಚೇತನ ಬಾಲಕಿಯ ಕುತ್ತಿಗೆ ಇರಿದು ಕೊಲೆ ಮಾಡಿರುವ ಘಟನೆ ನಗರದ ಕಮಲಾಪೂರದ ಹೂಗಾರ ಓಣಿಯ ಗುರುವಾರ ನಡೆದಿದೆ.
ಸಹನಾ ಹಿರೇಮಠ(5) ಕೊಲೆಯಾದ ಬಾಲಕಿ. ಕುತ್ತಿಗೆ ಭಾಗಕ್ಕೆ ಗಾಯಗೊಂಡ ಸ್ಥಿತಿಯಲ್ಲಿ ಬಾಲಕಿಯನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಳೆ. ಬಾಲಕಿಯ ಕುತ್ತಿಗೆ ಹರಿತ ವಸ್ತುವಿನ ಮೂಲಕ ಇರಿದು ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ.
ಬಾಲಕಿಯ ತಾಯಿ ಜ್ಯೋತಿ ಕಲ್ಲಯ್ಯ ಹಿರೇಮಠ ಹಾಗೂ ಆಕೆಯ ಪ್ರಿಯಕರ ರಾಹುಲ್ ನಡುವೆ ಅನೈತಿಕ ಸಂಬಂಧವಿತ್ತು. ಈ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎಂಬ ಅನುಮಾನ ಪೊಲೀಸರಿಗೆ ಮೂಡಿದೆ. ಹೀಗಾಗಿ ಸಹನಾಳ ತಾಯಿ ಜ್ಯೋತಿಯ ಜತೆಗೆ ರಾಹುಲ್ ಜೋಡಿಯನ್ನು ಉಪನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಈ ತನಿಖೆಯ ಬಳಿಕವೇ ಈ ಕೊಲೆಯ ಸತ್ಯಾಂಶ ಬಯಲಿಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್-ಯುವಕನಿಗೆ ಮರುಜನ್ಮ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.