Dharwad: ಕಪ್ಪತ್ತಗುಡ್ಡದ ರಕ್ಷಣೆಗೆ ಹೋರಾಟ ನಿರಂತರ: ನಂದಿವೇರಿ ಸ್ವಾಮೀಜಿ


Team Udayavani, Oct 8, 2024, 5:33 PM IST

Dharwad: ಕಪ್ಪತ್ತಗುಡ್ಡದ ರಕ್ಷಣೆಗೆ ಹೋರಾಟ ನಿರಂತರ: ನಂದಿವೇರಿ ಸ್ವಾಮೀಜಿ

ಧಾರವಾಡ: ಸಸ್ಯಮತ್ತು ಜೀವ ಸಂಕುಲದ ಪ್ರತೀಕವಾಗಿರುವ ಕಪ್ಪತ್ತಗುಡ್ಡ ರಕ್ಷಣೆಗೆ ನಿರಂತರ ಹೋರಾಟ ಮತ್ತು ಜಾಗೃತಿ ನಡೆಯುವುದು ಅನಿವಾರ್ಯವಾಗಿದ್ದು, ಮುಂದಿನ ದಿನಗಳಲ್ಲಿಯೂ ಅದನ್ನು ಸಂರಕ್ಷಿಸುವ ಹೊಣೆ ಯುವ ಪೀಳಿಗೆ ಮೇಲಿದೆ ಎಂದು ಕಪ್ಪತ್ತಗುಡ್ಡ ನಂದಿವೇರಿ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹೇಳಿದರು.

ಇಲ್ಲಿನ ಕವಿವಿಯ ಸಿನೆಟ್ ಹಾಲ್‌ನಲ್ಲಿ ಗಾಂಧಿ ಅಧ್ಯಯನ ವಿಭಾಗ ಹಮ್ಮಿಕೊಂಡಿದ್ದ ಸಮಕಾಲಿನ ಪರಿಸರ ಬಿಕ್ಕಟ್ಟಿನ ಸಂದರ್ಭದಲ್ಲಿ ಗಾಂಧಿ ಚಿಂತನೆ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದರು.

ಔಷಧಿ ಸಸ್ಯ ಸಂಕುಲ, ಉತ್ತಮ ಹವಾಗುಣ, ಶುದ್ಧ ಜಲಸಂಪತ್ತು ಇರುವ ಕಪ್ಪತ್ತಗುಡ್ಡದ ಮೇಲೆ ದುಷ್ಟ ಶಕ್ತಿಗಳು ಕಣ್ಣಿಟ್ಟಿವೆ. ಇದನ್ನು ಲೂಟಿ ಹೊಡೆಯಲು ಕಾಲ ಕಾಲಕ್ಕೆ ನಾನಾ ತಂತ್ರ ಮಾಡುತ್ತಿದ್ದಾರೆ. ಆದರೆ ಅದನ್ನು ಉಳಿಸಿಕೊಳ್ಳಲು ಮುಂದಿನ ಪೀಳಿಗೆ ಸಜ್ಜಾಗಬೇಕು. ಯುವಕರು ವರ್ಷಕ್ಕೆ ಒಂದು ಬಾರಿಯಾದರೂ ಕಪ್ಪತ್ತಗುಡ್ಡಕ್ಕೆ ಚಾರಣ ಹೋಗಿ, ಅದರ ರಕ್ಷಣೆಗೆ ಕಂಕಣ ಕಟ್ಟಬೇಕು ಎಂದು ಸ್ವಾಮೀಜಿ ಹೇಳಿದರು.

ಪರಿಸರ ಜಾಗೃತಿ ಅಗತ್ಯ: ಚಿತ್ರನಟ ಸುರೇಶ ಹೆಬ್ಳಿಕರ್ ಮಾತನಾಡಿ, ತಂತ್ರಜ್ಞಾನ ಆಧಾರಿತ ಅಭಿವೃದ್ಧಿಯಿಂದ ಪರಿಸರ ತೀವ್ರ ನಾಶವಾಗುತ್ತಿದೆ. ದೇಶಿ ಸಿದ್ದಾಂತಗಳ ಮೇಲೆ ಗಾಂಧಿಜಿ ತತ್ವಗಳ ಮೇಲೆ ಮತ್ತೆ ಪರಿಸರ ಸುಧಾರಿಸಲು ಅವಕಾಶವಿದ್ದು, ಯುವ ಪೀಳಿಗೆ ಸರಳ ಜೀವನ ರೂಢಿಸಿಕೊಳ್ಳಬೇಕು. ಆರ್ಥಿಕ ಪ್ರಗತಿ ಪರಿಸರ ನಾಶಕ್ಕೆ ಕಾರಣವಾಗದಂತಹ ದಾರಿ ಹುಡುಕಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಪ್ರಭಾರ ಕುಲಪತಿ ಡಾ.ಬಿ.ಎಂ.ಪಾಟೀಲ್ ಮಾತನಾಡಿ, ಜಗತ್ತು ಎಲ್ಲರ ಆಸೆಗಳನ್ನು ಪೂರೈಸಬಲ್ಲದು, ಆದರೆ ದುರಾಸೆಗಳನ್ನಲ್ಲ ಎಂದು ಮಹಾತ್ಮ ಗಾಂಧೀಜಿ ಬಹಳ ವರ್ಷಗಳ ಹಿಂದೆಯೇ ನಮಗೆಲ್ಲ ಮನದಟ್ಟು ಮಾಡಿದ್ದಾರೆ. ಪರಿಸರ ಜಾಗೃತಿ ಯುವ ಪೀಳಿಗೆಯಲ್ಲಿ ಹೆಚ್ಚಬೇಕಿದೆ ಎಂದರು.

ಗಾಂಧಿ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ.ಶಿವಾನಂದ ಶೆಟ್ಟರ ಪ್ರಾಸ್ತಾವಿಕವಾಗಿ ಮಾತನಾಡಿ, ಗಾಂಧಿ ಮಾರ್ಗ ರೂಪಿಸಿರುವ ಸರಳ ಜೀವನ, ಮಿತ ಬಳಕೆ ಖಂಡಿತವಾಗಿಯೂ ಪರಿಸರ ರಕ್ಷಣೆಗೆ ಸಹಕಾರಿ ಎಂದರು.

ಅರ್ಥಶಾಸ್ತ್ರಜ್ಞ ಡಾ.ಗೋಪಾಲ ಕಡಿಕೋಡಿ, ಪಕ್ಷಿ ತಜ್ಞ ಆರ್.ಜಿ.ತಿಮ್ಮಾಪೂರ, ಹರ್ಷವರ್ಧನ ಶೀಲವಂತ, ಬಾಲಚಂದ್ರ ಜಾಬಶೆಟ್ಟಿ ಅವರುಗಳು ಪರಿಸರ ಮತ್ತು ಗಾಂಧಿ ಚಿಂತನೆ ಕುರಿತು ವಿಷಯ ಮಂಡಿಸಿದರು. ಕವಿವಿ ಎನ್‌ಎಸ್‌ಎಸ್ ಘಟಕದ ಮುಖ್ಯಸ್ಥರಾದ ಡಾ.ಮಹಾದೇವ ದಳಪತಿ ಕಾರ್ಯಕ್ರಮ ನಿರೂಪಿಸಿದರು. ಡಾ.ಎಸ್.ಬಿ.ಬಸೆಟ್ಟಿ ಸ್ವಾಗತಿಸಿ, ವಂದಿಸಿದರು.

ಕಪ್ಪತ ಗುಡ್ಡದ ಕಾವಲುಗಾರ

ಕಪ್ಪತ್ತಗುಡ್ಡದಲ್ಲಿ ಚಿನ್ನದ ಗಣಿಗಾರಿಕೆ ಮಾಡಲು 28 ಕಂಪನಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ, ಮುಖ್ಯಮಂತ್ರಿಗಳು ಗಣಿಗಾರಿಕೆಗೆ ಅವಕಾಶ ಕೊಡದೇ ತಿರಸ್ಕರಿಸಿದ್ದು ಖುಷಿ ತಂದಿದೆ. ಸೋಡಿಯಂ ಸೈನಡ್ ಹಾಕಿ ಗಣಿಗಾರಿಕೆ ಮಾಡುವದರಿಂದ ತುಂಗಭದ್ರ ನದಿಗೆ ಈ ವಿಷ ಸೇರುವುದು ಪಕ್ಕಾ. ಹೀಗಾಗಿ ನಾನು ಕಪ್ಪತ್ತಗುಡ್ಡದ ಕಾವಲುಗಾರನಾಗಿದ್ದೇನೆ. – ಶಿವಕುಮಾರ ಸ್ವಾಮೀಜಿ, ನಂದಿವೇರಿಮಠ, ಕಪ್ಪತ್ತಗುಡ್ಡ.

ಧಾರವಾಡದ ಪರಿಸರವನ್ನಾದರೂ ಉಳಿಸಿಕೊಳ್ಳಲು ಈಗಲೇ ಯೋಜನೆ ರೂಪಿಸಬೇಕು. ಇಲ್ಲಿನ ಕೆರೆಗಳ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿದೆ.ಮುಂದಿನ ಪೀಳಿಗೆಗೆ ಸುಂದರ ಧಾರವಾಡ ಮರುಸೃಷ್ಠಿ ಅಗತ್ಯ. –ಸುರೇಶ ಹೆಬ್ಳಿಕರ್, ಚಿತ್ರನಟ, ಪರಿಸರವಾದಿ.

ಟಾಪ್ ನ್ಯೂಸ್

9-kateel

Kateelu ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿಯ ಆರಾಧನೆ

haryana

Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಕಿಡಿ

8-vijayanagara

Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು

Eshwarappa

Gadag: ಆರ್‌ಸಿ ಬ್ರಿಗೇಡ್​ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್‌ ಸಮಾವೇಶ: ಈಶ್ವರಪ್ಪ

4

Tollense Valley: ಬಾಣದ ಮೊನೆಯಂಚು ಹುಡುಕುತ್ತಾ.. ಸುಂದರ ಜಾಗದ ಹಿಂದಿದೆ ರಕ್ತಸಿಕ್ತ ಇತಿಹಾಸ

Bangladesh Cricket: Another senior player announced his farewell in the midst of the India series

Bangladesh Cricket: ಭಾರತ ಸರಣಿಯ ನಡುವೆ ವಿದಾಯ ಘೋಷಿಸಿದ ಮತ್ತೊಬ್ಬ ಹಿರಿಯ ಆಟಗಾರ

Election Result: No faith in the exit poll survey…: DK Shivakumar

Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Result: No faith in the exit poll survey…: DK Shivakumar

Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್

mutalik (2)

Israel ಮಾದರಿಯಲ್ಲಿ ಹೊರ ಮತ್ತು ಆಂತರಿಕ ಶತ್ರುಗಳ ವಿರುದ್ಧ ಹೋರಾಡಬೇಕು : ಮುತಾಲಿಕ್

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

BY Vijayendra’s contribution is to talk lightly about those who worked for the party says KS Eshwarappa

Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

10-kottigehara

Kottigehara: ಕಾಳಿಂಗ ಸರ್ಪ ಸೆರೆ

9-kateel

Kateelu ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿಯ ಆರಾಧನೆ

Kaup: ನಾಡಹಬ್ಬದಂತೆ ಕಂಗೊಳಿಸುವ ಉಚ್ಚಿಲ ದಸರಾ: ಪೇಜಾವರ ಶ್ರೀ

Kaup: ನಾಡಹಬ್ಬದಂತೆ ಕಂಗೊಳಿಸುವ ಉಚ್ಚಿಲ ದಸರಾ: ಪೇಜಾವರ ಶ್ರೀ

haryana

Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಕಿಡಿ

PDO misappropriation of lakhs of rupees: File a complaint

Davanagere: ಲಕ್ಷಾಂತರ ರೂ. ಹಣ ದುರುಪಯೋಗ ಮಾಡಿದ ಪಿಡಿಒ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.