![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 7, 2024, 12:48 PM IST
ಧಾರವಾಡ: ಎನ್.ಡಿ.ಆರ್.ಎಫ್ ನಿಯಮದ ಅನ್ವಯ ರಾಜ್ಯದ ರೈತರಿಗೆ ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್ ಪಾಟೀಲ್ ನಡಹಳ್ಳಿ ಆಗ್ರಹಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಸಿಎಂ ಆದಾಗಿನಿಂದ ರಾಜ್ಯದಲ್ಲಿ ಬರಗಾಲ ಬಂದಿದೆ. ರಾಜ್ಯದ ಎಲ್ಲಾ ಮಂತ್ರಿಗಳು ರೈತರ ಹೊಲಕ್ಕೆ ಭೇಟಿ ಕೊಟ್ಟಿಲ್ಲ. ಸರ್ಕಾರ ಬರವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದರು.
ಸರ್ಕಾರಕ್ಕೆ ನಾಚಿಕೆಯಿಲ್ಲ. 2 ರೂ. ಕೆಜಿ ಮೇವು ಕೊಳ್ಳಲು ರೈತರಿಗೆ ಆಗುತ್ತಿಲ್ಲ. ಇದು ಬರ ನಿರ್ವಹಣೆ ಕ್ರಮ ಅಲ್ಲ. ದನಕರುಗಳಿಗೆ ಕುಡಿಯುವ ನೀರಿಲ್ಲ. ಬೆಳೆ ನಷ್ಟದ ಹಾನಿ ಅಧ್ಯಯನ ಮಾಡುತ್ತಿಲ್ಲ ಎಂದರು.
ಮಾವು ಬೆಳೆಗೆ 4000 ರೂ ವಿಮೆ ಕೊಟ್ಟಿದೆ. ಇದಕ್ಕೆ 3000 ಪರಿಹಾರ ನೀಡುತ್ತಿಲ್ಲ. ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ 20 ಸಾವಿರ ಬೆಳೆಹಾನಿ ನೀಡಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರ 2 ಸಾವಿರ ರೂ. ಮಾತ್ರ ನೀಡುತ್ತಿದೆ. ಇದು ನಾಚಿಕೆಗೇಡಿನ ಸಂಗತಿ ಎಂದರು.
ಸಿದ್ದು ಮಂಡನೆ ಮಾಡಿದ ಎಲ್ಲಾ ಬಜೆಟ್ ಗಳು ರೈತ ವಿರೋಧಿ ಎಂದು ಆಪಾದಿಸಿದರು.
ಕಳಸಾ-ಬಂಡೂರಿ ವಿವಾದ ಮಾತುಕತೆ ಮುಖಾಂತರ ಪರಿಹಾರಕ್ಕೆ ಯತ್ನ ಮಾಡಲಾಗುವುದು. ಭವಿಷ್ಯದಲ್ಲಿ ಪರಿಹಾರ ಆಗಿಯೇ ಆಗುತ್ತದೆ ಎಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.