ಕಾರ್ಯಕ್ರಮಗಳ ಸುಗ್ಗಿ..ಕಲಾವಿದರಿಗೆ ಹುಗ್ಗಿ!

ಎರಡೇ ತಿಂಗಳಲ್ಲಿ 220 ಕಾರ್ಯಕ್ರಮ ; 31ರವರೆಗೆ ಎಲ್ಲಾ ಸಭಾಂಗಣಗಳು ಬುಕ್‌; ಧನಸಹಾಯಕ್ಕೆ ಕಾರ್ಯಕ್ರಮ ಕಡ್ಡಾಯ

Team Udayavani, Dec 16, 2022, 3:56 PM IST

18

ಧಾರವಾಡ: ತುಂಬಿ ತುಳುಕುತ್ತಿರುವ ಧಾರಾನಾಗರಿಯ ಸಭಾಂಗಣಗಳು, ವಿವಿಧ ಕಾರ್ಯಕ್ರಮಗಳಲ್ಲಿ ಮಿಂಚುತ್ತಿರುವ ಕಲಾವಿದರು, ಚಿಮ್ಮುತ್ತಿರುವ ಕಲಾ ಉತ್ಸಾಹ, ಹೊಮ್ಮುತ್ತಿರುವ ಸಾಂಸ್ಕೃತಿಕ ವಾತಾವರಣ. ಒಟ್ಟಿನಲ್ಲಿ ಕಾರ್ಯಕ್ರಮಗಳ ಸುಗ್ಗಿ ಕಲಾವಿದರಿಗೆ ಒಂದಿಷ್ಟು ಹುಗ್ಗಿ.

ಹೌದು. ಕಳೆದೊಂದು ತಿಂಗಳಿಂದ ಸಾಂಸ್ಕೃತಿಕ ನಗರಿ ಧಾರವಾಡದಲ್ಲಿ ಬಿಟ್ಟೂ ಬಿಡದೆ ಕಾರ್ಯಕ್ರಮಗಳು ಎಲ್ಲಾ ಸಭಾ ಭವನಗಳಲ್ಲಿಯೂ ಲಗ್ಗೆ ಹಾಕಿದ್ದು, ಈ ಹಿಂದೆ ಎಂದೂ ಧಾರವಾಡದಲ್ಲಿ ನಡೆಯದಷ್ಟು ಸಾಂಸ್ಕೃತಿ ಕಾರ್ಯಕ್ರಮಗಳು ಡಿಸೆಂಬರ್‌ ಇಡೀ ತಿಂಗಳಿನಲ್ಲಿ ನಿಗದಿಯಾಗಿವೆ. ಇದಕ್ಕೇನು ಕಾರಣವಿರಬಹುದು ಎಂದು ನೀವು ಕೇಳಬಹುದು. ಇದಕ್ಕೆ ಕಾರಣವಾಗಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊರಡಿಸಿರುವ ನೂತನ ಆದೇಶ.

ವರ್ಷಪೂರ್ತಿ ಕಲೆ, ಜಾನಪದ, ಸಾಂಸ್ಕೃತಿಕ ಸೊಗಡಿನ ಕಾರ್ಯಕ್ರಮಗಳನ್ನು ಮಾಡಿ ಅದನ್ನು ಸರ್ಕಾರಕ್ಕೆ ವರದಿ ಮಾಡಿ ಅನುದಾನ ಪಡೆದುಕೊಳುತ್ತಿದ್ದ ಸಂಘ-ಸಂಸ್ಥೆಗಳಿಗೆ ಈ ವರ್ಷ ಇನ್ನು ಅನುದಾನ ಬಿಡುಗಡೆಯಾಗಿಲ್ಲ. ಇದೀಗ ಅನುದಾನ ಬೇಕೆಂದರೆ 2022 ಡಿ.31ರೊಳಗೆ ಕನಿಷ್ಠ ಮೂರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಿ ಅದರ ವರದಿಯನ್ನು ಸರ್ಕಾರಕ್ಕೆ ಆನ್‌ಲೈನ್‌ ಮೂಲಕ ಸಲ್ಲಿಸಬೇಕಿದೆ. ಅಂತಹವರಿಗೆ ಮಾತ್ರ ಸಂಸ್ಕೃತಿ ಇಲಾಖೆ ಅನುದಾನ ನೀಡಲಿದೆಯಂತೆ. ಹೀಗಾಗಿ ಸಾಂಸ್ಕೃತಿ ಕಾರ್ಯಕ್ರಮಗಳ ಸುಗ್ಗಿಯೇ ಆರಂಭಗೊಂಡಿದೆ.

ತಿಂಗಳಲ್ಲಿ 220 ಕಾರ್ಯಕ್ರಮ: ಧಾರವಾಡದಲ್ಲಿ ವರ್ಷಪೂರ್ತಿ ಕನಿಷ್ಠ 500ಕ್ಕೂ ಅಧಿಕ ಕಾರ್ಯಕ್ರಮಗಳು ನಡೆಯುತ್ತವೆ. ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿಯೇ 200ಕ್ಕೂ ಅಧಿಕ ಕಾರ್ಯಕ್ರಮಗಳು ಪ್ರತಿವರ್ಷ ಪೂರ್ವ ನಿಯೋಜನೆಗೊಂಡಿರುತ್ತವೆ. ಇನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಲೂ 200ಕ್ಕೂ ಅಧಿಕ ಕಾರ್ಯಕ್ರಮ ಇದ್ದೇ ಇರುತ್ತವೆ. ಆದರೆ ಇದೀಗ ಕೇವಲ ನವೆಂಬರ್‌- ಡಿಸೆಂಬರ್‌ ತಿಂಗಳಿನಲ್ಲಿಯೇ ಬರೋಬ್ಬರಿ 200ಕ್ಕೂ ಅಧಿಕ ಕಾರ್ಯಕ್ರಮಗಳು ವಿವಿಧ ಸಂಘ ಸಂಸ್ಥೆಗಳಿಂದ ಜಿಲ್ಲೆಯಲ್ಲಿ ನಿಯೋಜನೆಗೊಂಡಿವೆ.

ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅನುದಾನ ಪಡೆಯಲು ಯೋಗ್ಯ ಇರುವ ಒಟ್ಟು 78 ಸಂಘ ಸಂಸ್ಥೆಗಳಿವೆ. ಇವುಗಳ ಕಾರ್ಯವೈಖರಿಯನ್ನು ಪರಿಶೀಲನೆ ಮಾಡಿ ಸರ್ಕಾರವೇ ಅಧಿಕೃತವಾಗಿ ಈ ಸಂಘ- ಸಂಸ್ಥೆಗಳಿಗೆ ಅನುದಾನ ನೀಡಲು ಒಪ್ಪಿದೆ. ಇಂತಹ ಸಂಘ- ಸಂಸ್ಥೆಗಳಿಗೆ ಇದೀಗ 2022ನೇ ಸಾಲಿನಲ್ಲಿ ಕನಿಷ್ಠ ಮೂರು ಕಾರ್ಯಕ್ರಮ ಆಯೋಜಿಸಬೇಕಿದೆ. ಇನ್ನು ಕೆಲವು ಸಂಸ್ಥೆಗಳು 5-8 ಕಾರ್ಯಕ್ರಮ ಮಾಡಿದ್ದು, ಅದರ ಪತ್ರಿಕಾ ವರದಿಯನ್ನು ಸರ್ಕಾರಕ್ಕೆ ಆನ್‌ಲೈನ್‌ ಮೂಲಕ ವರದಿ ಮಾಡುವಂತೆ ಸೂಚಿಸಲಾಗಿದೆ.

ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ, ರಾ.ಹ.ದೇಶಪಾಂಡೆ, ಪಾಟೀಲ ಸಭಾಂಗಣ, ರಂಗಾಯಣ, ಕನ್ನಡ ಸಾಹಿತ್ಯ ಪರಿಷತ್ತು, ಆಲೂರು ವೆಂಕಟರಾವ್‌ ಭವನ, ಸೃಜನಾ ರಂಗಮಂದಿರಗಳು ಡಿ.31ರವರೆಗೂ ಹೆಚ್ಚು ಕಡಿಮೆ ಕಾರ್ಯಕ್ರಮಗಳಿಂದ ಬುಕ್‌ ಆಗಿವೆ. ಅಷ್ಟೇಯಲ್ಲ, ಪ್ರತಿದಿನ ಬೆಳಗ್ಗೆ-ಸಂಜೆ ಎರಡೂ ಹೊತ್ತು ಕಾರ್ಯಕ್ರಮಗಳು ನಿಯೋಜನೆಗೊಂಡಿರುವುದು ವಿಶೇಷ.

ಏನೇನು ಕಾರ್ಯಕ್ರಮ?

ಸಾಮಾನ್ಯವಾಗಿ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒಳಗೊಂಡಿರುತ್ತದೆ. ಜಾನಪದ ಕಲೆಗಳ ಪ್ರದರ್ಶನ, ಸಂಗೀತ, ನೃತ್ಯ, ದೇಸಿ ಕಲೆಗಳು, ಪ್ರಶಸ್ತಿ ಪ್ರದಾನ, ಗೀತ ಗಾಯನ, ನಾಟಕಗಳು, ದೊಡ್ಡಾಟ, ಸಣ್ಣಾಟ, ಕೃಷ್ಣ ಪಾರಿಜಾತ, ಗೀತ ರೂಪಕಗಳು ಸೇರಿದಂತೆ ನಾನಾ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ವಿವಿಧ ಸಾಧಕರನ್ನು ಕರೆಯಿಸಿ ಕಾರ್ಯಕ್ರಮ ಆಯೋಜಿಸುತ್ತಿವೆ. ಅಷ್ಟೇಯಲ್ಲ ಕೆಲವು ಸಂಘಟನೆಗಳು ಕಲಾ ಶ್ರೇಷ್ಠರಿಗೆ ತಮ್ಮ ಸಂಸ್ಥೆಗಳ ಹೆಸರಿನಲ್ಲಿ ಪ್ರಶಸ್ತಿ, ಗೌರವ ಸನ್ಮಾನ ಏರ್ಪಡಿಸುತ್ತಿವೆ.

ತಾಲೂಕು ಕೇಂದ್ರ, ಗ್ರಾಮಗಳಲ್ಲೂ ಕಲರವ

ಧಾರವಾಡ-ಹುಬ್ಬಳ್ಳಿ ಹೊರತುಪಡಿಸಿ ವಿವಿಧ ತಾಲೂಕು ಕೇಂದ್ರಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆ ಆಗಿವೆ. ಕುಂದಗೋಳ, ನವಲಗುಂದ, ಕಲಘಟಗಿ, ಅಳ್ನಾವರ, ಅಣ್ಣಿಗೇರಿಯಲ್ಲೂ ತಾಲೂಕು ಮಟ್ಟದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿವಿಧ ಸಾಂಸ್ಕೃತಿಕ ಸಂಘ-ಸಂಸ್ಥೆಗಳು ಆಯೋಜಿಸಿವೆ. ಸಾಲದಕ್ಕೆ ಗ್ರಾಮಗಳ ಅಂಗಳಕ್ಕೂ ಕಾಲಿಟ್ಟಿದ್ದು, ಅಲ್ಲಿಯೂ ಹಳ್ಳಿ ಸಂಪ್ರದಾಯ, ಕಲಾ ಪ್ರಕಾರಗಳನ್ನು ಉಳಿಸಿ-ಬೆಳೆಸುವುದಕ್ಕೆ ಪೂರಕವಾದ ಕಾರ್ಯಕ್ರಮ ಆಯೋಜಿಸಲಾಗಿದೆ.

ಮೊದಲು ಕಾರ್ಯಕ್ರಮ ನಂತರ ಧನ ಸಹಾಯ

ಕೊರೊನಾ ಮಹಾಮಾರಿ ಹೊಡೆತ ಸೇರಿ ಕಳೆದ ಮೂರು ವರ್ಷಗಳಿಂದ ಸರ್ಕಾರ ಸಾಂಸ್ಕೃತಿಕ ಸಂಘ- ಸಂಸ್ಥೆಗಳಿಗೆ ಸರಿಯಾಗಿ ಅನುದಾನ ನೀಡಿಲ್ಲ. ಇನ್ನು ನೀಡಿದ ಅನುದಾನವನ್ನು ಸಂಘ-ಸಂಸ್ಥೆಗಳು ಸರಿಯಾಗಿ ಬಳಸಿಕೊಂಡು ಉತ್ತಮ ಕಾರ್ಯಕ್ರಮಗಳನ್ನು ಮಾಡಿಲ್ಲ. ಕೆಲವು ಪಟ್ಟಭದ್ರರು ಬರೀ ಅನುದಾನ ಪಡೆದು ನಾಮಕಾವಾಸ್ತೆ ಕಾರ್ಯಕ್ರಮ ಮಾಡಿ ಹಣ ಲೂಟಿ ಮಾಡಿದ್ದಾರೆ ಎನ್ನಲಾಗಿದೆ. ಇದನ್ನು ತಪ್ಪಿಸಲು ಇದೀಗ ಸರ್ಕಾರ ಕಠಿಣ ನಿಲುವು ತಳೆದಿದೆ. ಮೊದಲು ಹಣ ನೀಡಿ ಕಾರ್ಯಕ್ರಮ ಮಾಡಲು ಹೇಳುತ್ತಿದ್ದ ಸರ್ಕಾರ, ಇದೀಗ ಕಾರ್ಯಕ್ರಮ ಮಾಡಿ ದಾಖಲೆ ಕೊಟ್ಟ ನಂತರ ಹಣ ನೀಡುವ ನಿಯಮ ಜಾರಿಗೊಳಿಸಿದೆ. ಇದು ಅನೇಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಸತತ 20 ವರ್ಷಗಳಿಂದ ನಾವು ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ ಮಾಡಿಕೊಂಡು ಬಂದಿದ್ದೇವೆ. ಆದರೆ ಕಳೆದ ಎರಡು ವರ್ಷ ನಮ್ಮ ಸಂಸ್ಥೆಗೆ ಅನುದಾನವನ್ನೇ ನೀಡಿಲ್ಲ. ನಕಲಿ ಸಂಘಟನೆಗಳೇ ರಾರಾಜಿಸುತ್ತಿದ್ದು, ನಿಜವಾದ ಕಲಾ ಆರಾಧಕರಿಗೆ ಸರ್ಕಾರ ಧನಸಹಾಯ ನೀಡಿ ಬೆಂಬಲಿಸಬೇಕು. ಮಲ್ಲೇಶ ಹುಲಿಗೌಡರ ಜಾನಪದ ಕಲಾವಿದ.

ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅರ್ಹ ಸಂಘ-ಸಂಸ್ಥೆಗಳಿಗೆ ಸೂಚಿಸಲಾಗಿದೆ. ಈ ಹಿಂದಿನ ವರ್ಷಗಳಲ್ಲಿ ಅನುದಾನ ಪಡೆದು ಕಾರ್ಯಕ್ರಮ ಮಾಡದೇ ಗೋಲ್‌ಮಾಲ್‌ ಮಾಡಿದ ಹಿನ್ನೆಲೆಯಲ್ಲಿ ಈ ಬಾರಿ ಇಲಾಖೆ ಕಟ್ಟುನಿಟ್ಟಾಗಿ ಸಂಘ-ಸಂಸ್ಥೆಗಳ ಕಾರ್ಯವೈಖರಿಯನ್ನು ವರೆಗೆ ಹಚ್ಚಬೇಕಿದೆ.  –ಕುಮಾರ್‌ ಬೆಕ್ಕೇರಿ, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಧಾರವಾಡ.

-ಡಾ|ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.