ಕೊಳ್ಳೆ ಹೊಡೆದ್ಮೇಲೆ ಕೋಟೆ ಬಾಗ್ಲಾಕಿದ್ರು!


Team Udayavani, Apr 16, 2018, 4:18 PM IST

16-April-21.jpg

ಧಾರವಾಡ: ಕೋಟೆಯನ್ನು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎನ್ನುವ ಗಾದೆ ಮಾತು ಸದ್ಯಕ್ಕೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿನ ಚುನಾವಣಾ ಅಕ್ರಮ ಚಟುವಟಿಕೆಗಳಿಗೆ ಅನ್ವಯವಾಗುವಂತಿದೆ.

ಹೌದು, ಚುನಾವಣೆಯಲ್ಲಿ ಹಣ, ಹೆಂಡದ ಹೊಳೆ ಹರಿಸುವುದನ್ನು ತಪ್ಪಿಸಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಆದರೆ ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾಗುವುದಕ್ಕೂ ಮುಂಚೆಯೇ ಕಿಲಾಡಿ ರಾಜಕಾರಣಿಗಳು ತಮ್ಮ ಮತಬ್ಯಾಂಕ್‌ನ್ನು ಭದ್ರ ಪಡಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಅಕ್ರಮ ಚಟುವಟಿಕೆಗಳನ್ನು ಮಾಡಿ ಮುಗಿಸಿದಂತೆ ಭಾಸವಾಗುತ್ತಿದೆ.

ಧಾರವಾಡ ಗ್ರಾಮೀಣ ಕ್ಷೇತ್ರದ ಪ್ರಭಾವಿ ಅಭ್ಯರ್ಥಿಯೊಬ್ಬರು ಸೀರೆ ಹಂಚಿಕೆ ಮಾಡಿದ್ದರೆ, ತಮಗೆ ಟಿಕೇಟ್‌ ಸಿಕ್ಕುವುದು ನಿಶ್ಚಿತ ಎನ್ನುವ ಆಧಾರದ ಮೇಲೆಯೇ ಇನ್ನೊಬ್ಬ ಅಭ್ಯರ್ಥಿ ಗ್ರಾಮದ ಮುಖಂಡರಿಗೆ ಮತ್ತು ಪಕ್ಷಗಳ ಮುಖಂಡರಿಗೆ ಚಿನ್ನ ಬೆಳ್ಳಿ ಆಭರಣಗಳನ್ನು ಮುಟ್ಟಿಸಿದ್ದಾರೆ.

ಖಾಸಗಿ ಕಾರ್ಯಕ್ರಮಗಳಿಗೆ ಆಮಂತ್ರಣ ನೀಡಿ ಅದನ್ನೇ ತಮ್ಮ ಮತ ಬ್ಯಾಂಕ್‌ ಆಗಿ ಪರಿವರ್ತಿಸಿಕೊಂಡವರು ಒಬ್ಬರಾದರೆ, ತಮ್ಮ ಒಡೆತನದ ಭೂದಾನಕ್ಕೆ ಪರ್ಯಾಯವಾಗಿ ಬರುವ ಹಣವನ್ನೇ ಆಯಾ ಗ್ರಾಮಗಳ ಚುನಾವಣೆಯಲ್ಲಿ ಮತ ಕೊಳ್ಳಲು ಬಳಸಿಕೊಳ್ಳುವ ಹುಕುಂ ನೀಡಿದ್ದಾರೆ.

ಸ್ತ್ರೀ ಶಕ್ತಿ ಸಂಘಟನೆಗಳು ಬುಕ್‌: ಎಲ್ಲಾ ಕ್ಷೇತ್ರಗಳಲ್ಲೂ ಇದೀಗ ಶೇ.50 ರಷ್ಟು ಮತದಾರರು ಮಹಿಳೆಯರೇ ಇದ್ದು, ಇಲ್ಲಿ ಅತ್ಯಂತ ವಿಶ್ವಾಸಾರ್ಹ ಮತ ಗಳಿಕೆ ಸಾಧ್ಯ ಎನ್ನುವುದು ಎಲ್ಲಾ ಪಕ್ಷಗಳ ಅಭ್ಯರ್ಥಿಗಳಿಗೂ ತಿಳಿದ ಸತ್ಯ. ಹೀಗಾಗಿ ಎಲ್ಲಾ ರಾಜಕಾರಣಿಗಳು ತಮ್ಮ ಪತ್ನಿಯರ ಮೂಲಕ ಸ್ತ್ರೀಶಕ್ತಿ ಗುಂಪುಗಳ ಮತದಾರರನ್ನು ಸೆಳೆಯುತ್ತಿದ್ದು, ಪ್ರಚಾರದ ಜೊತೆಗೆ ತಮ್ಮ ಪಕ್ಷಕ್ಕೆ ಮತ ನೀಡುವಂತೆ ಹಣ ಪೂರೈಸುತ್ತಿದ್ದಾರೆ. ಪ್ರತಿ ಗ್ರಾಮಗಳಲ್ಲೂ ಕನಿಷ್ಠ 25ರಷ್ಟು ಸ್ತ್ರೀಶಕ್ತಿ ಸಂಘಗಳು ತುಂಬಾ ಚಟುವಟಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದು ಅವುಗಳನ್ನು ಇದೀಗ ಮತ ಬ್ಯಾಂಕ್‌ ಆಗಿ
ಬಳಸಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ 4500 ಕ್ಕೂ ಅಧಿಕ ಸ್ತ್ರೀಶಕ್ತಿ ಸಂಘಟನೆಗಳು ಅಸ್ತಿತ್ವದಲ್ಲಿದ್ದು, ಪ್ರತಿ ಸಂಘದಲ್ಲೂ ಕನಿಷ್ಠ 25 ಜನ ಮಹಿಳೆಯರು ಮತ್ತು ಅದಕ್ಕಿಂತಲೂ ಹೆಚ್ಚು ಸದಸ್ಯರು ಇದ್ದು ಹಣಕಾಸು ಚಟುವಟಿಕೆಯಲ್ಲಿ ತೊಡಗಿದ್ದಾರೆ.

ಗುತ್ತಿಗೆದಾರರೇ ಬ್ಯಾಂಕ್‌: ಮತಬೇಟೆಗಾಗಿ ರಾಜಕಾರಣಿಗಳು ಹಣ ಹಂಚುವುದಕ್ಕೆ ಇದೀಗ ಅನೇಕ ಅಡ್ಡ ದಾರಿಗಳನ್ನು ಹಿಡಿದಿದ್ದಾರೆ. ನೇರವಾಗಿ ಹಣ ಸಾಗಿಸುವುದಕ್ಕೆ ಇರುವ ತೊಂದರೆಗಳನ್ನು ತಿಳಿದ ರಾಜಕಾರಣಿಗಳು, ತಮ್ಮ ಆಪ್ತರಾಗಿದ್ದುಕೊಂಡು ಪಕ್ಷದ ಕಾರ್ಯಕರ್ತರೂ ಆಗಿರುವ ಗುತ್ತಿಗೆದಾರರನ್ನು ಆಯಾ ಹೋಬಳಿ,ಗ್ರಾಮ ಮಟ್ಟದಲ್ಲಿ ಹಣ ಪೂರೈಸುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ.

ತಮ್ಮ ಖಾತೆಗಳಲ್ಲಿನ ಹಣವನ್ನು ಗುತ್ತಿಗೆದಾರರು ಮೊದಲು ಚುನಾವಣೆಯಲ್ಲಿ ಹಂಚಿಕೆ ಮಾಡಿ ಮತ ಕೀಳಬೇಕು. ನಂತರ ಅವರಿಗೆ ಅಭ್ಯರ್ಥಿಗಳಿಂದ ಹಣ ಸಂದಾಯವಾಗುತ್ತದೆ.

ಫಿಕ್ಸ್‌ ಆಗಿವೆ ದಾಬಾಗಳು: ನೂರಾರು ಸಂಖ್ಯೆಯಲ್ಲಿ ಪಕ್ಷಗಳ ಕಾರ್ಯಕರ್ತರು ಸೇರಿ ಊಟ ಮಾಡುವ ಪದ್ಧತಿಯನ್ನು ಚುನಾವಣಾ ಆಯೋಗ ಕಠಿಣ ಕ್ರಮಗಳ ಮೂಲಕ ತಡೆ ಹಿಡಿದಿದೆ. ಅದಕ್ಕಾಗಿ ಇದೀಗ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಚುನಾವಣಾ ರ್ಯಾಲಿ, ಕ್ಯಾಂಪೇನ್‌ ಮತ್ತು ಅಭ್ಯರ್ಥಿಗಳ ಪರ ಪ್ರಚಾರ ಮಾಡುವವರಿಗೆ ಮತ್ತು ಮತದಾರರಿಗೆ ನೇರವಾಗಿ ಹೊಟೇಲ್‌ಗ‌ಳು, ದಾಬಾಗಳು ಮತ್ತು ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳ ಮೂಲಕವೇ ಆಹಾರ ಪೂರೈಸುತ್ತಿವೆ.

ಪಕ್ಷದ ಮುಖಂಡರ ಉದ್ರಿ ಖಾತೆ ಕೂಡ ಅವಳಿ ನಗರದ ಹೊರವಲಯದ ದಾಬಾಗಳಲ್ಲಿ ತೆರೆಯಲಾಗಿದ್ದು,ಅಭ್ಯರ್ಥಿಗಳು ಒಂದೇ ಸಮಯಕ್ಕೆ ಹಣ ಪೂರೈಸುತ್ತಿದ್ದಾರೆ.

ಹುಟ್ಟು ಹಬ್ಬಗಳಲ್ಲೂ ಊಟ: ರಾಷ್ಟ್ರೀಯ ಪಕ್ಷಗಳ ಕೆಲವು ಮುಖಂಡರು ತಮ್ಮ ಬೆಂಬಲಿಗರ ಮಕ್ಕಳ ಹುಟ್ಟಿದ ಹಬ್ಬ ಆಚರಿಸುವ ನೆಪದಲ್ಲಿ ಕಾರ್ಯಕರ್ತರಿಗೆ ಭೋರಿ ಭೋಜನದ ವ್ಯವಸ್ಥೆ ಮಾಡುತ್ತಿದ್ದಾರೆ. ಆದರೆ ಈ ಸಂಬಂಧ ಚುನಾವಣಾಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳದೇ ಇರುವುದು ಮಾತ್ರ ಪ್ರಜ್ಞಾವಂತ ಮತದಾರರಿಗೆ ಬೇಸರ ತರಿಸಿದೆ.

ಚೆಕ್‌ಪೋಸ್ಟ್‌ಗಳಲ್ಲಿ ಮಾತ್ರ ಅಕ್ರಮ ಹಣ, ಸಾರಾಯಿ ಸಾಗಾಣಿಕೆ ತಪಾಸಣೆ ನಡೆಸುವ ಪೊಲೀಸರಿಗೆ ಕಿಲಾಡಿ ರಾಜಕಾರಣಿಗಳು ಚಳ್ಳೆಹಣ್ಣು ತಿನ್ನಿಸಿ ತಮ್ಮ ಮತ ಬ್ಯಾಂಕ್‌ಗೆ ಅಗತ್ಯವಾದ ಹಣ, ಹೆಂಡ, ಕಾಣಿಕೆಗಳನ್ನು ಪರೋಕ್ಷ ಮಾರ್ಗಗಳ ಮೂಲಕ ತಲುಪಿಸಿಯಾಗಿದೆ. ಇನ್ನೂ ಕೆಲವು ಕಡೆ ತಲುಪಿಸುತ್ತಲೂ ಇದ್ದಾರೆ. ಆದರೆ ಇದನ್ನು ತಡೆಯುವುದು ಹೇಗೆ ? ಎಂದು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ ಅಷ್ಟೇ.

ಬಸವ ಜಯಂತಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಜಾತ್ರೆಗಳು, ರಥೋತ್ಸವದ ಸುಗ್ಗಿಕಾಲ. ಇದನ್ನೇ ಚುನಾವಣೆ ಮತ ಸೆಳೆಯುವ ವೇದಿಕೆ ಮಾಡಿಕೊಂಡ ಅಭ್ಯರ್ಥಿಗಳು ಗ್ರಾಮಗಳ ಕುಲ ಬಾಂಧವರ ಮೂಲಕ ಜಾತ್ರೆ ಮತ್ತು ರಥೋತ್ಸವಕ್ಕೆ ಪರೋಕ್ಷವಾಗಿ ಕಾಣಿಕೆ ನೀಡಿ ಮತ ಬ್ಯಾಂಕ್‌ ಭದ್ರಪಡಿಸಿಕೊಳ್ಳುತ್ತಿದ್ದಾರೆ. ಯುವಕ ಸಂಘಟನೆಗಳಿಗೆ ವಾಲಿಬಾಲ್‌, ಕ್ರಿಕೆಟ್‌ ಆಟದ ಸೆಟ್‌ ಸೇರಿದಂತೆ ಅನೇಕ ಆಮಿಷಗಳನ್ನು ಒಡ್ಡಿದರೆ, ಭಜನಾ ಸಂಘದವರಿಗೆ ಭಜನಾ ಉಪಕರಣ, ಡೊಳ್ಳು,ಜಾಂಜ್‌ ಉಪಕರಣಗಳನ್ನು ಕೊಳ್ಳಲು ಪರೋಕ್ಷವಾಗಿ ಗ್ರಾಮದ ಮುಖಂಡರ ಹೆಸರಿನಲ್ಲಿ ಹಣ ಸಂದಾಯವಾಗುತ್ತಿದೆ.

ನೀತಿ ಸಂಹಿತೆ ಜಾರಿಯಾದಾಗಿನಿಂದ ಜಿಲ್ಲೆಯಲ್ಲಿ ಚುನಾವಣಾ ಅಕ್ರಮಗಳು ನಡೆಯದಂತೆ ಕ್ರಮ ಕೈಗೊಂಡಿದ್ದೇವೆ. ಒಂದು ವೇಳೆ ಇಂತಹ ಪ್ರಕರಣಗಳು ನಡೆದಿದ್ದು ಕಂಡು ಬಂದರೆ ಜಿಲ್ಲಾ ಚುನಾವಣಾಧಿಕಾರಿಗಳ ಜೊತೆಗೆ ಚರ್ಚಿಸಿ ಸಂಬಂಧಪಟ್ಟ ಅಭ್ಯರ್ಥಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ.
ಜಿ. ಸಂಗೀತಾ,
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.