ಜಿಲ್ಲಾಸ್ಪತ್ರೆ ಅಭಿವೃದ್ಧಿ ಕಾಮಗಾರಿ 3 ತಿಂಗಳಲ್ಲಿ ಮುಕ್ತಾಯ
Team Udayavani, Sep 8, 2017, 11:55 AM IST
ಧಾರವಾಡ: ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿರುವ ಕಟ್ಟಡ ಕಾಮಗಾರಿ ಮೂರು ತಿಂಗಳಲ್ಲಿ ಮುಕ್ತಾಯ ಆಗಲಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ನಗರದ ಜಿಲ್ಲಾಸ್ಪತ್ರೆಗೆ ಗುರುವಾರ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಆಸ್ಪತ್ರೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೆರಿಗೆಗೆ ಬಂದವರಿಗೆ ಕೊಂಚ ತೊಂದರೆ ಆಗುತ್ತಿದೆ. ಮೂರು ತಿಂಗಳ ನಂತರ ಕಾಮಗಾರಿ ಮುಗಿದ ಮೇಲೆ ಈ ಸಮಸ್ಯೆ ನಿವಾರಣೆಯಾಗಲಿದೆ ಎಂದರು. ನಮ್ಮ ಪಕ್ಷದ ಕಾರ್ಯಕರ್ತರಿಂದ ಮತ್ತು ಜನರಿಂದ ಹಲವಾರು ಬಾರಿ ಆಸ್ಪತ್ರೆ ಸ್ವತ್ಛತೆ ಕೊರತೆ ಹಾಗೂ ಸಿಬ್ಬಂದಿ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ.
ಈ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಆಸ್ಪತ್ರೆಗೆ ಆಗಮಿಸಿದ್ದೇನೆ. ಸದ್ಯ ಈಗ ಆಸ್ಪತ್ರೆಯಲ್ಲಿ ನೀಡುವ ಊಟ ಮತ್ತು ಚಿಕಿತ್ಸೆ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ ಎಂದು ಹೇಳಿದರು. ನೌಕರರು ರೋಗಿಗಳ ಬಳಿ ಹಣ ಕೇಳುವುದು ತಪ್ಪು. ಕೂಡಲೇ ಇದನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದೇನೆ. ಹೆರಿಗೆ ಕಿಟ್ ಕಳೆದ ಮೂರು ತಿಂಗಳಿಂದ ನೀಡುವುದನ್ನು ಬಂದ್ ಮಾಡಿದ್ದಾರೆ.
ಆದ್ದರಿಂದ ಜಿಲ್ಲೆಯ ಮಂತ್ರಿಗಳಿಗೆ ಮತ್ತು ಸರ್ಕಾರದ ಗಮನಕ್ಕೆ ತರುವ ಕಾರ್ಯ ಮಾಡುತ್ತೇನೆ. ಸರ್ಕಾರ ಈ ಯೋಜನೆಯನ್ನು ನಿಲ್ಲಿಸಬಾರದು. ಕಿಟ್ನ್ನು ಆಸ್ಪತ್ರೆಯಲ್ಲಿ ನೀಡುವ ವ್ಯವಸ್ಥೆ ಮಾಡಬೇಕು ಎಂದರು. ವೈದ್ಯಾಧಿಕಾರಿಗಳು ಹೇಳಿದಂತೆ ಆಸ್ಪತ್ರೆಯಲ್ಲಿ ನೀರು ಸರಿಯಾಗಿ ಬರುತ್ತಿಲ್ಲ. ಇದರಿಂದ ಹೆರಿಗೆ ಆದವರಿಗೆ ಬಿಸಿ ನೀರು ನೀಡಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇನೆ ಎಂದರು.
ಶಾಸಕರೆದುರು ದೂರು: ಈ ಸಂದರ್ಭದಲ್ಲಿ ತಾಲೂಕಿನ ಅಮ್ಮಿನಬಾವಿಯ ಮರೆವ್ವಾ ಹೊಸಮನಿ ಎಂಬುವರು ಜಿಲ್ಲಾಸ್ಪತ್ರೆಯಲ್ಲಿ ಆಗುತ್ತಿರುವ ಅವಾಂತರಗಳ ಬಗ್ಗೆ ಶಾಸಕರ ಗಮನ ಸೆಳೆದರು. ಕಳೆದ ಎರಡು ದಿನಗಳ ಹಿಂದೆ ಹೆರಿಗೆಗೆ ಆಗಮಿಸಿದ್ದ ಜ್ಯೋತಿ ಮದಗುಣಕಿ ಎಂಬ ಮಹಿಳೆಗೆ ಹಾಸಿಗೆ ನೀಡದೆ ಮತ್ತು ಸರಿಯಾದ ಚಿಕಿತ್ಸೆ ನೀಡದ್ದರಿಂದ ಹೊಟ್ಟೆಯಲ್ಲಿ ಮಗು ಮೃತಪಟ್ಟಿದೆ ಎಂಬುದಾಗಿ ವೈದ್ಯರು ಹೇಳುತ್ತಿದ್ದಾರೆ.
ಆಸ್ಪತ್ರೆಗೆ ಹೆರಿಗೆಗೆಂದು ಬಂದ ಮಹಿಳೆಯರಿಗೆ ಚಿಕಿತ್ಸೆ ನೀಡದೆ ಓಡಾಡಿಸುತ್ತಾರೆ ಎಂದು ದೂರಿದರು. ಅಲ್ಲದೇ, ಅಳ್ನಾವರದ ಮಹ್ಮದ ಅಜರೊದ್ದಿನ ಕಳ್ಳಿಮನಿ ಎಂಬುವರು ಮಾತನಾಡಿ, ಪತ್ನಿಗೆ ಹೆರಿಗೆಯಾಗಿದೆ, ಹಣ ನೀಡುವಂತೆ ಪೀಡಿಸುತ್ತಿದ್ದಾರೆ. ಬಿಸಿ ನೀರು ನೀಡದೆ ಸತಾಯಿಸುತ್ತಿದ್ದಾರೆ ಎಂದು ದೂರಿದರು.
ದೂರು ಆಲಿಸಿದ ಶಾಸಕರು ಸರಿಯಾದ ಚಿಕಿತ್ಸೆ ನೀಡುವಂತೆ ಜಿಲ್ಲಾ ಸರ್ಜನ್ ಡಾ| ಗಿರಿಧರ ಕುಕನೂರು ಅವರಿಗೆ ಸೂಚಿಸಿದರು. ಮುಖಂಡರಾದ ಪ್ರಕಾಶ ಗೋಡಬೋಲೆ, ಮೋಹನ ರಾಮದುರ್ಗ, ರಾಕೇಶ ನಾಝರೇ, ಬಸವರಾಜ ಹೊಸಳ್ಳಿ, ರಾಜು ಕೋಟೆಣ್ಣನವರ, ತುಳಸಾ ವಡ್ಡರ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.