![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Apr 19, 2022, 1:00 PM IST
ಧಾರವಾಡ: ಮಕ್ಕಳು ಕೇವಲ ಮನರಂಜನೆಯಲ್ಲಿ ಕಾಲಹರಣ ಮಾಡದೇ ಪುಸ್ತಕಗಳನ್ನು ಹೆಚ್ಚಾಗಿ ಓದುವ ಮೂಲಕ ಜ್ಞಾನವನ್ನು ಸಂಪಾದಿಸಬೇಕು ಎಂದು ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ ಹೇಳಿದರು.
ನಗರದಲ್ಲಿ ರಂಗಾಯಣವು ಹಮ್ಮಿಕೊಂಡಿದ್ದ ಚಿಣ್ಣರ ಮೇಳದ ರಂಗ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಂದಿನ ಜೀವನದ ಗುರಿಯನ್ನು ಮುಟ್ಟಲು ಅಧ್ಯಯನ ಮಾಡಬೇಕು. ಅಂದಾಗ ಮಾತ್ರವೇ ಉತ್ತಮ ವ್ಯಕ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಇಂದಿನ ಮಕ್ಕಳು ಆಧುನಿಕತೆ ಭರಾಟೆಯಲ್ಲಿ ಕೇವಲ ಮೊಬೈಲ್ಗಳಲ್ಲಿ ಕಳೆದು ಹೋಗಿದ್ದಾರೆ. ಇಂತಹ ಮಕ್ಕಳಿಗೆ ಹಳ್ಳಿಯ ಕುರಿತು ಪರಿಚಯ ನೀಡುವುದರ ಜತೆಗೆ ಮನರಂಜನೆಯನ್ನು ಧಾರವಾಡ ರಂಗಾಯಣ ನೀಡುತ್ತಿದೆ. ಈ ಶಿಬಿರದಲ್ಲಿ ಹೇಳಿಕೊಡುವ ಚಟುವಟಿಕೆಗಳು ಮಕ್ಕಳ ಮುಂದಿನ ಗುರಿ ತಲುಪಲು ಭದ್ರ ಬುನಾದಿಯಾಗಿದೆ ಎಂದು ಹೇಳಿದರು.
ಹಾಸ್ಯ ಕಲಾವಿದ ಬಸವರಾಜ ಮಹಾಮನಿ ಮಾತನಾಡಿ, ಮಕ್ಕಳು ತಮ್ಮ ಮುಂದಿನ ಭವಿಷ್ಯಕ್ಕಾಗಿ ಆತ್ಮಸ್ಥೈರ್ಯ ರೂಢಿಸಿಕೊಳ್ಳಬೇಕು. ಅಂತಹ ಆತ್ಮವಿಶ್ವಾಸವನ್ನು ಮಕ್ಕಳಲ್ಲಿ ಮೂಡಿಸಲು ಧಾರವಾಡ ರಂಗಾಯಣ ಹಳ್ಳಿಯ ಪರಿಚಯದ ವಿನೂತನ ಪ್ರಯೋಗ ಮಾಡಿದೆ. ಆವರಣದಲ್ಲಿ ಹಳ್ಳಿಯ ಸೊಗಡಿನ ವಾತಾವರಣ ಸೃಷ್ಟಿಸಿದೆ. ಮಕ್ಕಳು ಹಳ್ಳಿಯ ಕುರಿತು ತಿಳಿದುಕೊಳ್ಳಲು ಶಿಬಿರ ಸಹಕಾರಿಯಾಗಲಿದೆ ಎಂದರು.
ಮಕ್ಕಳಿಗಾಗಿ ಪರಿಸರ ಎಂಬ ವಿಷಯದ ಕುರಿತು ಕನ್ನಡ ಉಪನ್ಯಾಸಕ ಡಾ| ಶಿವಾನಂದ ಟವಳಿ ಮಾತನಾಡಿ, ಪರಿಸರದಲ್ಲಿರುವ ನೀರು, ಗಾಳಿ, ಪ್ರಕೃತಿ ಹೀಗೆ ಎಲ್ಲವೂ ಮನುಷ್ಯನ ಜೀವನಕ್ಕೆ ಬೇಕಾದಂತಹ ಅತ್ಯಮೂಲ ಜೀವಸಂಪನ್ಮೂಲಗಳಾಗಿವೆ. ಪ್ರತಿಯೊಬ್ಬರು ಇವುಗಳನ್ನು ಸಂರಕ್ಷಿಸಬೇಕು. ಪ್ರತಿಯೊಬ್ಬರು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವ ದಿನ ಒಂದು ಗಿಡವನ್ನು ನೆಡಬೇಕು. ನಮ್ಮ ಪ್ರಕೃತಿಯನ್ನು ಉಳಿಸಬೇಕು ಎಂದರು.
ಹಿರಿಯ ವಕೀಲರಾದ ಅರುಣ ಜೋಶಿ, ಮಲ್ಲಪ್ಪ ಹೊಂಗಲ ಇನ್ನಿತರರಿದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.