ಸೋರುತಿಹುದು ಸರ್ಕಾರಿ ಶಾಲೆ
Team Udayavani, Jul 8, 2018, 5:25 PM IST
ಅಂಕೋಲಾ: ಮಳೆ ಬಂತೆಂದರೆ ಸೋರುವ ಮೇಲ್ಛಾವಣಿ. ನೀರಿನ ತೇವಾಂಶಕ್ಕೆ ವಿದ್ಯುತ್ ಪ್ರವಹಿಸುವ ಗೋಡೆಗಳು. ನೀರಿನಲ್ಲೇ ಕುಳಿತು ಪಾಠ ಕೇಳುವ ಮಕ್ಕಳು. ಇದು ಪುರಲಕ್ಕಿಬೇಣ ಸರಕಾರಿ ಶಾಲೆ ದುಸ್ಥಿತಿ. ಶಾಲೆಯಲ್ಲಿ 1ನೇ ತರಗತಿಯಿಂದ 7ನೇ ತರಗತಿಯವರೆಗೆ ಸುಮಾರು 43 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಭಾಗದ ಶೇ. 90ರಷ್ಟು ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ
ಸೇರಿದವರಾಗಿದ್ದು, ಪಾಲಕರು ದಿನಗೂಲಿ ಮಾಡಿ ಮಕ್ಕಳನ್ನು ಓದಿಸುತಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಈ ಶಾಲೆ ಮೇಲ್ಛಾವಣಿ ಮಳೆಗಾಲದಲ್ಲಿ ಸಂಪೂರ್ಣ ಸೋರುತ್ತಿದೆ. ನೀರು ಕೊಠಡಿಯೊಳಗೆ ನುಗ್ಗುತ್ತಿದ್ದು, ಗೋಡೆಗಳು ನೀರಿನಿಂದ ತೋಯ್ದು ವಿದ್ಯುತ್ ಪ್ರವಹಿಸುತ್ತಿವೆ. ಹೀಗಾಗಿ ಕೆಲವೊಮ್ಮೆ ವಿದ್ಯುತ್ ಸಂಪರ್ಕ ಕಡಿತ ಮಾಡಿ ಪಾಠ ಮಾಡಲಾಗುತ್ತಿದೆ. ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ಪ್ರಾಣ ಭಯದಲ್ಲಿ ಮಕ್ಕಳು ಪಾಠ ಕೇಳುವಂತಾಗಿದೆ.
ಈ ಕೊಠಡಿ ದುರವಸ್ಥೆ ಕುರಿತು ಮೇಲಾಧಿಕಾರಿಗಳಿಗೂ ಮತ್ತು ಜನಪ್ರತಿನಿಧಿಗಳಿಗೂ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಮಳೆ ಬಂತೆಂದರೆ ಈ ಕಟ್ಟಡದ ಕೊಠಡಿಯಲ್ಲಿ ನೀರು ತುಂಬುತ್ತದೆ. ನೀರಿನಲ್ಲಿಯೇ ಮಕ್ಕಳಿಗೆ ಪಾಠ ಮಾಡುವ ಅನಿವಾರ್ಯತೆ
ಇಲ್ಲಿದೆ.
ಕೊಠಡಿ ದುಸ್ಥಿತಿ ಬಗ್ಗೆ ಮೇಲಾಧಿಕಾರಿಗಳಿಗೆ ಅನೇಕ ಬಾರಿ ತಿಳಿಸಿದ್ದೇವೆ. ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೂ ತರಲಾಗಿದೆ. ಆದರೆ
ಯಾರೊಬ್ಬರೂ ಶಾಲೆ ಕೊಠಡಿ ದುರಸ್ತಿ ಮಾಡಲು ಮುತುವರ್ಜಿವಹಿಸಿಲ್ಲ. ಇಂತಹ ಕೊಠಡಿಯಲ್ಲಿಯೇ 6 ಮತ್ತು 7ನೇ ತರಗತಿ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.
ರಫೀಕ್ ಶೇಖ್, ಶಾಲಾ ಮುಖ್ಯಾಧ್ಯಾಪಕ
ಈ ಶಾಲೆಗೆ ಬರುವ ಎಲ್ಲ ವಿದ್ಯಾರ್ಥಿಗಳ ಪಾಲಕ, ಪೋಷಕರು ದಿನಗೂಲಿ ಮಾಡುತ್ತಿದ್ದಾರೆ. ಸಂಬಂಧಿಸಿದವರು ಶಾಲೆ ದುಸ್ಥಿತಿ ಕುರಿತು ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನಾದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಶಾಲಾ ಮಕ್ಕಳ ಸೌಲಭ್ಯ
ಒದಗಿಸಬೇಕು.
ಪ್ರಭಾಕರ ಆಗೇರ, ಎಸ್ಡಿಎಂಸಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ
Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.