ನವನಾಡು ಪತ್ರಿಕೆ-ವೆಬ್ಪೋರ್ಟಲ್ಗೆ ಚಾಲನೆ
Team Udayavani, Apr 16, 2018, 4:41 PM IST
ಧಾರವಾಡ: ಇಲ್ಲಿಯ ಅಂಬೇಡ್ಕರ್ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ನವನಾಡು ಕನ್ನಡ ದಿನಪತ್ರಿಕೆ ಹಾಗೂ ನವನಾಡು ವೆಬ್ ಪೋರ್ಟಲ್ ರವಿವಾರ ಲೋಕಾರ್ಪಣೆಗೊಂಡಿತು.
ಇದಕ್ಕೂ ಮುನ್ನ ನಗರದ ಮುಖ್ಯ ಅಂಚೆ ಕಚೇರಿ ಹತ್ತಿರವಿರುವ ಪತ್ರಿಕೆಯ ಪ್ರಧಾನ ಕಚೇರಿಯನ್ನು ಹಿರಿಯ ಸಾಹಿತಿ ಡಾ| ಸಿದ್ದಲಿಂಗ ಪಟ್ಟಣಶೆಟ್ಟಿ ಉದ್ಘಾಟಿಸಿದರು. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಡಾ| ಪಟ್ಟಣಶೆಟ್ಟಿ ಮಾತನಾಡಿ, ಹಣ ಇದ್ದರೆ ಮಾತ್ರ ಪತ್ರಿಕೆ ಬೆಳೆಯುವುದಿಲ್ಲ. ಬದಲಾಗಿ ಒಳ್ಳೆಯ ಓದುವ ಮನಸ್ಸುಗಳಿರಬೇಕು. ನವನಾಡು ಪತ್ರಿಕೆಯನ್ನು ಓದುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ನವನಾಡು ಕನ್ನಡ ದಿನಪತ್ರಿಕೆ ಪ್ರಾರಂಭವಾಗಿರುವುದು ಧಾರವಾಡಕ್ಕೆ ಕಿರೀಟ ಇಟ್ಟಂತಾಗಿದೆ. ಈ ಪತ್ರಿಕೆಯಿಂದ ಧಾರವಾಡದಲ್ಲಿ ಹೊಸ ಮನ್ವಂತರ ಪ್ರಾರಂಭವಾಗಲಿದೆ ಎಂದರು.
ದಿನಪತ್ರಿಕೆ, ವೆಬ್ ಪೋರ್ಟಲ್ ಲೋಕಾರ್ಪಣೆ ಮಾಡಿದ ಎಸ್ಯುಸಿಐ ರಾಜ್ಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಪೊರೇಟ್ ಹಾವಳಿ ಹೆಚ್ಚಾಗಿದೆ. ಪ್ರಸ್ತುತ ದಿನಗಳಲ್ಲಿ ಲಾಭ ಗಳಿಸುವುದೇ ಪತ್ರಿಕೋದ್ಯಮದ ಧ್ಯೇಯವಾಗಿದ್ದು, ಇದು ನಿಲ್ಲಬೇಕು ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ದಿನಪತ್ರಿಕೆಗಳು ಜನರಿಗೆ ತಪ್ಪು ಕಲ್ಪನೆ ನೀಡಬಾರದು. ಪತ್ರಿಕೆ ಆರಂಭದ ದಿನಗಳು ಕಷ್ಟದಿಂದ ಕೂಡಿರುತ್ತವೆ. ನವನಾಡು ಪತ್ರಿಕೆ ತನ್ನ ಪಾವಿತ್ರ್ಯತೆ ಕಾಪಾಡಿಕೊಂಡು ಹೋಗುವ ಮೂಲಕ ಬರುವ ದಿನಗಳಲ್ಲಿ ಉತ್ತಮ ಹೆಸರು ಮಾಡಲಿ ಎಂದರು.
ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿದರು. ಮಾಜಿ ಮಹಾಪೌರ ಪಾಂಡುರಂಗ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.
ಇದೇ ವೇಳೆ ಪಾಂಡುರಂಗ ಪಾಟೀಲ್ ಅವರನ್ನು ನವನಾಡು ಬಳಗದಿಂದ ಸನ್ಮಾಸಲಾಯಿತು. ಹಾನಗಲ್ ತಾಪಂ ಸದಸ್ಯ ಸಿದ್ದನಗೌಡ ಪಾಟೀಲ್, ಎಸ್ಯುಸಿಐ ಜಿಲ್ಲಾ ಕಾರ್ಯದರ್ಶಿ ರಾಮಾಂಜನಪ್ಪ ಆಲ್ದಳ್ಳಿ, ರಾಮನಗೌಡ ಪಾಟೀಲ, ಬಸವರಾಜ ಪುರ್ಲಿ, ಪತ್ರಿಕೆ ವ್ಯವಸ್ಥಾಪಕ ನಿರ್ದೇಶಕ ಮಾರುತಿ ಪುರ್ಲಿ ಮಾತನಾಡಿದರು. ಪತ್ರಿಕೆ ಸಂಪಾದಕ ವೆಂಕನಗೌಡ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಸೌಮ್ಯ ಟಿ.ಎಸ್. ನಿರೂಪಿಸಿದರು. ಮೀಡಿಯಾ ಕ್ಲಬ್ ಅಧ್ಯಕ್ಷ ಮುಸ್ತಫಾ ಕುನ್ನಿಬಾವಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ
Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.