ಸವಿ ಕನ್ನಡ ಕವಿಸಂಗೆ ಸಿಹಿ ಬೆಲ್ಲದ ಪ್ರಯತ್ನ

ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸಾಹಿತಿಗಳ ಹಿಂದೇಟು­ಕೈ-ಕಮಲ ಕರಿಛಾಯೆಗೆ ನಾಂದಿ?­ಬೆಲ್ಲದ ಬಣಕ್ಕೆ ಪ್ರತಿಪಡೆ ರಚನೆ

Team Udayavani, Jul 11, 2021, 6:37 PM IST

10hub-dwd1

ವರದಿ: ಡಾ| ಬಸವರಾಜ ಹೊಂಗಲ್‌

ಧಾರವಾಡ: ಕನ್ನಡ ನಾಡು-ನುಡಿಯ ಪ್ರಾತಿನಿಧಿಕ ಸಂಸ್ಥೆ ಮತ್ತು ನೆಲ-ಜಲದ ವಿಚಾರದಲ್ಲಿ ಸದಾ ಮುಂಚೂಣಿಯಲ್ಲಿದ್ದುಕೊಂಡು ನಾಡಿಗೆ ಮಾರ್ಗದರ್ಶನ ನೀಡುವ ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಮತ್ತೂಂದು ಚುನಾವಣೆ ಎದುರಾಗಿದ್ದು, ಕನ್ನಡದ ಕಟ್ಟಾಳುಗಳು ತೆರೆಮರೆಯಲ್ಲಿಯೇ ವಿವಿಧ ಹುದ್ದೆಗಳನ್ನೇರಲು ಸಜ್ಜಾಗುತ್ತಿದ್ದಾರೆ.

ಶತಮಾನೋತ್ಸವ ಆಚರಿಸಿಕೊಂಡು ಮತ್ತೂಂದು ಬೆಳ್ಳಿಹಬ್ಬ ಆಚರಿಸಿಕೊಳ್ಳುತ್ತಿರುವ ರಾಜ್ಯದ ಏಕೈಕ ಕನ್ನಡ ಸಂಸ್ಥೆ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಈ ಬಾರಿ ನೂತನ ಅಧ್ಯಕ್ಷರಾದಿಯಾಗಿ ಹೊಸ ಮುಖಗಳು ಪ್ರವೇಶ ಪಡೆಯಲು ಕಸರತ್ತು ನಡೆಸಿದ್ದು, ಸಾಂಸ್ಕೃತಿಕ ರಾಜಕಾರಣದ ಕೇಂದ್ರಬಿಂದುವಾಗಿರುವ ಕವಿಸಂ ಚುನಾವಣೆಗೆ ಕೊರೊನಾ 2ನೇ ಅಲೆ ತಗ್ಗುತ್ತಿದ್ದಂತೆಯೇ ತೆರೆಮರೆಯಲ್ಲಿಯೇ ಕಸರತ್ತು ಆರಂಭಗೊಂಡಿದೆ.

ಸತತ 50 ವರ್ಷಗಳಿಗೂ ಅಧಿಕ ಕಾಲ ಕವಿಸಂ ಅಧ್ಯಕ್ಷ ಸ್ಥಾನ ಅಲಂಕರಿಸಿಕೊಂಡು ಬಂದು ವಿಶ್ವದಾಖಲೆಯನ್ನೇ ಬರೆದ ನಾಡೋಜ ಡಾ| ಪಾಟೀಲ ಪುಟ್ಟಪ್ಪ ಅವರ ನಿಧನದ ನಂತರ ಈ ದೊಡ್ಡ ಸಂಸ್ಥೆಯ ಸಾರಥ್ಯವನ್ನು ಯಾರಿಗೆ ವಹಿಸಬೇಕು ಎನ್ನುವ ವಿಚಾರ ಧಾರವಾಡದ ಹಿರಿಯ ಸಾಹಿತಿಗಳು, ಚಿಂತಕರು ಮತ್ತು ಕನ್ನಡಾಭಿಮಾನಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ರಾಜಕೀಯದಿಂದ ದೂರವಿದ್ದು, ಸರ್ಕಾರಗಳಿಗೆ ಚಾಟಿ ಬೀಸಿ, ಕಿವಿಹಿಂಡಿ ಬುದ್ಧಿ ಹೇಳಿ ಕನ್ನಡ ಭಾಷೆ ಬೆಳೆಸಲು ಸದಾ ಕಟಿಬದ್ಧವಾಗಿರುವ ಕವಿಸಂನ ಸಾರಥ್ಯ ಅಷ್ಟೇ ತೂಕದ್ದಾಗಿರಬೇಕು ಎನ್ನುವ ಮಾತುಗಳು ಸಾಹಿತಿಗಳ ವಲಯದಲ್ಲಿ ಕೇಳಿ ಬರುತ್ತಿದ್ದು, ಅದಕ್ಕಾಗಿ ಬಲಿಷ್ಠ ವ್ಯಕ್ತಿಗಳ ಹುಡುಕಾಟ ನಡೆದಿದೆ.

ಹೊಸ ಮುಖಗಳಿಗೆ ವೇದಿಕೆ

ನಾಲ್ಕು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ ಕವಿಸಂಗೆ ಆಯ್ಕೆಯಾಗಿದ್ದ ಅಧ್ಯಕ್ಷ ನಾಡೋಜ ಡಾ|ಪಾಟೀಲ ಪುಟ್ಟಪ್ಪ, ಕೋಶಾಧ್ಯಕ್ಷರಾಗಿದ್ದ ಕೃಷ್ಣಾ ಜೋಶಿ, ಗೌರವ ಅಧ್ಯಕ್ಷರಾಗಿದ್ದ ಡಾ| ಸಿದ್ದಲಿಂಗಯ್ಯ, ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ಮೋಹನ ನಾಗಮ್ಮನವರ ಹಾಗೂ ಶಾಂತೇಶ ಸೇರಿ ಒಟ್ಟು ಐದು ಜನರು ಕಾಲವಾಗಿದ್ದು, ಇದೀಗ ನೂತನ ಚುನಾವಣೆಗೆ ಮತ್ತೆ ಹೊಸ ಮುಖಗಳು ಈ ಎಲ್ಲಾ ಹುದ್ದೆಗಳಿಗೆ ಆಯ್ಕೆಯಾಗಬೇಕಾಗಿದೆ.

ಚಂದ್ರಕಾಂತ ಬೆಲ್ಲದ ಕಸರತ್ತು

ಸತತ 4 ಬಾರಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದ ಹಿರಿಯ ಸಜ್ಜನ ರಾಜಕಾರಣಿ ಮತ್ತು ಸಾಂಸ್ಕೃತಿಕ ಲೋಕದ ನಂಟು ಹೊಂದಿರುವ ಚಂದ್ರಕಾಂತ ಬೆಲ್ಲದ ಅವರು ಈಗಾಗಲೇ ತೆರೆಮರೆಯಲ್ಲಿಯೇ ಕವಿಸಂ ಅಧ್ಯಕ್ಷ ಸ್ಥಾನಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ನಾಡೋಜ ಪಾಪು ನಿಧನರಾದ ನಂತರ ಉಳಿದ ಅವಧಿಗೆ ಚಂದ್ರಕಾಂತ ಬೆಲ್ಲದ ಅವರನ್ನು ಅಧ್ಯಕ್ಷರನ್ನಾಗಿ ಮಾಡುವಂತೆ ಈ ಹಿಂದಿನ ಅವಧಿಯಲ್ಲಿನ ಕೆಲ ಪದಾಧಿಕಾರಿಗಳು ಸಂಘದ ಸಭೆಯಲ್ಲಿ ಬೇಡಿಕೆ ಇಟ್ಟು ಪ್ರಯತ್ನ ನಡೆಸಿದ್ದರು. ಆದರೆ ಕಾನೂನು ಮತ್ತು ತಾಂತ್ರಿಕ ತೊಂದರೆಯಿಂದ ಚಂದ್ರಕಾಂತ ಬೆಲ್ಲದ ಅವರು ಅಧ್ಯಕ್ಷರಾಗಲಿಲ್ಲ. ಬೆಲ್ಲದ ಅವರು ಸರಳ ಮತ್ತು ಸಜ್ಜನ ರಾಜಕಾರಣಿ. ಸದ್ಯಕ್ಕೆ ಅವರೇನು ಬಿಜೆಪಿಯಲ್ಲಿಲ್ಲ. ಅವರನ್ನು ಕೇವಲ ಒಂದು ರಾಜಕೀಯ ಪಕ್ಷದ ಅಭ್ಯರ್ಥಿಯನ್ನಾಗಿ ನೋಡದೇ ಸಾಂಸ್ಕೃತಿಕ ಲೋಕದ ಒಡನಾಡಿ ಎಂದು ನೋಡಬೇಕು. ಹೀಗಾಗಿ ಅವರನ್ನೇ ಕವಿಸಂ ಮುಂದಿನ ಅಧ್ಯಕ್ಷರನ್ನಾಗಿ ಮಾಡುವುದು ಸೂಕ್ತ ಎನ್ನುವ ಮಾತುಗಳು ಸಾಹಿತ್ತಿಕ ವಲಯದಲ್ಲೂ ಕೇಳಿ ಬರುತ್ತಿವೆ. ಆದರೆ ಈಗಾಗಲೇ ಚಂದ್ರಕಾಂತ ಅವರ ಖಾಸಾ ಸಹೋದರ ಶಿವಣ್ಣ ಬೆಲ್ಲದ ಅವರು ಸಂಘದ ಕಾರ್ಯಾಧ್ಯಕ್ಷರಾಗಿದ್ದಾರೆ. ಹೀಗಿರುವಾಗ ಇಲ್ಲಿಯೂ ಒಂದೇ ಕುಟುಂಬದ ಇಬ್ಬರು ಎರಡು ಪ್ರಮುಖ ಹುದ್ದೆಗಳನ್ನು ವಹಿಸಿಕೊಂಡರೆ ಹೇಗೆ? ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಟಾಪ್ ನ್ಯೂಸ್

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

002

Karkala: ಎದೆ ನೋವಿನಿಂದ ಕೃಷಿಕ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.