![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 12, 2019, 8:09 AM IST
ಧಾರವಾಡ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುಲ ಪ್ರಗತಿ ಪರಿಶೀಲಿಸಿದರು.
ಧಾರವಾಡ: ನರೇಗಾ ಯೋಜನೆಯಡಿ ಮಳೆನೀರು ಕೊಯ್ಲಿಗೆ ಒತ್ತು ಕೊಟ್ಟು ಕೃಷಿಹೊಂಡಗಳ ನಿರ್ಮಾಣ, ಬದುಗಳಲ್ಲಿ ಗಿಡ ಬೆಳೆಸುವುದಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಮಂಜುಲ ಹೇಳಿದರು.
ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಶೇ. 87.33 ಸಾಧನೆಯಾಗಿದೆ. ಈ ಬಾರಿ ಶೇ.100 ಮಾನವ ದಿನಗಳ ಸೃಜನೆ ಮಾಡಿ ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸಬೇಕು. ಕಾರ್ಮಿಕರಿಗೆ 8 ದಿನಗಳ ನಿಗದಿತ ಕಾಲಮಿತಿಯೊಳಗೆ ವೇತನ ಪಾವತಿಸಬೇಕು. ಜಿಲ್ಲೆಯಾದ್ಯಂತ ನಿರ್ಮಾಣವಾಗಿರುವ ಕೃಷಿಹೊಂಡಗಳ ಮಾಹಿತಿಯನ್ನು ಸಂಬಂಧಿಸಿದ ಇತರ ಇಲಾಖೆಗಳೊಂದಿಗೆ ಹಂಚಿಕೊಂಡು ಬದುವಿನಲ್ಲಿ ಗಿಡ ನೆಡುವುದು ಸೇರಿದಂತೆ ಬಲವರ್ಧನಾ ಕಾರ್ಯಗಳಿಗೆ ಒತ್ತು ನೀಡಬೇಕು ಎಂದರು.
ಮಾತೃಪೂರ್ಣ ಯೋಜನೆಯಡಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ಒದಗಿಸುವಲ್ಲಿ ಜಿಲ್ಲೆಯಲ್ಲಿ ಶೇ.83.07 ಸಾಧನೆಯಾಗಿದೆ. ಮಾತೃಶ್ರೀ, ಮಾತೃವಂದನ ಯೋಜನೆಯಡಿ ಪೌಷ್ಟಿಕ ಆಹಾರಕ್ಕಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬಿಡುಗಡೆ ಮಾಡುತ್ತಿರುವ ಅನುದಾನ ನಿರ್ದಿಷ್ಟ ಉದ್ದೇಶಕ್ಕೆ ಬಳಕೆಯಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ನಿರಂತರವಾಗಿ ಖಚಿತಪಡಿಸಿಕೊಳ್ಳಬೇಕು ಎಂದು ಮಂಜುಲ ಸೂಚಿಸಿದರು. ಜಿಲ್ಲೆಯ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ತರಲು ಎಲ್ಲ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಸಂಸ್ಥೆಗಳಿಂದ ಕ್ರಿಯಾ ಯೋಜನೆ ಪಡೆಯಬೇಕು. ಕಳೆದ ಬಾರಿ ಕಡಿಮೆ ಫಲಿತಾಂಶ ಬಂದಿರುವ ಶಾಲಾ-ಕಾಲೇಜುಗಳಲ್ಲಿ ಪರಿಹಾರ ಬೋಧನೆ, ಹೆಚ್ಚುವರಿ ಅವಧಿಗಳ ನಿರ್ವಹಣೆ, ರಜಾದಿನಗಳಲ್ಲಿ ವಿಶೇಷ ತರಗತಿಗಳನ್ನು ಏರ್ಪಡಿಸಬೇಕು ಎಂದು ಸಲಹೆ ನೀಡಿದರು.
ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಪಾಲಿಕೆ ಆಯುಕ್ತ ಪ್ರಶಾಂತಕುಮಾರ ಮಿಶ್ರಾ, ಡಿಎಫ್ಒ ಡಿ. ಮಹೇಶಕುಮಾರ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಆಕೃತಿ ಬನ್ಸಾಲ್ ಮತ್ತಿತರರಿದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.