ಒತ್ತಡ ನಿರ್ವಹಣೆಗೆ ಪರಿಸರ ಪ್ರೇಮ ಪೂರಕ
Team Udayavani, Oct 9, 2017, 12:29 PM IST
ಹುಬ್ಬಳ್ಳಿ: ಜೀವನ ಒತ್ತಡಮಯವಾಗುತ್ತಿದ್ದು, ಒತ್ತಡ ನಿರ್ವಹಣೆ ಮಾಡುವ ದಿಸೆಯಲ್ಲಿ ಪರಿಸರ ಪ್ರೇಮ ಬೆಳೆಸಿಕೊಳ್ಳುವುದು ಪೂರಕ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು.
ಜಿಲ್ಲಾಡಳಿತ, ಜಿಪಂ, ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಉದ್ಯಾನ ಮತ್ತು ಫಲ-ಪುಷ್ಪ ಪ್ರದರ್ಶನ ಸಮಿತಿ ಸಹಯೋಗದಲ್ಲಿ ಇಂದಿರಾ ಗಾಜಿನಮನೆ ಉದ್ಯಾನದಲ್ಲಿ ರವಿವಾರ ನಡೆದ ಫಲ-ಪುಷ್ಪ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಮದ್ಯಪಾನದಿಂದ ಒತ್ತಡ ನಿವಾರಣೆ ಮಾಡಿಕೊಳ್ಳಬಹುದು ಎಂದು ಕೆಲವರು ಮದ್ಯ ವ್ಯಸನಕ್ಕೆ ಅಂಟಿಕೊಂಡು ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಪರಿಸರದ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಅವಶ್ಯಕ ಎಂದರು. ತೋಟಗಾರಿಕಾ ಇಲಾಖೆಯವರು ಮುಂದಿನ ವರ್ಷದಿಂದ ಪೂರ್ವಭಾವಿ ಸಭೆ ಮಾಡಿ ಸಮರ್ಪಕವಾಗಿ ಫಲ-ಪುಷ್ಪ ಪ್ರದರ್ಶನ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ನಗರದಲ್ಲಿ ಜಾಗದ ಕೊರತೆಯಿಂದಾಗಿ ಮನೆಗಳ ಮೇಲೆ ತಾರಸಿ ತೋಟ ಮಾಡುವ ಪರಿಪಾಠ ಹೆಚ್ಚಾಗುತ್ತಿದೆ. ನಗರವನ್ನು ಹಸಿರುಮಯಗೊಳಿಸುವ ಮನೋಭಾವ ನಾಗರಿಕರಿಗೆ ಬರಬೇಕು ಎಂದರು. ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡವು.
ಬಿ.ಎಂ. ಕುಂದಗೋಳ, ದಶರಥ ವಾಲಿ, ವಿಜನಗೌಡ ಪಾಟೀಲ, ತುಳಸಿದಾಸ ಖೋಡೆ, ಎ.ಜಿ. ದೇಶಪಾಂಡೆ ಇದ್ದರು. ರಾಮಚಂದ್ರ ಮಡಿವಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ತೋಟಗಾರಿಕೆ ಇಲಾಖೆ ಅಧಿಕಾರಿ ಶಿಲ್ಪಶ್ರೀ ಸ್ವಾಗತಿಸಿದರು. ವಿಜಯಕುಮಾರ ನಿರೂಪಿಸಿದರು. ಗಂಗೂಬಾಯಿ ಹಾನಗಲ್ ಮ್ಯೂಸಿಕ್ ಫೌಂಡೇಶನ್ ವತಿಯಿಂದ ನೃತ್ಯ ಪ್ರದರ್ಶನ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್
Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್
Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.