ಆದರ್ಶ ಪಾಲಿಸಿದರೆ ರಂಗಭೂಮಿ ಉತ್ತುಂಗಕ್ಕೆ


Team Udayavani, Feb 17, 2017, 1:26 PM IST

hub1.jpg

ಧಾರವಾಡ: ಕನ್ನಡ ರಂಗಭೂಮಿಯಲ್ಲಿ ಹಿಂದೆ ಇದ್ದ ಆದರ್ಶಗಳನ್ನು ರೂಢಿಸಿಕೊಂಡರೆ ಮತ್ತೆ ಆ ಗತವೈಭವ ಮರುಕಳಿಸಲು ಸಾಧ್ಯ ಎಂದು ಕನ್ನಡದ ಹಿರಿಯ ವೃತ್ತಿರಂಗಭೂಮಿ ಕಲಾವಿದೆ ಮತ್ತು ಡಾ| ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಬಾಯಿ ಏಣಗಿ ಅಭಿಪ್ರಾಯಪಟ್ಟರು. 

ಅವರು ಉತ್ತರ ಕರ್ನಾಟಕ ಲೇಖಕಿಯರ ಸಂಘದಿಂದ ಹಮ್ಮಿಕೊಂಡಿದ್ದ ಅನನ್ಯ ಮಹಿಳೆಯೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ತಿಂಗಳ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. 50ರ ದಶಕದಲ್ಲಿ ಕನ್ನಡ ರಂಗಭೂಮಿಯಲ್ಲಿ ಪ್ರಾಮಾಣಿಕತೆ, ವಿಶ್ವಾಸ, ಉತ್ತಮ ನಟನೆ, ಪ್ರೇಕ್ಷಕನನ್ನ ಪೂಜ್ಯಭಾವದಿಂದ ನೋಡುವುದು ಸೇರಿದಂತೆ ಅನೇಕ ಉತ್ತಮ ಆದರ್ಶಗಳಿದ್ದವು. ಹೀಗಾಗಿ ಜನರು ರಂಗಭೂಮಿಯನ್ನ ಇಷ್ಟ ಪಡುತ್ತಿದ್ದರು. 

ಉತ್ತಮ ನಟರಾಗಿ ಹೊರ ಹೊಮ್ಮಲು ದಶಕಗಳ ಸಮಯ ಬೇಕಿತ್ತು. ಆದರೆ ಇಂದು ಎಲ್ಲರೂ ತರಾತುರಿಯಲ್ಲೇ ನಡೆದು ಮೇಲಕ್ಕೇರಿ, ಕೇಳಕ್ಕಿಳಿದು ಬಿಡುವ ಕಾಲ ಬಂದಿದೆ. ಹೀಗಾಗಿ ರಂಗಭೂಮಿ ಕೊಂಚ ಸಂಕಷ್ಟದಲ್ಲಿದೆ ಎನ್ನಬಹುದು. ಆದರೆ ಉತ್ತಮ ಆದರ್ಶಗಳನ್ನು ಇಂದಿನ ರಂಗಭೂಮಿ ಪಾಲಿಸಿದರೆ ಮತ್ತೆ ಕನ್ನಡ ರಂಗಭೂಮಿ ಗತವೈಭವಕ್ಕೆ ಏರಲಿದೆ ಎಂದು ಹೇಳಿದರು. 

ಆತ್ಮಚರಿತ್ರೆ ಬೇಡ: ತಮ್ಮ ಜೀವನದಲ್ಲಿ ಕಹಿ ಘಟನೆಗಳನ್ನ ಮೆಲಕು ಹಾಕಿದ ಲಕ್ಷ್ಮೀಬಾಯಿ ಅವರು, ನನ್ನೊಳಗಿ ನೋವು ನನ್ನಲ್ಲಿಯೇ ಇರಬೇಕು. ಅದನ್ನು ಬೇರೆಯವರಿಗೆ ಹೇಳಿ ದೊಡ್ಡದು ಮಾಡುವುದು ನನಗೆ ಇಷ್ಟವಿಲ್ಲ. ಹೀಗಾಗಿ ನಾನು ನನ್ನ ಆತ್ಮಚರಿತ್ರೆ ಬರೆದು ಕೊಡುತ್ತೇನೆ ಎಂದು ಬಂದವರಿಗೆ ಬೇಡ ಎಂದು ಹೇಳಿದ್ದೇನೆ.

ಆತ್ಮಚರಿತ್ರೆ ಬೇಡವೇ ಬೇಡ. ನನ್ನ ಮೊಮ್ಮಕ್ಕಳಿಗೆ ನಾನು ಮೊದಲು ಓದಿ ನೌಕರಿ ಹಿಡಿಯಿರಿ, ಆ ಮೇಲೆ ರಂಗಕ್ಕೆ ಬನ್ನಿ ಎಂದು ಸಲಹೆ ನೀಡಿದ್ದೇನೆ. ಕಾರಣ, ನಾವು ಅನುಭವಿಸಿದ ಕಷ್ಟ, ನೋವುಗಳನ್ನು ನನ್ನ ಮುಂದಿನ ಪೀಳಿಗೆ ಅನುಭವಿಸುವುದು ಬೇಡ ಎಂದು ಹೇಳಿದರು. 

ಬಸವಣ್ಣನಿಗೆ ನಮಸ್ಕಾರ: ತಮ್ಮ ರಂಗಭೂಮಿ ನೆನಪುಗಳನ್ನು ಹಂಚಿಕೊಂಡ ಅವರು, ಮುಂಬೈನಲ್ಲಿ ಪೃಥ್ವಿರಾಜ್‌ಕಪೂರ ಅವರ “ಪೈಸೇ ಹೀ ಪೈಸೆ’ ನಾಟಕ ನೋಡಿ ಬಂದು ಇಲ್ಲಿ ನಾವು ಜಗಜ್ಯೋತಿ ಬಸವೇಶ್ವರ ನಾಟಕವನ್ನು ಆರಂಭ ಮಾಡಿದೇವು. ಈ ನಾಟಕದಿಂದ ಬಂದ ಹಣದಲ್ಲಿ ಸ್ವಲ್ಪ ಭಾಗವನ್ನು ಬಸವಣ್ಣನ ಜನ್ಮಭೂಮಿ ಬಸವ ಕಲ್ಯಾಣದ ಅಭಿವೃದ್ಧಿಗೆ ಕಳುಹಿಸಿ ಕೊಡುತ್ತಿದ್ದೇವು.

ನಾಟಕ ಮುಗಿದ ಮೇಲೆ ನಾಡೋಜ ಏಣಗಿ ಬಾಳಪ್ಪ ಮತ್ತು ನನ್ನ ಕಾಲಿಗೆ ಜನರು ನಮಸ್ಕರಿಸುತ್ತಿದ್ದರು. ನಾವು ಬೇಡ ಎಂದರೂ ಕೇಳುತ್ತಿರಲಿಲ್ಲ. ಕನ್ನಡದ ಜನರು ತೋರಿದ ಪ್ರೀತಿ, ಅಭಿಮಾನ ಎಂದಿಗೂ ಮರೆಯಲಾರದ್ದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉತ್ತರ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ| ಹೇಮಾ ಪಟ್ಟಣಶೆಟ್ಟಿ,

ಲಕ್ಷ್ಮೀಬಾಯಿ ಏಣಗಿ ಅಂತಹ ಕಲಾವಿದೆಯರು ಒಬ್ಬ ಮಹಿಳೆಯಾಗಿ ಸಮಾಜದ ಎಲ್ಲಾ ಶೋಷಣೆಗಳನ್ನು ತಾಳ್ಮೆಯಿಂದ ಎದುರಿಸಿ ಜೀವನದಲ್ಲಿ ಯಶಸ್ಸು ಕಂಡಿದ್ದಾರೆ. ಸರ್ಕಾರಗಳು ಅವರಿಗೆ ನೀಡಬೇಕಾದ ಆದ್ಯತೆ ಇನ್ನೂ ನೀಡದಿರುವುದು ವಿಷಾದನೀಯ ಎಂದು ಹೇಳಿದರು. ಲಲಿತಾ ಪಾಟೀಲ ವಚನ ಪ್ರಾರ್ಥನೆ ಸಲ್ಲಿಸಿದರು. ಸಂಸ್ಕೃತಿ ಬೋಸ್ಲೆ ಸ್ವಾಗತಿಸಿದರು. ಸುಜಾತಾ ಹಡಗಲಿ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಇದ್ದರು. 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.