Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ
Team Udayavani, Sep 22, 2024, 8:27 PM IST
ಹುಬ್ಬಳ್ಳಿ: ಕಾಂಗ್ರೆಸ್ ಅಧಿಕಾರವಿರುವೆಡೆ ಮತಾಂಧ ಶಕ್ತಿಗಳು ಹಾಗೂ ದೇಶದ್ರೋಹಿಗಳಿಗೆ ವಿಶೇಷ ಶಕ್ತಿ ಬರುತ್ತದೆ. ಇದಕ್ಕೆ ತುಷ್ಟೀಕರಣ ನೀತಿಯೇ ಕಾರಣ. ಕರ್ನಾಟಕದಲ್ಲಿ ಇದು ಪರಾಕಾಷ್ಠೆ ತಲುಪಿದೆ. ನಾಗಮಂಗಲದಂತಹ ಘಟನೆಯನ್ನು ಪೊಲೀಸರು ಸರಿಯಾಗಿ ನಿರ್ವಹಿಸಿಲ್ಲ. ಅವರು ಒತ್ತಡಕ್ಕೊಳಗಾಗಿ ಕೆಲಸ ಮಾಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಾಟೆ ವಿಷಯದಲ್ಲಿ ಮುಖ್ಯಮಂತ್ರಿಗಳು ಎಚ್ಚರಿಕೆಯಿಂದ ಮಾತನಾಡಬೇಕು.
ನಾಗಮಂಗಲ ಗಲಾಟೆಯಲ್ಲಿ ಪಿಎಫ್ಐ ಸಂಘಟನೆಗಳು ಪೂರ್ವ ತಯಾರಿ ಮಾಡಿಕೊಂಡಿರುವುದು ಈಗ ಬೆಳಕಿಗೆ ಬಂದಿದೆ. ಹಿಂದೂಗಳ ಅಂಗಡಿಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಒಂದೇ ದಿನಕ್ಕೆ ಈ ರೀತಿ ದಾಳಿ ಮಾಡಲು ಆಗುತ್ತದೆಯೇ ಎಂದರು.
ಲೋಕಾಯುಕ್ತ ಸಮನ್ಸ್ ಹಿಂದೆ ರಾಜಕೀಯ ಷಡ್ಯಂತ್ರ: ಜೋಶಿ
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ರಾಜಕೀಯ ದ್ವೇಷದಿಂದ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಸಮನ್ಸ್ ಕೊಡುವಂತಹ ಕ್ರಮಕ್ಕೆ ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಯಾವಾಗ ಬೇಕಾದರೂ ಪತನವಾಗುವ ಆತಂಕ ಎದುರಾಗಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ಬರುತ್ತದೆಂಬ ಭಯದಿಂದಾಗಿ ಯಡಿಯೂರಪ್ಪ ಅವರಂತಹ ಹಿರಿಯರಿಗೆ ಸಮನ್ಸ್ ಜಾರಿ ಮಾಡುವುದು ಲೋಕಾಯುಕ್ತಕ್ಕೆ ತರವಲ್ಲ. ಈ ಸಮನ್ಸ್ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದರು.
ರಾಜ್ಯಪಾಲರ ಪತ್ರ ಸಮರ ವಿಚಾರವಾಗಿ ಪ್ರತಿಕ್ರಿಯಿಸಿ, ಲೋಕಾಯುಕ್ತ ಕೊಟ್ಟ ದೂರುಗಳ ಬಗ್ಗೆ ಲೀಕ್ ಮಾಡುವ ಕೆಲಸ ನಡೆದಿದೆ. ಪೊಲೀಸ್ ಅಧಿಕಾರಿಗಳ ದುರ್ಬಳಕೆ ನಡೆದಿದೆ ಎಂದರು.
ಬೆಂಗಳೂರು ಮಾತ್ರವಲ್ಲ ದೇಶಾದ್ಯಂತ ಕಡಿಮೆ ಬೆಲೆಗೆ ಈರುಳ್ಳಿ ಕೈಗೆಟುಕುವಂತೆ ಕೇಂದ್ರವು ಕ್ರಮ ಕೈಗೊಂಡಿದೆ. ದೇಶಾದ್ಯಂತ 570 ಕಡೆ ಬೆಲೆ ಮಾನಿಟರಿಂಗ್ ಕೇಂದ್ರಗಳಿವೆ. ಎಲ್ಲ ಕಡೆಯೂ ಬೆಲೆ ನಿಯಂತ್ರಿಸಿ ಕಡಿಮೆ ಬೆಲೆಗೆ ಕೇಂದ್ರವೇ ಪೂರೈಸುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.