ಈಡೇರಿದ ಬಹುದಿನಗಳ ಬೇಡಿಕೆಗಳು


Team Udayavani, Feb 21, 2021, 4:35 PM IST

ಈಡೇರಿದ ಬಹುದಿನಗಳ ಬೇಡಿಕೆಗಳು-1

ಹುಬ್ಬಳ್ಳಿ: ಇಲ್ಲಿನ ಗೋಕುಲ ಗ್ರಾಮದ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿಶಹರ ತಹಶೀಲ್ದಾರ್‌ ಶಶಿಧರ ಮಾಡ್ಯಾಳ ಅವರು ಗ್ರಾಮಸ್ಥರ ಬಹುದಿನಗಳ ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದರು.

ಸರಕಾರದ ನಿರ್ದೇಶನದಂತೆ ಹುಬ್ಬಳ್ಳಿ ತಾಲೂಕು ಆಡಳಿತ ವತಿಯಿಂದ ತಹಶೀಲ್ದಾರ್‌ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯದಲ್ಲಿ ಪಾಲಿಕೆಯ ಮಾಜಿ ಸದಸ್ಯ ರಾಮಣ್ಣ ಬಡಿಗೇರ, ಮುಖಂಡ ಹನುಮಂತಪ್ಪ ಉಣಕಲ್ಲ ಗ್ರಾಮದ ಪ್ರಮುಖಸಮಸ್ಯೆಗಳ ಕುರಿತು ಅಹವಾಲು ಸಲ್ಲಿಸಿದರು.ಗೋಕುಲ ಗ್ರಾಮದ ಸರ್ವೇ ನಂ. 49ರ ಕುರಡಿಕೇರಿ ಹಾಗೂ ಸರ್ವೇ ನಂ. 364ರ ಚಿಕ್ಕೇರೆಗಳನ್ನು ಅನಧಿಕೃತವಾಗಿ ಒತ್ತುವರಿ ಮಾಡಿ, ಇಟ್ಟಿಗೆ ಭಟ್ಟಿಗಳನ್ನು ನಡೆಸುತ್ತಿದ್ದಾರೆ. ಇವೆರಡು ಕೆರೆಗಳಿಗೆ ತ್ಯಾಜ್ಯ-ಕಲ್ಮಷ ನೀರು ಸೇರುತ್ತಿದೆ. ಕೈಗಾರಿಕೆಗಳ ಹಾಗೂ ಗ್ರಾಮದ ಚರಂಡಿ ನೀರು ಕುರಡಿಕೇರಿಗೆ ಸೇರಿ ಕಲುಷಿತಗೊಂಡಿದೆ. ಜಾನುವಾರುಗಳು ಕೆರೆ ನೀರು ಕುಡಿದು ಮೃತಪಟ್ಟಿವೆ. ಈ ಕುರಿತು ತಹಶೀಲ್ದಾರರು ಹಾಗೂ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದೆಂದರು. ಮನವಿಗೆ ಸ್ಪಂದಿಸಿದ ತಹಶೀಲ್ದಾರ್‌ ಮಾಡ್ಯಾಳ ಭೂ ದಾಖಲೆ, ಸರ್ವೇ ಇಲಾಖೆಗಳ ಅಧಿಕಾರಿಗಳೊಂದಿಗೆ ಕೆರೆಗಳಿಗೆ ತೆರಳಿ ವೀಕ್ಷಿಸಿದರು. ಸೋಮವಾರದಿಂದಲೇ ಕೆರೆ ಸರ್ವೇ ಕಾರ್ಯ ನಡೆಸುವಂತೆ ಸೂಚಿಸಿದರು.

ಗ್ರಾಮದ ಚರಂಡಿ ನೀರು ಚಿಕ್ಕೆರೆಯಿಂದ ಹರಿದು ಹೋಗಿ ರೈತರ ಜಮೀನಿನಲ್ಲಿ ನಿಂತುವ್ಯವಸಾಯ ಮಾಡಲು ತೊಂದರೆಯಾಗುತ್ತಿದೆ. ಇದನ್ನು ಮನಗಂಡು ಪೈಪ್‌ಲೈನ್‌ ಮೂಲಕ ಚರಂಡಿನೀರನ್ನು ರಾಜಕಾಲುವೆಗೆ ಸೇರಿಸಲು ಯೋಜನೆರೂಪಿಸಲಾಗಿದೆ. ಟೆಂಡರ್‌ ಕರೆದು ಎರಡು ತಿಂಗಳಲ್ಲಿಕಾಮಗಾರಿಗೆ ಚಾಲನೆ ನೀಡಲಾಗುವುದೆಂದು ಭರವಸೆ ನೀಡಿದರು.

ಪೋಡಿ ಮಾಡಿಕೊಡಲು ಮನವಿ: ರಾಷ್ಟ್ರೀಯ

ಹೆದ್ದಾರಿ ಬೈಪಾಸ್‌ ಹಾಗೂ ವಿಮಾನ ನಿಲ್ದಾಣಕ್ಕಾಗಿ ಗೋಕುಲ ಗ್ರಾಮದ ರೈತರ ಜಮೀನನ್ನು ಭೂಸ್ವಾ ಧೀನಕ್ಕೆ ಒಳಪಡಿಸಿಕೊಳ್ಳಲಾಗಿದೆ. ಇದರಿಂದ ಜಮೀನುಗಳು ತುಂಡಾಗಿವೆ. ಇಂತಹ ಜಮೀನು ಪಹಣಿಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂಏರ್‌ಪೋರ್ಟ್‌ ಅಥಾರಿಟಿ ಆಪ್‌ ಇಂಡಿಯಾದಹೆಸರು ಉಳಿದುಕೊಂಡಿವೆ. ಹೀಗಾಗಿ ರೈತರುಉಳುಮೆ ಮಾಡುತ್ತಿರುವ ತುಂಡು ಜಮೀನಿನ ಮಾಲಿಕತ್ವ ಲಭಿಸದಂತಾಗಿದೆ. ಇವುಗಳ ಪೋಡಿ ಮಾಡಿಸಲು ಕಚೇರಿಗಳಿಗೆ ಅಲೆದಾಡಿದರೂ ಯಾವ ಪರಿಹಾರವಾಗಿಲ್ಲ ಎಂದು ಗ್ರಾಮಸ್ಥರು ಮನವಿಮಾಡಿದರು. ಇದಕ್ಕೆ ಸ್ಪಂದಿಸಿದ ತಹಶೀಲ್ದಾರ್‌, ಇಲಾಖೆಯಿಂದಲೇ ಭೂ ಸ್ವಾಧೀನಕ್ಕೊಳಪಟ್ಟ ರೈತರ ಜಮೀನುಗಳ ವಿವರ ಪಡೆದು, ಸರ್ವೇ ಕಾರ್ಯ ನಡೆಸಿ ಪೋಡಿ ಮಾಡಿಕೊಡಲಾಗುವುದು ಎಂದರು.

2018ರಲ್ಲಿಯಾದ ಅತಿವೃಷ್ಟಿಯಿಂದ ಗ್ರಾಮದ 5 ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಇವುಗಳಿಗೆ ಭಾಗಶಃ ಹಾನಿ ಪರಿಹಾರ ನೀಡಲಾಗಿದೆ.ಸಂಪೂರ್ಣ ಪರಿಹಾರ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದರು.

ಮಹಾಮಳೆ 15 ದಿನಗಳ ಕಾಲ ಎಡಬಿಡದೆ ಸುರಿದಿದ್ದರಿಂದ ಒಮ್ಮೆ ಮನೆ ಹಾನಿ ಕುರಿತು ಸರ್ವೇ ಮಾಡಿ, ದಾಖಲೆಗಳನ್ನು ರಾಜೀವಗಾಂಧಿ  ವಸತಿ ನಿಗಮದ ಪೋರ್ಟಲ್‌ನಲ್ಲಿ ಅಪ್‌ ಲೋಡ್‌ ಮಾಡಲಾಗಿದೆ. ನಂತರ ಮುಂದುವರಿದ ಮಳೆಯಲ್ಲಿ ಮನೆಗಳು ಸಂಪೂರ್ಣಹಾನಿಗೊಳಗಾಗಿವೆ. ಈ ಕುರಿತು ತಾಂತ್ರಿಕ ಕಾರಣಗಳಿಂದ ಮಾಹಿತಿ ಅಪ್‌ ಲೋಡ್‌ ಮಾಡಲು ಸಾಧ್ಯವಾಗಿಲ್ಲ. ಹಾಗಾಗಿ ಭಾಗಶಃ ಪರಿಹಾರಧನ

ಪಾವತಿಯಾಗಿದೆ. ಈ ರೀತಿ ನಗರ ವ್ಯಾಪ್ತಿಯಲ್ಲಿ 172 ಮನೆಗಳು ಹಾನಿಗೊಳಗಾಗಿವೆ. ಈ ಕುರಿತು ಜಿಲ್ಲಾಧಿಕಾರಿಗಳ ಮುಖಾಂತರ ರಾಜೀವ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮತಿ ದೊರೆತ ಕೂಡಲೇ ಜಿಪಿಎಸ್‌ ಆಧಾರಿತ ಜಂಟಿ ಸರ್ವೇ ಕಾರ್ಯ ನಡೆಸಿ ಪೂರ್ಣಪ್ರಮಾಣದ ಪರಿಹಾರ ನೀಡಲಾಗುವುದು ಎಂದರು.

20ರೂ. ಬಾಂಡ್‌ ಪೇಪರ್‌ ಮೇಲೆ ಖಾಸಗಿ ಜಮೀನುಗಳಲ್ಲಿ ನಿವೇಶನ ಖರೀದಿಸಿ ಮನೆ ನಿರ್ಮಿಸಿದವರನ್ನು ಅಕ್ರಮ-ಸಕ್ರಮ ಯೋಜನೆಯಡಿ ಖಾತಾ ಮಾಡಿಕೊಡಲು ಬರಲ್ಲ. ಜಮೀನಿನ ಮಾಲಿಕರ ಹೆಸರಿನಲ್ಲಿ ಬಿನ್‌ ಶೇತ್ಕಿಗೆಅರ್ಜಿ ಸಲ್ಲಿಸಬೇಕು. ನಂತರ ಭೂದಾಖಲೆಗಳಲ್ಲಿ ಕೆಜೆಪಿ ಆದ ಮೇಲೆ ಖಾತೆ ಮಾಡಿಕೊಡಲಾಗುತ್ತದೆ. ಇದನ್ನು ವೈಯಕ್ತಿಕವಾಗಿ ಮಾಡಿಸಿಕೊಳ್ಳಬೇಕೆಂದು ಗ್ರಾಮಸ್ಥರಿಗೆ ತಿಳಿಸಿದರು.

ಗ್ರಾಮದಲ್ಲಿ ಸರಕಾರದ ವತಿಯಿಂದ ಸ್ಮಶಾನ ವ್ಯವಸ್ಥೆ ಕಲ್ಪಿಸಲಾಗಿದೆ. ಹಾಗೆ ಇದರ ಪಕ್ಕದಲ್ಲಿಪರಿಶಿಷ್ಟರಿಗೆ ಸರಕಾರದಿಂದ ನೀಡಿರುವಜಮೀನುಗಳಿವೆ. ಆದರೆ ಇವುಗಳಿಗೆ ತೆರಳುವ ಸಂಪರ್ಕ ರಸ್ತೆ ಇಲ್ಲ. ಸ್ಮಶಾನದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಮೂವರು ಯಾವುದೇ ಸಂಬಳ ಇಲ್ಲದೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರನ್ನು ಪಾಲಿಕೆ ವತಿಯಿಂದ ಗುತ್ತಿಗೆ ನೌಕರರನ್ನಾಗಿ ಕೆಲಸಕ್ಕೆತೆಗೆದುಕೊಳ್ಳುವಂತೆ ಮನವಿ ಮಾಡಲಾಯಿತು.ಈ ಕುರಿತು ಸೂಕ್ತ ಕ್ರಮ ಜರುಗಿಸಿ, ಪಾಲಿಕೆ ಆಯುಕ್ತರೊಂದಿಗೆ ಮಾತನಾಡುವುದಾಗಿ ತಹಶೀಲ್ದಾರ್‌ ಭರವಸೆ ನೀಡಿದರು.

ಗ್ರಾಮದ ದೇವಸ್ಥಾನಗಳಿಗೆ ಸುಣ್ಣ ಬಣ್ಣ ಬಳಿಸುವಂತೆ, ಸಾಮಾಜಿಕ ಭದ್ರತಾ ಯೋಜನೆಯಡಿಪಿಂಚಣಿ, ಭೂ ಮೋಜಣಿ, ಒಳ ಚರಂಡಿ ಸ್ವತ್ಛತೆ,ಕುಡಿಯುವ ನೀರಿನ ಸಂಪರ್ಕ, ಆಧಾರ್‌ ಲಿಂಕ್‌ ಹಾಗೂ ತಿದ್ದುಪಡಿಗಾಗಿ ಸಾರ್ವಜನಿಕರು ಅರ್ಜಿ ಸಲ್ಲಿಸಿದರು.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವಿಜಯಕುಮಾರ ರ್ಯಾಗಿ, ಅಪರತಹಶೀಲ್ದಾರ್‌ ವಿಜಯಕುಮಾರ ಕಡಕೋಳ, ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕಎಂ.ಜಿ. ಖಂಡಾಟೆ, ಅಬಕಾರಿ ಸಬ್‌ ಇನ್ಸ್‌ಪೆಕ್ಟರ್‌ ಮಂಜುನಾಥ ಜಿ., ಹಿರೇನಾಯ್ಕರ, ಬಾಬಾಸಾಬಲಡಗಿ ಸೇರಿದಂತೆ ಇತರೆ ಇಲಾಖೆಗಳ ಅಧಿ  ಕಾರಿಗಳು ಇದ್ದರು. ಇದೇ ಸಂದರ್ಭದಲ್ಲಿಗ್ರಾಮಸ್ಥರು ಅತಿವೃಷ್ಟಿ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ನಿರ್ವಹಸಿದ ತಹಶೀಲ್ದಾರ್‌,ಗ್ರಾಮ ಲೆಕ್ಕಿಗ ಪರಮಾನಂದ ಶಿವಳ್ಳಿಮಠ, ಗ್ರಾಮಸಹಾಯಕ ಮಾಲತೇಶ ಅವರನ್ನು ಸನ್ಮಾನಿಸಿದರು. ಇಂದಿರಾಗಾಂಧಿ ಮಾಸಾಶನ ಮಂಜೂರು ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

ಭೂಮಿ ಮಂಜೂರು :

ಗೋಕುಲ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯಕೇಂದ್ರ ಸ್ಥಾಪನೆಗೆ ಸರಕಾರಿ ಭೂಮಿ ಮಂಜೂರುಮಾಡಿದರೆ, ಆರೋಗ್ಯ ಇಲಾಖೆಯಿಂದ ಆಸ್ಪತ್ರೆ ಆರಂಭಿಸಲಾಗುವುದು. ಇದಕ್ಕೆ ಭೂಮಿಮಂಜೂರು ಮಾಡುವಂತೆ ಗ್ರಾಮಸ್ಥರುಮನವಿ ಮಾಡಿದರು. ಸರಕಾರದ ಗಾಂವ್‌ಠಾಣಾ ಭೂಮಿಯನ್ನು ಮಂಜೂರು ಮಾಡುವುದಾಗಿ ತಹಶೀಲ್ದಾರ್‌ ಹೇಳಿದರು.

33 ಅರ್ಜಿಗಳು ಸಲ್ಲಿಕೆ  :

ಗೋಕುಲದಲ್ಲಿ ನಡೆದ ಗ್ರಾಮ ವಾಸ್ತವ್ಯಕಾರ್ಯಕ್ರಮದಲ್ಲಿ ಒಟ್ಟು 33 ಅರ್ಜಿಗಳುಸಲ್ಲಿಕೆಯಾಗಿದವು. ಅವುಗಳಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 21 ಹಾಗೂ ಬೇರೆ ಇಲಾಖೆಗೆ ಸಂಬಂಧಿಸಿದ 12 ಅರ್ಜಿಗಳುಸಲ್ಲಿಕೆಯಾಗಿವೆ. ಇದರಲ್ಲಿ ಸ್ಥಳದಲ್ಲಿಯೇ 20 ಅರ್ಜಿಗಳನ್ನು ವಿಲೇವಾರಿ ಮಾಡಲಾಯಿತು. ಇನ್ನು 13 ಅರ್ಜಿಗಳು ಬಾಕಿ ಉಳಿದಿವೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.