ಗಜಮುಖನ ಸ್ವಾಗತಕ್ಕೆ ಅವಳಿನಗರ ಸಜ್ಜು

| ಗಣೇಶ ಪ್ರತಿಷ್ಠಾಪನೆಗೆ ಅಂತಿಮ ಸಿದ್ಧತೆಗಳು ಪೂರ್ಣ | ಉತ್ಸಾಹ ಕೊಂಚ ಕುಂದಿಸಿದ ಬೆಲೆ ಏರಿಕೆ-ಪ್ರವಾಹ

Team Udayavani, Sep 2, 2019, 9:15 AM IST

huballi-tdy-1

ಹುಬ್ಬಳ್ಳಿ: ವಿಘ್ನ ನಿವಾರಕನ ಪ್ರತಿಷ್ಠಾಪನೆಗೆ ವಾಣಿಜ್ಯ ನಗರಿ ಸಜ್ಜುಗೊಂಡಿದೆ. ಪ್ರವಾಹ, ಬೆಲೆ ಏರಿಕೆ ಹಬ್ಬದ ಉತ್ಸಾಹವನ್ನು ಕೊಂಚ ಕುಂದುವಂತೆ ಮಾಡಿದೆಯಾದರೂ ಜಿಟಿಜಿಟಿ ಮಳೆ ನಡುವೆಯೂ ಗಣೇಶನ ಸ್ವಾಗತಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ.

ನಗರದ ಪ್ರಮುಖ ರಸ್ತೆಗಳಾದ ದುರ್ಗದ ಬಯಲು, ದಾಜೀಬಾನ ಪೇಟೆ, ಮರಾಠಾ ಗಲ್ಲಿ, ಸ್ಟೇಶನ್‌ ರಸ್ತೆ, ಸರಾಫ್‌ ಗಟ್ಟಿ, ಹಿರೇಪೇಟೆ, ಶಿಂಪಿಗಲ್ಲಿ, ಎಂ.ಜಿ.ಮಾರ್ಕೆಟ್, ಹಳೇಹುಬ್ಬಳ್ಳಿ ದುರ್ಗದ ಬಯಲು, ಹಿರೇಪೇಟೆ, ಸಿದ್ಧಾರೂಢಮಠ, ಇಂಡಿ ಪಂಪ್‌, ಅಯೋಧ್ಯಾನಗರ, ಗೋಕುಲ ರಸ್ತೆ, ಗೋಕುಲ ಗ್ರಾಮ, ಗೋಪನಕೊಪ್ಪ, ದೇವಾಂಗಪೇಟೆ ಸೇರಿದಂತೆ ನಗರದೆಲ್ಲೆಡೆ ಗಣೇಶ ಪ್ರತಿಷ್ಠಾಪನೆಗೆ ಅಂತಿಮ ಸಿದ್ಧತೆಗಳು ಪೂರ್ಣಗೊಂಡಿವೆ.

ಜನ ವಿರಳ: ಪ್ರತಿ ವರ್ಷ ಗಣೇಶ ಚತುರ್ಥಿಯ ಒಂದೆರಡು ದಿನ ಹಾಗೂ ಕೆಲ ಗಣೇಶ ಮೂರ್ತಿಗಳನ್ನು 15 ದಿನಕ್ಕೂ ಮೊದಲೇ ಬುಕ್ಕಿಂಗ್‌ ಮಾಡಲಾಗುತ್ತಿತ್ತು. ಆದರೆ ಕಳೆದ ವರ್ಷದಿಂದ ಗಣೇಶ ಮೂರ್ತಿಗಳ ಮುಂಗಡ ಕಾಯ್ದಿರಿಸುವಿಕೆ ಪ್ರಮಾಣ ಕಡಿಮೆಯಾಗಿದೆ ಎನ್ನಲಾಗುತ್ತಿದೆ.

ಬಮ್ಮಾಪುರ ಓಣಿ, ಚಿತ್ರಗಾರ ಓಣಿ, ಹೊಸೂರ, ನೇಕಾರ ನಗರ ಅಷ್ಟೇ ಅಲ್ಲದೇ ತಡಸ, ದುಂಡಸಿ, ಬೆಂಡಿಗೇರಿ ಸುತ್ತಮುತ್ತಲಿನ ಗ್ರಾಮದ ಕಲಾಕಾರರು ಪ್ರತಿವರ್ಷ ಸಾವಿರಾರು ಸಣ್ಣ ಗಣೇಶ ಮೂರ್ತಿಗಳನ್ನು ಸಿದ್ಧಪಡಿಸಿಕೊಂಡು ಬಂದಿರುತ್ತಾರೆ. ಆದರೆ ಕಳೆದ ವರ್ಷ ಹಾಗೂ ಈ ವರ್ಷ ನೋಡಿದರೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಗಣೇಶ ಮೂರ್ತಿಗಳ ಖರೀದಿಗೆ ಆಗಮಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಕೆಲ ಬಾರಿ ಕೊನೆಯ ಕ್ಷಣದಲ್ಲಿ ಆಗಮಿಸಿ ನೇರವಾಗಿ ತೆಗೆದುಕೊಂಡು ಹೋಗುತ್ತಾರೆ ಎಂಬುದು ಗಣೇಶ ಮೂರ್ತಿ ಮಾರಾಟಗಾರರ ಅನಿಸಿಕೆ.

ಈ ಬಾರಿ ಸಣ್ಣ ಗಣೇಶ ಮೂರ್ತಿಗೆ 400 ರಿಂದ 2 ಸಾವಿರದವರೆಗೂ ದರ ನಿಗದಿ ಪಡಿಸಲಾಗಿದೆ. 2.5, 3 ಅಡಿ ಗಣೇಶನ ಮೂರ್ತಿಗಳಿಗೆ 6 ರಿಂದ 7 ಸಾವಿರದವರೆಗೆ ದರ ನಿಗದಿ ಪಡಿಸಲಾಗಿದೆ.

ಹಬ್ಬದ ಮುನ್ನಾ ದಿನ ಖರೀದಿ: ಗಣೇಶ ಚತುರ್ಥಿಯ ಮುನ್ನಾ ದಿನ ರವಿವಾರ ಖರೀದಿಗೆ ಮುಗಿ ಬಿದ್ದಿದ್ದ ಜನರು, ಪೂಜಾ ಕಾರ್ಯಗಳಿಗೆ ಬೇಕಾಗುವ ವಸ್ತುಗಳನ್ನು ಖರೀದಿಸಿದ್ದಾರೆ. ಐದು ತರಹದ ಹಣ್ಣುಗಳ ಸಣ್ಣಬುಟ್ಟಿಗೆ 100-150 ರೂ., ಬಾಳೆಹಣ್ಣು ಒಂದು ಡಜನ್‌ಗೆ 30-50 ರೂ.,ಗಳು ಹೂವು ಒಂದು ಮಾರು 20ರಿಂದ 50 ರೂ., ಬಾಳೆಕಂಬ ಒಂದಕ್ಕೆ 30-50 ರೂ.ಗಳು ಮಾರಾಟ ಮಾಡಲಾಗುತ್ತಿದೆ. ಜತೆಗೆ ಗಣೇಶನ ಅಲಂಕಾರಕ್ಕೆ ಬೇಕಾಗುವ ವಸ್ತುಗಳನ್ನು ಹೆಚ್ಚಿನ ಸಂಖ್ಯೆಯ ಜನರು ಮಾರಾಟಕ್ಕಿಟ್ಟಿದ್ದು, ಜನರು ಖರೀದಿಗೆ ಮುಂದಾಗಿದ್ದಾರೆ.

ಪ್ರತಿ ವರ್ಷ ಗಣೇಶನ ಮೂರ್ತಿಗಳು ಹಬ್ಬದ ಆಗಮನಕ್ಕಿಂತಲೂ ಮುಂಚಿತವಾಗಿಯೇ ಬುಕ್ಕಿಂಗ್‌ ಮಾಡಿ ನಂತರ ಬಂದು ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಈ ಬಾರಿ ಮಾಡಿರುವ ಸುಮಾರು 500 ಕ್ಕೂ ಹೆಚ್ಚು ಗಣೇಶ ಮೂರ್ತಿಗಳಲ್ಲಿ 100ಕ್ಕೂ ಹೆಚ್ಚು ಗಣೇಶ ಮೂರ್ತಿಗಳು ಹಾಗೇ ಇವೆ. ಕೊನೆಯ ಕ್ಷಣದಲ್ಲಿ ಏನಾಗಲಿದೆ ನೋಡಬೇಕು. ಆದರೆ ಗಣೇಶ ಮೂರ್ತಿಗಳು ಉಳಿಯಲ್ಲ. ಈ ಬಾರಿ ಜಿಲ್ಲೆಗೆ ಗೋಕಾಕ ಹತ್ತಿರದ ಕೊಣ್ಣೂರಿನಿಂದ ಸುಮಾರು 1ಲಕ್ಷಕ್ಕೂ ಅಧಿಕ ಗಣೇಶ ಮೂರ್ತಿಗಳು ನಗರಕ್ಕೆ ಆಗಮಿಸಿದ್ದು, ಇಲ್ಲಿ ಕಲಾವಿದರಿಗೆ ಹೊಡೆತ ಬಿದ್ದಂತಾಗಿದೆ. ಆದರೆ ನಾವು ಮಾಡಿರುವ ಗಣೇಶ ಮೂರ್ತಿಗಳು ಉಳಿಯುವುದಿಲ್ಲ. • ಸತೀಶ ಮುರಗೋಡ, ಗಣೇಶ ಮೂರ್ತಿ ಕಲಾಕಾರ
•ಬಸವರಾಜ ಹೂಗಾರ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.