![5-kushtagi](https://www.udayavani.com/wp-content/uploads/2024/06/5-kushtagi-415x249.jpg)
Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ
Team Udayavani, May 20, 2024, 1:02 PM IST
![Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ](https://www.udayavani.com/wp-content/uploads/2024/05/rowdy-620x342.jpg)
ಹುಬ್ಬಳ್ಳಿ: ಹಳೆಯ ವೈಷಮ್ಯದ ಹಿನ್ನೆಲೆ ರೌಡಿ ಗ್ಯಾಂಗ್ ಒಂದು ಇನ್ನೋರ್ವ ರೌಡಿ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ರವಿವಾರ ರಾತ್ರಿ ಬೆಂಡಿಗೇರಿ ಠಾಣೆ ವ್ಯಾಪ್ತಿಯ ಮಂಟೂರ ರಸ್ತೆಯಲ್ಲಿ ನಡೆದಿದೆ.
ರೌಡಿ ಶೀಟರ್ ಡೇವಿಡ್ ಯಮಾರ್ಥಿ ಹಲ್ಲೆಗೊಳಗಾಗಿದ್ದು, ದಾವೂದ್ ಗ್ಯಾಂಗ್ ಹಲ್ಲೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ನಗರದ ಉಪ ಕಾರಾಗೃಹದಲ್ಲಿದ್ದ ತಂಡಗಳ ಸದಸ್ಯರು ಒಬ್ಬರಿಗೊಬ್ಬರು ಜಗಳ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದೇ ಸೇಡು ಇಟ್ಟುಕೊಂಡು ರವಿವಾರ ರಾತ್ರಿ 8-10 ಜನ ಗುಂಪು ಡೇವಿಡ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಡೇವಿಡ್ ತಲೆಗೆ ಗಂಭೀರವಾದ ಗಾಯವಾಗಿದೆ.
ಗಲಾಟೆ ವಿಷಯ ತಿಳಿದು ಬೆಂಡಿಗೇರಿ ಪೊಲೀಸರು ಸ್ಥಳಕ್ಕೆ ತೆರಳಿ ತಿಳಿಗೊಳಿಸಿ ಗಾಯಗೊಂಡಿದ್ದ ಡೇವಿಡ್ನನ್ನು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಮುಂದಾದಾಗ, ಚಿಕಿತ್ಸೆ ಪಡೆಯಲ್ಲವೆಂದು ಅವರೊಂದಿಗೆ ರಂಪಾಟ ನಡೆಸಿದ್ದಾನೆ. ಅಲ್ಲದೇ ಆಸ್ಪತ್ರೆಯ ಸಿಬ್ಬಂದಿ ಜೊತೆ ಕಿರಿಕ್ ಮಾಡಿ ಗಾಜು, ಪೀಠೋಪಕರಣ ಧ್ವಂಸ ಮಾಡಿದ್ದಾನೆ. ಪೊಲೀಸರು ಅವನನ್ನು ತಡೆಯಲು ಮುಂದಾದಾಗ ಅವರಿಗೆ ಆವಾಜ್ ಹಾಕಿದ್ದಾನೆ. ಈ ಪುಡಿ ರೌಡಿಯ ಪುಂಡಾಟ ಕಂಡು ನಂತರ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ.
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೃಹ ಸಚಿವರು ಇಂದು ನಗರಕ್ಕೆ ಆಗಮಿಸುತ್ತಿರುವ ಸಂದರ್ಭದಲ್ಲೇ ಹಾಗೂ ಕಾನೂನು-ಸುವ್ಯವಸ್ಥೆ ವಿಭಾಗದ ಎಡಿಜಿಪಿ ನಗರದಲ್ಲೇ ಇರುವ ಸಂದರ್ಭದಲ್ಲಿ ಈ ಪುಡಿ ರೌಡಿಗಳ ಹೊಡೆದಾಟ ನಡೆದಿದೆ.
ಟಾಪ್ ನ್ಯೂಸ್
![5-kushtagi](https://www.udayavani.com/wp-content/uploads/2024/06/5-kushtagi-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![5-kushtagi](https://www.udayavani.com/wp-content/uploads/2024/06/5-kushtagi-150x90.jpg)
Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ
![Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ](https://www.udayavani.com/wp-content/uploads/2024/06/bjp-39-150x94.jpg)
Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ
![Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ](https://www.udayavani.com/wp-content/uploads/2024/06/mumbai-2-150x84.jpg)
Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ
![ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ](https://www.udayavani.com/wp-content/uploads/2024/06/bridge-2-150x92.jpg)
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
![4-belthanagdy](https://www.udayavani.com/wp-content/uploads/2024/06/4-belthanagdy-150x90.jpg)
Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.