![Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು](https://www.udayavani.com/wp-content/uploads/2024/12/moodigere-415x241.jpg)
ಸಮಾಜದ ಹಿತ ಕಾಪಾಡಲು ಎಲ್ಲರೂ ಒಂದಾಗಿ: ಬಸವಪ್ರಭು
Team Udayavani, Jul 2, 2018, 4:35 PM IST
![2-july-20.jpg](https://www.udayavani.com/wp-content/uploads/2018/07/2/2-july-20.jpg)
ಬೀಳಗಿ: ವೈಯಕ್ತಿಕ ಅಭಿಪ್ರಾಯ, ವಿಚಾರ ಮತ್ತು ರಾಜಕೀಯ ಜೀವನ ಏನೇ ಇರಲಿ ಅದು ಸಮಾಜದಿಂದ ಹೊರಗಿರಬೇಕು. ಸಮಾಜದ ಹಿತ ಕಾಪಾಡುವ ಕೆಲಸದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಒಂದಾಗಬೇಕು ಎಂದು ಗಾಣಿಗ ಸಮಾಜದ ಯುವ ಮುಖಂಡ ಬಸವಪ್ರಭು ಸರನಾಡಗೌಡ ಹೇಳಿದರು.
ತಾಲೂಕು ಗಾಣಿಗ ಸಮಾಜ ಹಾಗೂ ಯುವ ಘಟಕ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪಟ್ಟಣದ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ರವಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ಸಂಘಟನೆ ಮಾಡುವುದರ ಜತೆಗೆ ಅನ್ಯ ಸಮಾಜಗಳಗಳನ್ನು ಗೌರವದಿಂದ, ಪ್ರೀತಿಯಿಂದ ಕಾಣುವ ಸದ್ಗುಣ ರೂಢಿಸಿಕೊಳ್ಳಬೇಕು.
ಗಾಣಿಗ ಸಮಾಜದ ಜನ ಶೈಕಣಿಕ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿಕಾಣಬೇಕಿದೆ. ಆದಕಾರಣ, ಪ್ರತಿ ವರ್ಷವೂ ಸಮಾಜದ ಉತ್ತಮ ಸಾಧಕರನ್ನು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಮಾಜದ ವತಿಯಿಂದ ಪ್ರೋತ್ಸಾಹಿಸಿ ಗೌರವಿಸಲು ಇಂತಹ ವೇದಿಕೆಗಳ ಅವಶ್ಯಕತೆಯಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕತೆಯಿಂದ ಸದೃಢವಿದ್ದರೆ ರಾಜಕೀಯ ಮತ್ತು ಇತರೆ ಕ್ಷೇತ್ರಗಳಲ್ಲಿಯೂ ಕೂಡ ಎತ್ತರಕ್ಕೆ ಬೆಳೆಯಲು ಸಾಧ್ಯವಾಗುತ್ತದೆ. ಗಾಣಿಗ ಸಮಾಜದಲ್ಲಿ ಆರ್ಥಿಕತೆಯಿಂದ ಬಲಾಡ್ಯ ಇದ್ದವರು ಇಂತಹ ಕಾರ್ಯಕ್ರಮಗಳಿಗೆ ಪ್ರಾಯೋಜಕರಾದರೆ ಹೆಚ್ಚು ಪ್ರಯೋಜನಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿಭಾಗದಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕೋಲಾರ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು, ಮನ್ನಿಕೇರಿ ದಿಗಂಬರೇಶ್ವರ ಮಠದ ನಿರ್ವಾಣ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಾಲೂಕು ಗಾಣಿಗ ಸಮಾಜದ ಅಧ್ಯಕ್ಷ ಪ್ರಕಾಶ ಅಂತರಗೊಂಡ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷ ಶ್ರೀಶೈಲ ಸೂಳಿಕೇರಿ, ಅಶೋಕ ಲಾಗಲೂಟಿ, ವಿಠ್ಠಲ ಬಾಗೇವಾಡಿ, ಹನುಮಂತ ಸೂಳಿಕೇರಿ, ರಾಮಣ್ಣ ಕಾಳಪ್ಪಗೋಳ, ಪಿ.ಎಂ. ಹುಗ್ಗಿ, ಮಲ್ಲಪ್ಪ ಕಟಗೇರಿ, ದಾಕ್ಷಾಯಿಣಿ ಜಂಬಗಿ, ಶೋಭಾ ಬಗಲಿ, ವಿದ್ಯಾ ಬಾವಿ, ಚಂದ್ರು ಕಾಖಂಡಕಿ, ಲಕ್ಷ್ಮಣ ಚಿಣ್ಣನ್ನವರ, ಕವಿತಾ ಏಳೆಮ್ಮಿ, ಸಂತೋಷ ಏಳೆಮ್ಮಿ, ರಮೇಶ ಗಾಣಿಗೇರ, ಬಸವರಾಜ ಬಗಲಿ, ಎಸ್.ಎಂ. ಬಾವಿ, ಈರಣ್ಣ ತೋಳಮಟ್ಟಿ, ಗುರುಪಾದ ಬಗಲಿ, ಮಲ್ಲು ಜಲಗೇರಿ ಇತರರು ಇದ್ದರು.
ಟಾಪ್ ನ್ಯೂಸ್
![Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು](https://www.udayavani.com/wp-content/uploads/2024/12/moodigere-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Battery theft at Dharwad District Collector’s Office](https://www.udayavani.com/wp-content/uploads/2024/12/dc-2-150x87.jpg)
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
![ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ](https://www.udayavani.com/wp-content/uploads/2024/12/eshwarappa-150x78.jpg)
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
![13-](https://www.udayavani.com/wp-content/uploads/2024/12/13-1-3-150x90.jpg)
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
![AV-Bellad](https://www.udayavani.com/wp-content/uploads/2024/12/AV-Bellad-150x90.jpg)
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
![Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ](https://www.udayavani.com/wp-content/uploads/2024/12/hub-150x86.jpg)
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
![Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು](https://www.udayavani.com/wp-content/uploads/2024/12/moodigere-150x87.jpg)
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
![4](https://www.udayavani.com/wp-content/uploads/2024/12/4-40-150x80.jpg)
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
![UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!](https://www.udayavani.com/wp-content/uploads/2024/12/5-37-150x90.jpg)
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
![ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ](https://www.udayavani.com/wp-content/uploads/2024/12/sid-1-150x87.jpg)
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.