ಮೇವು ದಾಸ್ತಾನಿಗೆ ನೀಡಿ ಮೊದಲ ಆದ್ಯತೆ

•ಪಶು ಇಲಾಖೆ ಅಧಿಕಾರಿಗೆ ಜಿಪಂ ಸದಸ್ಯರ ಸೂಚನೆ•ರೈತರಿಗೆ ಅಗತ್ಯ ಬೀಜ ಮಾಹಿತಿ ನೀಡಲು ತಾಕೀತು

Team Udayavani, Jul 12, 2019, 1:13 PM IST

hubali-tdy-5..

ಕುಂದಗೋಳ: ಪಟ್ಟಣದ ತಾಪಂ ಸಭಾಭವನದಲ್ಲಿ ಹೆಸ್ಕಾಂ ಅಧಿಕಾರಿ ಟಿ.ಎಚ್. ಲಮಾಣಿ ವರದಿ ಮಂಡಿಸಿದರು.

ಕುಂದಗೋಳ: ಈಗತಾನೇ ಮಳೆ ಆರಂಭವಾಗಿದ್ದು, ಸುಮಾರು ಎರಡು ತಿಂಗಳು ಕಾಲ ಮೇವಿನ ಅವಶ್ಯಕತೆ ಇರಲಿದೆ. ರೈತರ ಜಾನುವಾರುಗಳಿಗೆ ಅಗತ್ಯ ಮೇವು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸದಸ್ಯ ಭರಮಪ್ಪ ಮುಗಳಿ ಪಶು ವೈದ್ಯಾಧಿಕಾರಿ ತಿರ್ಲಾಪುರ ಅವರಿಗೆ ಸೂಚನೆ ನೀಡಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ಗುರುವಾರ ಜರುಗಿದ ಕೆಡಿಪಿ ಸಭೆಯಲ್ಲಿ ತಿರ್ಲಾಪುರ ಅವರು ವರದಿ ಮಂಡಿಸುವಾಗ ಜಿಪಂ ಸದಸ್ಯ ಭರಮಪ್ಪ ಮುಗಳಿ ಮಧ್ಯ ಪ್ರವೇಶಿಸಿ ಮೇವು ಸಂಗ್ರಹ ಮಾಹಿತಿ ಕೇಳಿದರು. ರೈತರ ಬೇಡಿಕೆ ಮೇರೆಗೆ ಮೇವು ಸಂಗ್ರಹಿಸುತ್ತೇವೆ ಎಂದು ಹಾರಿಕೆ ಉತ್ತರ ನೀಡಿದಾಗ ಸಿಡಿಮಿಡಿಗೊಂಡ ಸದಸ್ಯ ಮುಗಳಿ, ಮೇವು ಕೇಂದ್ರದಲ್ಲಿ ಸದಾ ಮೇವು ಇದ್ದರೆ ರೈತರು ತಮಗೆ ಬೇಕಾದಾಗ ಒಯ್ಯುತ್ತಾರೆ ಎಂದು ತಾಕೀತು ಮಾಡಿದರು.

ಬೀಜಗಳ ಮಾಹಿತಿ ನೀಡಿದ್ದೀರಾ?: ಕೃಷಿ ಸಹಾಯಕ ಪ್ರಭಾರಿ ಅಧಿಕಾರಿ ಎಸ್‌.ಎಫ್‌. ರಾಯನಗೌಡ್ರ ಮಾತನಾಡುತ್ತಿರುವ ಮಧ್ಯ ಜಿಪಂ ಸದಸ್ಯ ಉಮೇಶ ಹೆಬಸೂರ ಮಾತನಾಡಿ, ಬಿತ್ತನೆ ಹಂಗಾಮಿನ ಈ ವೇಳೆ ಬೀಜಗಳ ಕುರಿತು ಮಾಹಿತಿ ನೀಡಿದ್ದೀರಾ ಎಂದು ಪ್ರಶ್ನಿಸಿದರು. ಮಾಹಿತಿ ನೀಡಿದ್ದೇವೆ ಎಂದು ಅಧಿಕಾರಿ ಹಾರಿಕೆ ಉತ್ತರ ನೀಡಿದಾಗ, ಈಗ ಯಾವ ಬಿಟಿ ಬೀಜ ಊರಬೇಕು, ಅದಕ್ಕೆ ಯಾವ ಔಷಧಿ ಮತ್ತು ಗೊಬ್ಬರ ನೀಡಬೇಕು ಎಂಬುದರ ಬಗ್ಗೆ ತಿಳಿವಳಿಕೆ ನೀಡಿಲ್ಲ. ಕಳೆದ ವರ್ಷ ಗುಡಗೇರಿಯಲ್ಲಿ ಅನೇಕ ರೈತರು ಬಿಟಿ ಬೀಜ ಊರಿ ಕೈಸುಟ್ಟುಕೊಂಡಿದ್ದಾರೆ. ಕಂಪನಿಯವರು ತಮ್ಮ ಲಾಭಕ್ಕಾಗಿ ರೈತರಿಗೆ ಮೋಸಗೊಳಿಸುತ್ತಿದ್ದಾರೆ. ಹೀಗಾಗಿ ಈ ಬಗ್ಗೆ ಮಾಹಿತಿ ನೀಡಲೇಬೇಕು ಎಂದು ಎಚ್ಚರಿಕೆ ನೀಡಿದರು.

ಅರಣ್ಯ ಸಹಾಯಕ ಅಧಿಕಾರಿ ಬಸವರಾಜ ಬೆನಕಟ್ಟಿ ವರದಿ ಮಂಡಿಸುತ್ತಿರುವಾಗ ಭರಮಪ್ಪ ಮುಗಳಿ ಮಾತನಾಡಿ, ಒಂದು ಸಸಿ ಬೆಳೆಸಲು ಎಷ್ಟು ಖರ್ಚು ಆಗುತ್ತದೆ ಎಂದು ಪ್ರಶ್ನಿಸಿದರು. ಎನ್‌ಆರ್‌ಜಿಯಡಿ 300, ಸಾಗಾಣಿಕೆಗೆ 150, ನೀರು ಹಾಕಿ ಬೆಳೆಸಲು 50 ರೂ. ಸೇರಿ ಒಟ್ಟು 500 ರೂ. ಖರ್ಚಾಗುತ್ತದೆ ಎಂದು ಉತ್ತರಿಸಿದರು. ಮೂರು ವರ್ಷದಲ್ಲಿ ಎಷ್ಟು ಸಸಿ ಬೆಳೆಸಿದ್ದೀರಿ ಎಂದು ಪ್ರಶ್ನಿಸಿದಾಗ ಬೆನಕಟ್ಟಿ ಮಾತನಾಡಿ, ಹಿಂದಿನದು ನನಗೆ ಗೊತ್ತಿಲ್ಲ. ನನ್ನ ಅವಧಿಯಲ್ಲಿ ಸರಿಯಾಗಿ ಬೆಳೆಸುತ್ತೇನೆ ಎಂದರು.

ಸಿಡಿಪಿಒ ಅನುಪಮಾ ಅಂಗಡಿ ಮಾತನಾಡಿ, ತಾಲೂಕಿನ 212 ಅಂಗನವಾಡಿ ಕೇಂದ್ರಗಳಲ್ಲಿ 76 ಬಾಡಿಗೆ ಕಟ್ಟಡದಲ್ಲಿವೆ. ಇದರಿಂದ ಮೂಲಸೌಲಭ್ಯ ಒದಗಿಸಲು ತೊಂದರೆಯಾಗುತ್ತಿದ್ದು, ನಿವೇಶನ ನೀಡಬೇಕು ಎಂದು ಮನವಿ ಮಾಡಿದರು.

ಭೂಸೇನಾ ನಿಗಮದ ಸಹಾಯಕ ಅಧಿಕಾರಿ ವರದಿ ಮಂಡಿಸುವಾಗ ಉಮೇಶ ಹೆಬಸೂರ ಮಾತನಾಡಿ, ಪೌರಾಡಳಿತ ಸಚಿವರಾಗಿದ್ದ ಶಿವಳ್ಳಿ ಅವರು ಚಾಲನೆ ನೀಡಿದ ಕಾಮಗಾರಿಗಳಿಗೆ ಯಾಕೆ ಅಡೆತಡೆಯಾಗುತ್ತಿದೆ ಎಂದಾಗ ತ್ವರಿತವಾಗಿ ಮುಗಿಸುತ್ತೇನೆ ಎಂದು ಹಾರಿಕೆ ಉತ್ತರ ನೀಡಿದರು. ಶಾಸಕಿ ಕುಸುಮಾವತಿ ಶಿವಳ್ಳಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯರಾದ ಉಮೇಶ ಹೆಬಸೂರ, ಎನ್‌.ಎನ್‌. ಪಾಟೀಲ, ಭರಮಪ್ಪ ಮುಗಳಿ, ಇಒ ಎಂ.ಎಸ್‌. ಮೇಟಿ ಮೊದಲಾದವರು ಸಭೆಯಲ್ಲಿ ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.