![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 13, 2019, 9:17 AM IST
ಧಾರವಾಡ: ಸಾಯಿ ಮಂದಿರದಲ್ಲಿ ಅನಾವರಣಗೊಳ್ಳಲಿರುವ 33 ಅಡಿ ಎತ್ತರದ ಅನ್ನಬ್ರಹ್ಮ ಮೂರ್ತಿ.
ಧಾರವಾಡ: ಕೆಲಗೇರಿಯ ಶ್ರೀ ಶಿರಡಿ ಸಾಯಿ ಬಾಬಾ ಸಂಸ್ಥೆಯ ವತಿಯಿಂದ ಸಾಯಿಬಾಬಾ ದೇವಸ್ಥಾನದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಜು. 14ರಿಂದ 16ರ ವರೆಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಿರಡಿ ಸಾಯಿ ಬಾಬಾ ಸಂಸ್ಥೆಯ ಅಧ್ಯಕ್ಷ ಮಹೇಶ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶಿರಡಿ ಸಾಯಿಬಾಬಾ ಮಂದಿರದಂತೆ 33 ಅಡಿ ಎತ್ತರದ ಅನ್ನಬ್ರಹ್ಮ ಮೂರ್ತಿಯನ್ನು ಮಂದಿರದ ಆವರಣದಲ್ಲಿ ನಿರ್ಮಿಸಲಾಗಿದೆ. ಇದು ಭಾರತದ ಅತಿ ಎತ್ತರದ ಮೂರ್ತಿಯಾಗಿದೆ. ಅಹ್ಮದ್ನಗರದ ಇಂಜಿನಿಯರ್ ಸಂತೋಷ ಶಂಕರ್ ರೋಹಕಲೆ ತಯಾರಿಸಿದ್ದಾರೆ. ಜು. 14ರಂದು ಬೆಳಗ್ಗೆ 10 ಗಂಟೆಗೆ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಧರ್ಮದರ್ಶಿ ಶ್ರೀ ಭೀಮೇಶ್ಚರಿ ಜೋಶಿ ಸಾನ್ನಿಧ್ಯದಲ್ಲಿ ಅನ್ನಬ್ರಹ್ಮ ಮೂರ್ತಿ ಅನಾವರಣ ಸಮಾರಂಭ ಜರುಗಲಿದೆ ಎಂದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮೂರ್ತಿ ಅನಾವರಣಗೊಳಿಸುವರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಎಚ್. ಕೋನರಡ್ಡಿ, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ ಆಗಮಿಸುವರು. ಮಹಾದಾನಿಗಳನ್ನು ಸನ್ಮಾನಿಸಲಾಗುವುದು. ಅಂದು ಮಧ್ಯಾಹ್ನ 12:30ರಿಂದ ಪ್ರಸಾದ ಸೇವೆ ಜರುಗಲಿದೆ ಎಂದು ತಿಳಿಸಿದರು.
ಜು. 16ರಂದು 6:30 ಗಂಟೆಗೆ ಮಹಾದ್ವಾರದ ಉದ್ಘಾಟನಾ ಸಮಾರಂಭ ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿದೆ. ಮಾಜಿ ಸಚಿವ ಬಸವರಾಜ ಹೊರಟ್ಟಿ ಮಹಾದ್ವಾರ ಉದ್ಘಾಟಿಸಲಿದ್ದು, ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿದಂತೆ ಗಣ್ಯರು ಆಗಮಿಸುವರು. ಸಂಜೆ 7:30ರಿಂದ ಧಾರವಾಡದ ನಾಟ್ಯ ಸ್ಫೂರ್ತಿ ಕಲ್ಚರಲ್ ಅಕಾಡೆಮಿ ಮತ್ತು ಶಾಂತಲಾ ನೃತ್ಯಾಲಯ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ರಾತ್ರಿ 8:30ರಿಂದ ಪಲ್ಲಕ್ಕಿ ಸೇವೆ, ರಾತ್ರಿ 10 ಗಂಟೆಗೆ ಶೇಜಾರತಿ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಉದಯ ಶೆಟ್ಟಿ, ಕಾರ್ಯದರ್ಶಿ ಗುರುಪಾದಯ್ಯ ಹೊಂಗಲಮಠ, ನಾರಾಯಣ ಕದಂ, ಕಿರಣ ಶಾ, ಸುರೇಶ ಹಂಪಿಹೊಳಿ, ಟಿ.ಟಿ. ಚವ್ಹಾಣ, ಭಾಸ್ಕರ್ ರಾಯ್ಕರ್, ಅಮೃತ ನರೇಂದ್ರ ಇದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.