ಸಮಾಜವನ್ನೇ ಮಂತ್ರವೆಂದು ತಿಳಿದಿದ್ದ ಹಾನಗಲ್ಲ ಕುಮಾರ ಶ್ರೀ


Team Udayavani, Jun 26, 2017, 3:50 PM IST

hub3.jpg

ಹುಬ್ಬಳ್ಳಿ: ಹಾನಗಲ್ಲ ಕುಮಾರಸ್ವಾಮಿಗಳು ಸಮಾಜವನ್ನೇ ಮಂತ್ರವೆಂದು ಅರಿತು ಸಮಾಜ ಹಾಗೂ ಶಿಷ್ಯರನ್ನು ಬೆಳೆಸಿದರು ಎಂದು ಮೂರುಸಾವಿರ ಮಠದ ಜಗದ್ಗುರು ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ  ಹೇಳಿದರು. 

ಇಲ್ಲಿನ ಮೂರುಸಾವಿರ ಮಠದ ಸಭಾಂಗಣದಲ್ಲಿ ಶ್ರೀ ಹಾನಗಲ್ಲ ಕುಮಾರಸ್ವಾಮಿಗಳ 150ನೇ ಜಯಂತಿ ಮಹೋತ್ಸವ ಅಂಗವಾಗಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ರವಿವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಚಾರಗೋಷ್ಠಿ ಹಾಗೂ ಕವಿಗೋಷ್ಠಿ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ವೇದ, ಶಾಸ್ತ್ರಗಳಲ್ಲಿ ಏಳುಸಾವಿರ ಮಂತ್ರಗಳಿವೆ. ಮಂತ್ರಗಳ ಸಂಪೂರ್ಣ ಅಧ್ಯಯನ, ಅನುಸಂಧಾನ ಮಾಡಿದ ಬಳಿಕವೇ ಗುರುಗಳು ಶಿಷ್ಯರಿಗೆ ದೀಕ್ಷೆ ನೀಡುತ್ತಿದ್ದರು ಎಂಬುದು ತಿಳಿದು ಬರುತ್ತದೆ. ಆದರೆ, ಹಾನಗಲ್ಲ ಕುಮಾರಸ್ವಾಮಿಗಳು ಇದಕ್ಕೆ ವ್ಯತಿರಿಕ್ತವಾಗಿ ಸಮಾಜವೇ ಮಂತ್ರವೆಂದು ತಿಳಿದುಕೊಂಡಿದ್ದರು ಎಂದರು.

ಮಾಜಿ ಸಂಸದ ಪ್ರೊ| ಐ.ಜಿ. ಸನದಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಹೂವಿನ ಬಣ್ಣ ಬೇರೆ ಬೇರೆ ಇದ್ದರೂ ಅದರ ಸುವಾಸನೆ ಒಂದೆ. ಆಕಳ ಬಣ್ಣ ಬೇರೆ ಬೇರೆಯಾದರೂ ಹಾಲಿನ ಬಣ್ಣ ಒಂದೆ. ಮನುಷ್ಯ ಬೇರೆ ಬೇರೆ ಧರ್ಮದವರಾಗಿದ್ದರೂ ಮಾನವತೆ ಒಂದೆ. ಎಲ್ಲರೂ ಒಂದೆಂಬ ಭಾವನೆಯಿಂದ ಕೂಡಿ ಬಾಳಿದರೆ ಭಾವೈಕ್ಯ, ಸಾಮರಸ್ಯ ಮೂಡುತ್ತದೆ ಎಂದರು. 

ವಿಧಾನ ಪರಿಷತ್‌ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಮಾತನಾಡಿ, ಚುಟುಕು ಸಾಹಿತ್ಯ ಮನುಷ್ಯನ ಜೀವನದಲ್ಲಿ ಬಹಳ ಪರಿಣಾಮ ಬೀರುತ್ತದೆ. ಸಾಹಿತ್ಯದ ರಸಾನುಭವವನ್ನು ಚುಟುಕು ಸಾಹಿತ್ಯದಲ್ಲಿ ಕಾಣಬಹುದು. ಹಾನಗಲ್ಲ ಕುಮಾರಸ್ವಾಮಿಗಳು ವಚನ ಸಾಹಿತ್ಯದ ತಾಳೆಗರಿಗಳನ್ನು ಫ.ಗು. ಹಳಕಟ್ಟಿ ಅವರಿಗೆ ಕೊಡದಿದ್ದಲ್ಲಿ ಬಹುಶಃ ವಚನ ಸಾಹಿತ್ಯ ಬೆಳಕಿಗೆ ಬರುತ್ತಿರಲಿಲ್ಲವೇನೋ.

ಇದು ಸ್ವಾಮೀಜಿಯವರ ಸಾಹಿತ್ಯದ ಬಗೆಗಿನ ಅಭಿಮಾನ ತೋರುತ್ತದೆ. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಚುಟುಕು ಸಾಹಿತ್ಯದ ಅಭಿರುಚಿ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಶಂಕರ ಕುಂಬಿ ಮೊದಲಾದವರಿದ್ದರು. ಪ್ರೊ| ಕೆಂದೂರ ಪ್ರಾರ್ಥಿಸಿದರು.

ಚುಸಾಪ ಪ್ರಸಾರಾಂಗ ನಿರ್ದೇಶಕ ಚನಬಸಪ್ಪ ಧಾರವಾಡಶೆಟ್ರಾ ಸ್ವಾಗತಿಸಿದರು. ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ದಾಕ್ಷಾಯಣಿ ಹಿರೇಮಠ ನಿರೂಪಿಸಿದರು. ನಂತರ ನಡೆದ ಹಾನಗಲ್ಲ ಕುಮಾರಸ್ವಾಮಿಗಳ ಕುರಿತ ರಾಜ್ಯಮಟ್ಟದ ವಿಚಾರಗೋಷ್ಠಿಯಲ್ಲಿ ಪ್ರೊ| ಎ.ಐ. ಮಳೆಣ್ಣವರ ಉಪನ್ಯಾಸ ನೀಡಿದರು. 

ಪ್ರೊ| ಎಸ್‌.ವಿ. ಪಟ್ಟಣಶೆಟ್ಟಿ, ವೀರನಗೌಡ ಮರೀಗೌಡ್ರ ವಿಷಯ ಮಂಡಿಸಿದರು. ಡಾ| ಎಂ.ಎಸ್‌. ಹುಲ್ಲೋಳಿ ಅಧ್ಯಕ್ಷತೆ ವಹಿಸಿದ್ದರು. ಕವಿ ಹಾಗೂ ಚುಟುಕು ಗೋಷ್ಠಿಯ ಅಧ್ಯಕ್ಷತೆಯನ್ನು ಶಿರಸಿಯ ಕೃಷ್ಣಭಟ್ಟರು ಹೆಗಡೆ ವಹಿಸಿದ್ದರು. ಪದ್ಮಜಾ ಉಮರ್ಜಿ, ಎಸ್‌.ಐ. ನೇಕಾರ ನಿರೂಪಿಸಿದರು.  

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.