![1-mangaluru](https://www.udayavani.com/wp-content/uploads/2024/07/1-mangaluru-415x268.jpg)
ಐಎನ್ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ
Team Udayavani, Apr 21, 2024, 11:11 PM IST
![ಐಎನ್ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ](https://www.udayavani.com/wp-content/uploads/2024/04/NADAA-620x356.jpg)
ಹುಬ್ಬಳ್ಳಿ: ಭ್ರಷ್ಟಚಾರಿಗಳು ಹಾಗೂ ಪರಿವಾರವಾದಿಗಳ ಸಮ್ಮಿಲ ನವೇ ಐಎನ್ಡಿಐಎ ಮೈತ್ರಿಕೂಟ ವಾಗಿದೆ. ಭ್ರಷ್ಟಾಚಾರಿಗಳ ರಕ್ಷಣೆಯೇ ಮೈತ್ರಿಕೂಟದ ಮುಖ್ಯ ಅಜೆಂಡಾ ಆಗಿದೆ.
ಮೈತ್ರಿಕೂಟದೊಂದಿಗೆ ಇರುವವರಲ್ಲಿ ಅರ್ಧ ಜನ ಜಾಮೀನಿನಲ್ಲಿದ್ದರೆ, ಇನ್ನರ್ಧಷ್ಟು ಜನ ಜೈಲಿನಲ್ಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವ್ಯಂಗ್ಯವಾಡಿದರು.
ಇಲ್ಲಿನ ಖಾಸಗಿ ಹೊಟೇಲ್ನಲ್ಲಿ ರವಿವಾರ ಸಂಜೆ ವಿವಿಧ ಸಮಾಜಗಳ ಪ್ರಮುಖರು, ಕೇಂದ್ರ ಸರಕಾರದ ಹಲವು ಯೋಜನೆಗಳ ಫಲಾನುಭವಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರ ಇದ್ದಾಗ ಹಗರಣಗಳನ್ನು ನಡೆಸಿ, ಭ್ರಷ್ಟಾಚಾರದಲ್ಲಿ ಮುಳಗಿದವರೆಲ್ಲ ಈಗ ಒಗ್ಗೂಡಿಕೊಂಡು ಮೈತ್ರಿಕೂಟ ಮಾಡಿ ಕೊಂಡಿದ್ದಾರೆ. ತಮ್ಮ ಕುಟುಂಬ ರಕ್ಷಿಸಬೇಕು, ಭ್ರಷ್ಟಾಚಾರಿಗಳಿಗೆ ರಕ್ಷಣೆ ನೀಡಬೇಕು ಇದೇ ಅವರ ಪ್ರಮುಖ ಉದ್ದೇಶವಾಗಿದೆ.
ಹತ್ತು ವರ್ಷಗಳ ಹಿಂದೆ ರಾಜಕೀಯ ಸಂಸ್ಕೃತಿ ಬದಲಾಗಿದೆ. ದೇಶದಲ್ಲಿ ಬದಲಾವಣೆ, ಹೊಸತನ ಅಸಾಧ್ಯ ಎಂಬ ಮನೋಭಾವದ ಜತೆಗೆ ಎಲ್ಲ ರಾಜಕಾರಣಿಗಳು ಭ್ರಷ್ಟಾ ಚಾರಿಗಳು ಯಾರು ಬಂದರೂ ವ್ಯತ್ಯಾಸವೇನು ಆಗುವುದಿಲ್ಲ ಎಂಬ ನಕಾರಾತ್ಮಕ ವಾತಾವರಣ ಉಂಟಾ ಗಿತ್ತು. ರಾಜಕೀಯ ವಾತಾವರಣ, ದೇಶದಲ್ಲಿ ಬದಲಾವಣೆ ಸಾಧ್ಯವೆಂಬ ಸಕಾರಾತ್ಮಕ ವಾತಾವರಣ 10 ವರ್ಷಗಳಿಂದ ಸಾಧ್ಯವಾಗಿದೆ. ಅದರ ಪ್ರತೀಕವೇ ವಿಕಸಿತ ಭಾರತ ಸಂಕಲ್ಪವಾಗಿದೆ.
ಪೂರ್ಣತೆಯೇ ಮೋದಿ ಗ್ಯಾರಂಟಿ
ಕತ್ತಲು ದಿನಗಳನ್ನು ನೋಡಿದಾಗ ಮಾತ್ರ ಬೆಳಕಿನ ದಿನಗಳ ಮಹತ್ವ ಗೊತ್ತಾಗುತ್ತದೆ. ಅಂತಹ ಅನುಭವವನ್ನು ದೇಶದ ಜನತೆ ಕಳೆದ ಹತ್ತು ವರ್ಷಗಳಿಂದ ಅದನ್ನು ಆನಂದಿಸಿದ್ದಾರೆ. ಕೇವಲ ಜಾತಿ, ಧರ್ಮ, ಒಂದು ಸಮು ದಾಯ ರೂಪದಲ್ಲಿ, ಮತಬ್ಯಾಂಕ್ ಉದ್ದೇಶ ದೊಂದಿಗೆ ಅಧಿಕಾರಕ್ಕೆ ಬರುವ ವಾತಾವರಣ ಬದಲಾಯಿಸಿರುವ ಪ್ರಧಾನಿ ಮೋದಿಯವರು ರೈತ, ಮಹಿಳೆ, ವಿದ್ಯಾರ್ಥಿ, ಯುವಕ, ಕಾರ್ಮಿಕ, ದಲಿತ, ಶೋಷಿತ ಸಹಿತ ಎಲ್ಲ ವರ್ಗದವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಸ್ಪರ್ಶವಾಗಬೇಕೆಂಬ ನಿಟ್ಟಿನಲ್ಲಿ ಆಡಳಿತ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
![1-mangaluru](https://www.udayavani.com/wp-content/uploads/2024/07/1-mangaluru-415x268.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.](https://www.udayavani.com/wp-content/uploads/2024/07/Pralhad-Joshi-1-150x91.jpg)
Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.
![Mahesh](https://www.udayavani.com/wp-content/uploads/2024/07/Mahesh-150x83.jpg)
Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ
![1-asdsad](https://www.udayavani.com/wp-content/uploads/2024/06/1-asdsad-6-150x92.jpg)
Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ
![prahlad-joshi](https://www.udayavani.com/wp-content/uploads/2024/06/prahlad-joshi-2-150x86.jpg)
Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ
![prahlad joshi](https://www.udayavani.com/wp-content/uploads/2024/06/prahlad-joshi-1-150x83.jpg)
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.