Hubli;ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ
Team Udayavani, Jul 6, 2024, 2:21 PM IST
ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಹಗರಣವನ್ನು ಸಿಬಿಐಗೆ ವಹಿಸಿದರೆ ಮಾತ್ರ ನಿಷ್ಪಕ್ಷಪಾತ ತನಿಖೆ ಸಾಧ್ಯ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರನ ನೇರಕ್ಕೆ ನಡೆದಿರುವ ಹಗರಣವಾಗಿದೆ. ತರಾತುರಿಯಲ್ಲಿ ಜಿಲ್ಲಾಧಿಕಾರಿ ಅವರನ್ನು ವರ್ಗಾವಣೆ ಮಾಡಿರುವುದು ಭ್ರಷ್ಟಾಚಾರದಲ್ಲಿ ತಾವು ಭಾಗಿ ಎಂಬುವುದನ್ನು ಸಾಬೀತುಪಡಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ ಬಹುದೊಡ್ಡ ಭ್ರಷ್ಟಾಚಾರವಾಗಿದೆ. ಇಡಿಒ ಹಗರಣ ಸಿದ್ದರಾಮಯ್ಯ ಅವರ ಗಮನಕ್ಕಿದೆ. 2014 ರಿಂದ 2018 ರಲ್ಲಿ ಇದರ ಪ್ರಮುಖ ಬೆಳವಣಿಗೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಮತ್ತು ಅವರ ಮಗನ ಅನುಮತಿಯಿಲ್ಲದೆ ಇದು ನಡೆಯಲು ಸಾಧ್ಯವಿಲ್ಲ. ಸ್ವಂತ ಲಾಭ ಮಾಡಿಕೊಳ್ಳಲು ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಏನು ಮಾಡಿಲ್ಲ ಅಂದರೆ ತರಾತುರಿಯಲ್ಲಿ ಜಿಲ್ಲಾಧಿಕಾರಿಯನ್ನು ಏಕೆ ವರ್ಗಾವಣೆ ಮಾಡಿದ್ದಿರಿ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಲೋಹಿಯಾವಾದಿ, ಸಮಾಜವಾದಿ ಅಂತ ಹೇಳಿಕೊಳ್ಳಲು ಅರ್ಹರಲ್ಲ. ಮುಡಾ ಮತ್ತು ಎಸ್.ಟಿ. ನಿಗಮದ ಹಗರಣದಲ್ಲಿ ನೇರವಾಗಿ ಸಿಎಂ ಭಾಗಿಯಾಗಿದ್ದಾರೆ ಎನ್ನುವುದು ನನ್ನ ಬಲವಾದ ಆರೋಪ. ಈ ಪ್ರಕರಣಗಳನ್ನು ಮುಚ್ಚಿ ಹಾಕಲು ಸರಕಾರ ಮುಂದಾಗಿದೆ. ಇಷ್ಟು ದಿನ ನಾಗೇಂದ್ರ ತಪ್ಪಿಸಿಕೊಳ್ಳಲು ಅವಕಾಶ ನೀಡಿ ಈಗ ನೋಟಿಸ್ ನೀಡಿದ್ದಾರೆ. ಭ್ರಷ್ಟಾಚಾರ ನಡೆಸಲು ಹೊಸ ಹೊಸ ಮಾರ್ಗ ಕಂಡುಕೊಳ್ಳುತ್ತಿದ್ದಾರೆ. ಹೇಗೆ ಭ್ರಷ್ಟಾಚಾರ ಮಾಡಬೇಕು ಎಂಬುವುದು ಮುಖ್ಯಮಂತ್ರಿಯವರಿಗೆ ಗೊತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್-ಯುವಕನಿಗೆ ಮರುಜನ್ಮ
Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ
Dharwad: ಖಾಸಗಿ ಬಸ್ನಲ್ಲಿ 77 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಜಪ್ತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Bhairadevi Review; ಅಘೋರಿ ಹಿಂದೆ ಘೋರ ಕಥನ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.