ಆರೋಗ್ಯ ತಪಾಸಣೆ ಶಿಬಿರದಲ್ಲಿ 667 ಜನರಿಗೆ ಔಷಧ ವಿತರಣೆ
Team Udayavani, Jan 27, 2017, 11:57 AM IST
ಧಾರವಾಡ: ದ್ವಿಚಕ್ರ ವಾಹನ ದುರಸ್ತಿ ಮಾಡುವ ಮೇಸ್ತ್ರಿಗಳ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರದಿಂದ ಬರುವ ದಿನಗಳಲ್ಲಿ ಹೊಸ ಯೋಜನೆ ಜಾರಿಗೆ ತರಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು.
ನಗರದ ಶಿವಾಜಿ ವೃತ್ತದಲ್ಲಿರುವ ಭಾರತ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣೆಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಅವರ ಮನವೊಲಿಸಿ ಶೀಘ್ರದಲ್ಲಿಯೇ ಹೊಸ ಯೋಜನೆ ಜಾರಿಗೆ ತರಲು ಶ್ರಮಿಸಲಾಗುವುದು ಎಂದರು.
ಇಎಸ್ಐ ಆಸ್ಪತ್ರೆಯಲ್ಲಿ ಮೇಸ್ತ್ರಿಗಳ ಆರೋಗ್ಯ ತಪಾಸಣೆ, ಜೀವವಿಮೆ ಹಾಗೂ ಅಪಘಾತ ವಿಮೆ ಮತ್ತು ಮೇಸ್ತ್ರಿಗಳ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ಸೌಲಭ್ಯ ಕಲ್ಪಿಸಲು ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮೇಸ್ತ್ರಿಗಳು ಗುಟ್ಕಾ, ಮದ್ಯಪಾನ ಸೇವನೆಯಂತಹ ದುಶ್ಚಟಗಳಿಂದ ದೂರ ಉಳಿದು, ಆರೋಗ್ಯ ಕಾಳಜಿ ಹೊಂದಬೇಕು. ಆ ಮೂಲಕ ಇತರರಿಗೆ ಮಾದರಿಯಾಗುವಂತಹ ಜೀವನ ಸಾಗಿಸಬೇಕು. ಕಡಿಮೆ ದರದಲ್ಲಿ ಸಮಾಜಮುಖೀ ಸೇವೆ ನೀಡಬೇಕು ಎಂದು ಸಲಹೆ ನೀಡಿದರು. ಮಂಜುನಾಥ ಕದಂ ಮಾತನಾಡಿದರು.
ಈ ಶಿಬಿರದಲ್ಲಿ ಒಟ್ಟು 667 ಜನರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲಾಯಿತು. ಇದೇ ವೇಳೆ 35 ಜನರು ರಕ್ತದಾನ ಮಾಡಿದರು. ಒಟ್ಟು 116 ಜನರ ರಕ್ತ ತಪಾಸಣೆ ಮಾಡಲಾಯಿತು. ಅಲ್ಲದೆ, 24 ಜನರಿಗೆ ಉಚಿತ ನೇತ್ರ ಶಸ್ತ್ರಚಿಕಿತ್ಸೆಗೆ ಒಳಪಡಿಸಲು ನಿರ್ಧರಿಸಲಾಯಿತು.
ರಾಷ್ಟ್ರಮಟ್ಟದ ಟಚ್ರಬ್ಬಿ ಕ್ರೀಡೆಯಲ್ಲಿ ಪಾಲ್ಗೊಂಡ ಮರಾಠ ವಿದ್ಯಾ ಪ್ರಸಾರಕ ಮಂಡಳಿಯ ವಿದ್ಯಾರ್ಥಿಗಳಿಗೆ ಹಾಗೂ ಜಿಲ್ಲಾಮಟ್ಟದ ಥ್ರೋ ಬಾಲ್ ಸ್ಪರ್ಧೆಯಲ್ಲಿ ವಿಜೇತರಾದ ವಿವಿಧ ಕಾಲೇಜ್ ವಿದ್ಯಾರ್ಥಿಗಳಿಗೆ ಟ್ರೋಫಿ, ಪ್ರಮಾಣ ಪತ್ರ ಹಾಗೂ ಬಹುಮಾನವನ್ನು ಸಚಿವ ವಿನಯ ಕುಲಕರ್ಣಿ ವಿತರಿಸಿದರು. ಶಿವಲೀಲಾ ಕುಲಕರ್ಣಿ, ಇಸ್ಲಾಯಿಲ್ ತಮಟಗಾರ, ಮನೋಜ ಕರ್ಜಗಿ, ಯಾಶೀನ್ ಹಾವೇರಿಪೇಟ, ನವೀನ್ ಕದಂ, ಡಾ| ವಿ.ಡಿ. ಕರ್ಪೂರಿಮಠ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ ಹೋರಾಟ: ಪಂಚಮಸಾಲಿ ಶ್ರೀ
Hubli: ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ
Pushpa 2: ರಿಲೀಸ್ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್ ಮಾಡಿದ ಅಲ್ಲು ಅರ್ಜುನ್ ʼಪುಷ್ಪ-2ʼ
By election; ಶಿಗ್ಗಾವಿ ಟಿಕೆಟ್ ಆಕಾಂಕ್ಷಿಗಳ ಎದೆಯಲ್ಲಿ ಢವಢವ
ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ
Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.