ಡಾ| ಪಾಂಡುರಂಗಿಗೆ ಕವಿವಿ ಗೌರವ ಡಾಕ್ಟರೆಟ್
Team Udayavani, May 3, 2018, 4:58 PM IST
ಧಾರವಾಡ: ಹಿರಿಯ ಮನೋವೈದ್ಯ ಡಾ| ಆನಂದ ಪಾಂಡುರಂಗಿ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೆಟ್ ನೀಡಿ ಗೌರವಿಸಿದೆ. ಕರ್ನಾಟಕದ ರಾಜ್ಯಪಾಲರ ಕಚೇರಿಯಿಂದ ಬುಧವಾರ ಸಂಜೆ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಈ ಕುರಿತು ಅಧಿಕೃತ ಮಾಹಿತಿ ಬಂದಿದೆ ಎಂದು ಕುಲಪತಿ ಡಾ.ಪ್ರಮೋದ ಬಿ.ಗಾಯಿ ಅವರು ಉದಯವಾಣಿಗೆ ತಿಳಿಸಿದ್ದಾರೆ.
ಈ ವರ್ಷ ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ನಿಂದ ಒಟ್ಟು 11 ಜನರ ಹೆಸರನ್ನು ಡಾಕ್ಟರೆಟ್ ಸಮಿತಿಗೆ ಶಿಫಾರಸ್ಸು ಮಾಡಲಾಗಿತ್ತು. ಸಮಿತಿಯು ಮೂರು ಜನರ ಹೆಸರನ್ನು ಕಳುಹಿಸಿತ್ತು. ಈ ಪೈಕಿ ರಾಜ್ಯಪಾಲರು ಡಾ.ಪಾಂಡುರಂಗಿ ಅವರಿಗೆ ಗೌರವ ಡಾಕ್ಟರೆಟ್ ನೀಡಲು ಸಮ್ಮತಿಸಿದ್ದಾರೆ. ಮೇ 5ರಂದು ನಡೆಯುವ ಕವಿವಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಡಾ.ಗಾಯಿ ತಿಳಿಸಿದರು. ಕಳೆದ ವರ್ಷ ಹಿರಿಯ ಸಾಹಿತಿ ಡಾ.ವಿ.ವಿ.ಐರಸಂಗ ಅವರಿಗೆ ಕವಿವಿ ಗೌರವ ಡಾಕ್ಟರೇಟ್ ಲಭಿಸಿತ್ತು.
ಡಾ.ಆನಂದ ಪಾಂಡುರಂಗಿ: ಮನೋವೈದ್ಯ ರಾಗಿರುವ ಡಾ.ಪಾಂಡುರಂಗಿ ಅವರು ಧಾರವಾಡದ ಮಿಚಿಗನ್ ಕಾಂಪೌಂಡ್ನಲ್ಲಿರುವ ತಮ್ಮ ಮನೆಯಂಗಳದಲ್ಲಿಯೇ ಮನೋಚಿಕಿತ್ಸಾ ಆಸ್ಪತ್ರೆ ಸ್ಥಾಪಿಸಿದ್ದು, ಪ್ರತಿನಿತ್ಯ ನೂರಾರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಕಡಿಮೆ ಎಲ್ಲಾ ಜಿಲ್ಲೆಗಳಿಂದಲೂ ಮನೋರೋಗಿಗಳು ಇವರ ಬಳಿ ಚಿಕಿತ್ಸೆಗಾಗಿ ಬರುತ್ತಾರೆ.
ಸಾಮಾಜಿಕ ಕಳಕಳಿ ಇರುವ ಡಾ.ಪಾಂಡುರಂಗಿ ಅವರು ಅನೇಕ ಶಿಕ್ಷಣ ಸಂಸ್ಥೆಗಳು, ಸಂಘಟನೆಗಳೊಂದಿಗೆ ಒಡನಾಟ ಹೊಂದಿದ್ದು, ಆ ಮೂಲಕ ತಮ್ಮನ್ನು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗದಗ ತೋಂಟದಾರ್ಯ ಮಠದ ಪ್ರಶಸ್ತಿ, ಬೆಳಗಾವಿ ನಾಗನೂರು ಮಠದ ಗೌರವ ಸನ್ಮಾನ ಸೇರಿದಂತೆ ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ನನ್ನ ಸಾಮಾಜಿಕ ಸೇವೆ ಗುರುತಿಸಿ ಕರ್ನಾಟಕ ವಿಶ್ವವಿದ್ಯಾಲಯ ನನಗೆ ಗೌರವ ಡಾಕ್ಟರೆಟ್ ನೀಡಿದ್ದು ಹರ್ಷ ತಂದಿದೆ. ನನ್ನ ಸೇವಾ ಕಾರ್ಯವನ್ನು ಈ ಗೌರವ ಇನ್ನಷ್ಟು ಹೆಚ್ಚಿಸಿದೆ.
ಡಾ.ಆನಂದ ಪಾಂಡುರಂಗಿ, ಹಿರಿಯ ಮನೋವೈದ್ಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.