ಡಾ|ಮಹಾಂತ ಶಿವಯೋಗಿಗಳಿಗೆ ಗೌರವ ನಮನ


Team Udayavani, May 21, 2018, 5:26 PM IST

21-may-24.jpg

ಇಳಕಲ್ಲ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ, ಮಹಾಂತ ಜೋಳಿಗೆಯ ಮೂಲಕ ಕ್ರಾಂತಿಕಾರಿ ಹೋರಾಟ ನಡೆಸಿದ್ದ ಇಳಕಲ್ಲ-ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನಮಠದ ಡಾ|ಮಹಾಂತ ಶಿವಯೋಗಿಗಳ ಅಂತ್ಯಕ್ರಿಯೆ ಸೋಮವಾರ ಬೆಳಗ್ಗೆ ಇಳಕಲ್ಲದ
ಗದ್ದುಗೆಯಲ್ಲಿ ನೆರವೇರಲಿದೆ.

ಇದಕ್ಕೂ ಮುಂಚೆ ಆರ್‌.ವೀರಮಣಿ ಕ್ರೀಡಾಂಗಣದಿಂದ ನಗರದ ಪ್ರಮುಖ ಬೀದಿಗಳಲ್ಲಿ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ನಾಡಿನ ಮಠಾಧೀಶರು, ಶರಣರು ಹಾಗೂ ಸಾವಿರಾರು ಭಕ್ತರು ಪಾಲ್ಗೊಳ್ಳಲಿದ್ದಾರೆ.

ಸವದಿ-ಹಿಪ್ಪರಗಿಯಲ್ಲಿ ದರ್ಶನ: ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ಲಿಂಗೈಕ್ಯರಾದ ಮಹಾಂತ ಶ್ರೀಗಳ ಪಾರ್ಥೀವ ಶರೀರವನ್ನು ಆಸ್ಪತ್ರೆಯಿಂದ ಗುರುಗಳು ಈ ಹಿಂದೆ ಪಟ್ಟಾಧಿಕಾರಿಯಾಗಿದ್ದ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸವದಿ ಮಠಕ್ಕೆ ತರಲಾಯಿತು. ಅಲ್ಲಿ ಸಾವಿರಾರು ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆದರು. ಭಕ್ತರ ಅಪೇಕ್ಷೆ ಮೇರೆಗೆ ಪೂಜ್ಯರ ಪೂರ್ವಾಶ್ರಮದ ಹುಟ್ಟೂರು ಜಮಖಂಡಿ ತಾಲೂಕಿನ ಹಿಪ್ಪರಗಿಗೆ ತರಲಾಯಿತು. ಅಲ್ಲಿ ನೂರಾರು ಭಕ್ತರು, ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿ ಕಂಬನಿ ಮಿಡಿದರು.

ಹಿಪ್ಪರಗಿಯಿಂದ ನೇರವಾಗಿ ಬಾಗಲಕೋಟೆ ನಗರದ ಪ್ರತಿಷ್ಠಿತ ಬಸವೇಶ್ವರ ವೀರಶೈವ ವಿದ್ಯಾರ್ವಧಕ ಸಂಘದ ಆವರಣದಲ್ಲಿರುವ ಲಿಂ| ಬೀಳೂರು ಗುರುಬಸವ ಅಜ್ಜನವರ ಗುಡಿ ಎದುರು ಪೂಜ್ಯರ ಪಾರ್ಥಿವ ಶರೀರ ಇರಿಸಲಾಯಿತು. ಬಿವಿವಿ ಸಂಘದಿಂದ ಅಂತಿಮ ನಮನ ಸಲ್ಲಿಸಲಾಯಿತು. 44 ವರ್ಷಗಳ ಬಿವಿವಿ ಸಂಘದ ಅಧ್ಯಕ್ಷರಾಗಿದ್ದ ಶ್ರೀಗಳ ಸೇವೆಯನ್ನು, ಸಂಘದ ಆಡಳಿತ ಮಂಡಳಿಯ ಪ್ರಮುಖರು ಸ್ಮರಿಸಿದರು. ಗಣ್ಯರು-ಮಠಾಧೀಶರ ದರ್ಶನ: ರಾತ್ರಿ ಬಿವಿವಿ ಸಂಘದ ಆವರಣದಿಂದ ನೇರವಾಗಿ ಇಳಕಲ್ಲದ ವಿಜಯ ಮಹಾಂತೇಶ್ವರ ಮಠಕ್ಕೆ ಕರೆ ತರಲಾಯಿತು. ಸಾವಿರಾರು ಭಕ್ತರು, ಸಾರ್ವಜನಿಕರು ಶ್ರೀಗಳ ಅಂತಿಮ ದರ್ಶನ ಪಡೆಯಲು ಕಾದು ಕುಳಿತಿದ್ದರು.

ರವಿವಾರ ಬೆಳಗ್ಗೆ ಶ್ರೀಗಳ ಪಾರ್ಥಿವ ಶರೀರವನ್ನು ನಗರದ ಆರ್‌. ವೀರಮಣಿ ಕ್ರೀಡಾಂಗಣಕ್ಕೆ ಕೊಂಡೊಯ್ಯಲಾಯಿತು. ಬೃಹತ್‌ ಆವರಣದಲ್ಲಿ ಭಕ್ತರ ದರ್ಶನಕ್ಕೆ ಇರಿಸಲಾಗಿದ್ದು, ನಾಡಿನ ವಿವಿಧ ಗಣ್ಯರು, ಮಠಾಧೀಶರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಉತ್ತರಾಧಿಕಾರಿ ಶ್ರೀ ಗುರುಮಹಾಂತ ಸ್ವಾಮೀಜಿ, ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ದಾವಣಗೆರೆಯ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಉಸ್ತುವಾರಿ ವಹಿಸಿದ್ದರು.

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ, ಕೋಡಿಮಠ ಶ್ರೀಗಳು ಡಾ| ಮಹಾಂತ ಶಿವಯೋಗಿಗಳ ಅಂತಿಮ ದರ್ಶನ ಪಡೆದರು. ಮಾಜಿ ಸಚಿವ, ಬಬಲೇಶ್ವರದ ಶಾಸಕ ಎಂ.ಬಿ. ಪಾಟೀಲ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಉದ್ಯಮಿ ಎಸ್‌.ಆರ್‌. ನವಲಿ ಹಿರೇಮಠ, ಬಿಜೆಪಿ ಸ್ಲಂ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ|ಆರ್‌. ಮಾರುತೇಶ ಮುಂತಾದವರು ಶ್ರೀಗಳ ಅಂತಿಮ ದರ್ಶನ ಪಡೆದು, ಕಂಬನಿ ಮಿಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.