ಏಷ್ಯಾದ 2ನೇ ಅತಿದೊಡ್ಡ ಮಾರುಕಟ್ಟೆ ಸ್ಥಿತಿ ಗಂಭೀರ


Team Udayavani, Mar 10, 2021, 5:20 PM IST

ಏಷ್ಯಾದ 2ನೇ ಅತಿದೊಡ್ಡ ಮಾರುಕಟ್ಟೆ ಸ್ಥಿತಿ ಗಂಭೀರ

| ಶುಲ್ಕ ಕಡಿತ ಹಿನ್ನೆಲೆ; ಅರ್ಧಕ್ಕರ್ಧ ಇಳಿದ ಎಪಿಎಂಸಿ ಆದಾಯ | ಸೆಸ್‌ ಥೈಲಿ ಹಗುರ-ಹೆಚ್ಚಿದ ನಿರ್ವಹಣೆಯ ಭಾರ

ಹುಬ್ಬಳ್ಳಿ: ರಾಜ್ಯ ಸರಕಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಗಳ ಅಧಿಕಾರ ವ್ಯಾಪ್ತಿ ಹಾಗೂ ಮಾರುಕಟ್ಟೆ ಶುಲ್ಕ ಕಡಿತಗೊಳಿಸಿದ್ದರಿಂದ ಎಪಿಎಂಸಿಗಳ ಆದಾಯ ಅರ್ಧಕ್ಕರ್ಧ ಇಳಿದಿದೆ. ಹೀಗಾಗಿ ಮೂಲಸೌಕರ್ಯಗಳ ನಿರ್ವಹಣೆದುಸ್ತರವಾಗಿದೆ. ಏಷ್ಯಾದ ಎರಡನೇಅತಿದೊಡ್ಡ ಮಾರುಕಟ್ಟೆ ಎಂಬ ಖ್ಯಾತಿ ಹೊಂದಿದ ಇಲ್ಲಿನ ಅಮರಗೋಳದ ಶ್ರೀ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆ ಆರ್ಥಿಕ ಸ್ಥಿತಿ ಗಂಭೀರವಾಗತೊಡಗಿದೆ.

ರಾಜ್ಯ ಸರಕಾರ ಶೇ.1.50 ಇದ್ದ ಎಪಿಎಂಸಿ ಮಾರುಕಟ್ಟೆ ಶುಲ್ಕ(ಸೆಸ್‌)ವನ್ನು ಶೇ. 0.60ಕ್ಕೆಕಡಿತಗೊಳಿಸಿದ್ದು, ಇದರಿಂದ ಎಪಿಎಂಸಿಯಆದಾಯಕ್ಕೆ ಭಾರಿ ಹೊಡೆತಬಿದ್ದಿದೆ. ಜೊತೆಗೆ  ಎಪಿಎಂಸಿ ಹೊರಗಡೆ ವ್ಯಾಪಾರ ಮಾಡಿದರೆ ಸೆಸ್‌ ಇಲ್ಲವಾಗಿದೆ. ಬಿಲ್‌ ಹಾಕಿದರೆ ಮಾತ್ರ ಕೆಲವರು ಸೆಸ್‌ ಕಟ್ಟುತ್ತಿದ್ದಾರೆ. ಹೀಗಾಗಿ ಎಪಿಎಂಸಿಯ ಆದಾಯದಲ್ಲಿ ಶೇ. 50ಕ್ಕೂಅಧಿಕ ಕಡಿತವಾಗಿದ್ದು, ಇದರಿಂದ ನಿರ್ವಹಣೆ ಮಾಡುವುದೇ ತುಂಬಾ ಕಷ್ಟವಾಗುತ್ತಿದೆ. ಸರಕಾರ ಎಪಿಎಂಸಿಗಳ ಆದಾಯ ಹೆಚ್ಚಳಕ್ಕೆ ಮುಂದಾಗದಿದ್ದರೆ ಹಾಗೂ ವಿಶೇಷ ಅನುದಾನ ನೀಡದಿದ್ದರೆ ಮುಂದಿನ ದಿನಗಳಲ್ಲಿಎಪಿಎಂಸಿಗಳು ಬಾಗಿಲು ಮುಚ್ಚಉವುದರಲ್ಲಿ ಸಂದೇಹವಿಲ್ಲ. ಈಗಾಗಲೇ ಆರ್ಥಿಕ ತೊಂದರೆಯಿಂದಾಗಿ ಉದ್ಯೋಗಿಗಳನ್ನುಕಡಿತಗೊಳಿಸುತ್ತಿದ್ದು, ಭದ್ರತಾ ಸಿಬ್ಬಂದಿ ಇನ್ನಿತರರನ್ನು ಕಡಿಮೆಗೊಳಿಸಲಾಗುತ್ತಿದೆ.

ಇದೇ ಸ್ಥಿತಿ ಮುಂದುವರಿದರೆ ನಿತ್ಯದ ಆಡಳಿತ ನಿರ್ವಹಣೆಗೂ ತೊಂದರೆ ತಪ್ಪಿದ್ದಲ್ಲ ಎನ್ನುವಂತಾಗಿದೆ. ತರಕಾರಿ, ಉಳ್ಳಾಗಡ್ಡಿ,ಆಲೂಗಡ್ಡೆಯ ಠೊಕ ವ್ಯಾಪಾರವು ಎಪಿಎಂಸಿಯಲ್ಲಿಯೇ ನಡೆದಿರುವುದರಿಂದ ಬಳಕೆದಾರರ ಶುಲ್ಕದಲ್ಲಿ ತಕ್ಕಮಟ್ಟಿನಲ್ಲಿ ಆದಾಯ ಬರುತ್ತಿದೆ. ಆದರೆ ಮಾರುಕಟ್ಟೆಶುಲ್ಕದಲ್ಲಿನ ಆದಾಯ ಗಣನೀಯವಾಗಿ ಕುಂಠಿತಗೊಂಡಿದ್ದರಿಂದ ಎಪಿಎಂಸಿ ನಿರ್ವಹಣೆ ಮಾಡುವುದು ಆಡಳಿತ ವರ್ಗಕ್ಕೆ ಕಷ್ಟಕರವಾಗಿದೆ.

ಉದ್ಯೋಗಿಗಳ ಕಡಿತ :

ಎಪಿಎಂಸಿ ತನ್ನ ಆದಾಯ ಕಡಿತಸರಿದೂಗಿಸಿಕೊಳ್ಳಲು ಹಾಗೂ ನಿರ್ವಹಣೆಮಾಡುವ ನಿಟ್ಟಿನಲ್ಲಿ ಸಿಬ್ಬಂದಿ ಕಡಿತಮಾಡಿದೆ. ಭದ್ರತಾ ಏಜೆನ್ಸಿ ಹಾಗೂಸಹಾಯಕ ಸಿಬ್ಬಂದಿ ಕಡಿತಗೊಳಿಸಿದೆ.

ಜೊತೆಗೆ ಭದ್ರತಾ ಸಿಬ್ಬಂದಿ, ಸ್ವತ್ಛತಾ ಸಿಬ್ಬಂದಿ,ಡಾಟಾ ಎಂಟ್ರಿ ಸೇರಿದಂತೆ ವಿದ್ಯುತ್‌,ನೀರು ನಿರ್ವಹಣೆಯ ಹೊರ ಗುತ್ತಿಗೆ ಸಿಬ್ಬಂದಿಯನ್ನೂ ಕೈಬಿಡಲಾಗಿದೆ.

ಅಕ್ಕಿ-ಗೋಧಿ ಸೆಸ್‌ ಕೂಡ ಇಲ್ಲ :

ಸರಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪ್ರಮುಖವಾಗಿ ಅಕ್ಕಿ ಮತ್ತು ಗೋ ದಿಯ ಸೆಸ್‌ ಎಪಿಎಂಸಿಗೆಬರುತ್ತಿತ್ತು. ಅದು ಸಹ ನಿಂತಿದೆ. ಭಾರತ ಆಹಾರನಿಗಮ (ಎಫ್‌ಸಿಐ)ದ ಗೋದಾಮುಗಳಲ್ಲಿಇರಿಸಲಾಗುತ್ತಿದ್ದ ಅಕ್ಕಿ ಮತ್ತು ಗೋ ದಿಯನ್ನು ವಿವಿಧ ಜಿಲ್ಲೆಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಇವು ಸಂಬಂಧಪಟ್ಟಎಪಿಎಂಸಿಗಳಿಗೆ ಬರುತ್ತಿದ್ದವು. ಅದಕ್ಕೂ ಖೋತಾಆಗಿದೆ. ಇದರಿಂದಾಗಿ ಎಪಿಎಂಸಿಗೆ ಬರುತ್ತಿದ್ದ ಆದಾಯಕ್ಕೆ ದೊಡ್ಡ ಹೊಡೆತ ಬಿದ್ದಿದೆ.

ಎಪಿಎಂಸಿ ಮಾರುಕಟ್ಟೆ ಶುಲ್ಕ ಹಾಗೂ ಅಧಿಕಾರ ವ್ಯಾಪ್ತಿ ಕಡಿತದಿಂದ ಆದಾಯ ಅರ್ಧಕ್ಕರ್ಧ ಕುಸಿದಿದೆ. ಇದರಿಂದ ನಿರ್ವಹಣೆ ಮಾಡುವುದೇ ಕಷ್ಟವಾಗಿದೆ. ರಾಜ್ಯಸರಕಾರವು ಎಪಿಎಂಸಿಯಲ್ಲಿ ಸ್ವಚ್ಛತೆಯನ್ನು ಮಹಾನಗರ ಪಾಲಿಕೆಯಿಂದ, ನೀರು ಸರಬರಾಜು ಜಲಮಂಡಳಿಯಿಂದ ಹಾಗೂವಿದ್ಯುತ್‌ ನಿರ್ವಹಣೆಯನ್ನು ಹೆಸ್ಕಾಂನಿಂದ ಮಾಡಿಕೊಟ್ಟರೆ ಅನುಕೂಲವಾಗುತ್ತದೆ. ಸರಕಾರಕ್ಕೆ ಮನವಿ ಮಾಡಲಾಗಿದ್ದು, ಯಾವ ನಿರ್ಧಾರ ಕೈಗೊಳ್ಳುತ್ತದೆ ನೋಡಬೇಕು. – ಡಾ| ಕೆ. ಕೊಂಡಿಗೌಡ, ಪ್ರಭಾರ ಕಾರ್ಯದರ್ಶಿ, ಎಪಿಎಂಸಿ ಹುಬ್ಬಳ್ಳಿ

 

­ಶಿವಶಂಕರ ಕಂಠಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.