Hubballi; ಆಟೋರಿಕ್ಷಾ ಚಾಲಕರ, ಮಾಲಕರ ಸಂಘದ ಅಧ್ಯಕ್ಷ ನ ಪುತ್ರನ ಹತ್ಯೆ
Team Udayavani, Jun 22, 2024, 9:55 PM IST
ಹುಬ್ಬಳ್ಳಿ: ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ, ಮಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಮಗ ಆಕಾಶ ಮಠಪತಿ (25) ಎಂಬಾತನನ್ನು ಆತನ ಸ್ನೇಹಿತರೇ ಇಲ್ಲಿನ ಆರ್.ಎಂ. ಲೋಹಿಯಾ ನಗರದ ಶಾಲೆಯೊಂದರ ಹಿಂಭಾಗದ ಬಯಲು ಜಾಗದಲ್ಲಿ ಕೊಲೆ ಮಾಡಿದ್ದಾರೆಂದು ಹೇಳಲಾಗುತ್ತಿದೆ.
ಮಧ್ಯಾಹ್ನ ಲೋಹಿಯಾ ನಗರ ಹಿಂಭಾಗದ ಮಿಡ್ ಮ್ಯಾಕ್ ಲೇಔಟ್ ನಲ್ಲಿ ಸ್ನೇಹಿತರು ಕೂಡಿಕೊಂಡು ಆಟವಾಡುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳವಾದಾಗ ಅದು ವಿಕೋಪಕ್ಕೆ ಹೋಗಿದೆ. ಇದೇ ವೇಳೆ ಹಲ್ಲೆ ನಡೆದಿದ್ದು, ಆಕಾಶ ಮಠಪತಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.
ಮಠಪತಿ ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದ ಎಂದು ಸಂಶಯ ವ್ಯಕ್ತವಾಗಿದೆ. ಕೊಲೆ ನಡೆದ ಸ್ಥಳಕ್ಕೆ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಡಿಸಿಪಿ ರವೀಶ, ಎಸಿಪಿ ಉಮೇಶ ಹಿರೇಮಠ ಸೇರಿದಂತೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Sharanas ವಚನಗಳ ಮೌಲ್ಯ ಮುಂದಿನ ಪೀಳಿಗೆಗೆ ತಲುಪಬೇಕು: ದತ್ತಾತ್ರೇಯ ಹೊಸಬಾಳೆ
Valmiki Corporation case: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ
Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ
Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.