Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ
Team Udayavani, Jun 29, 2024, 2:56 PM IST
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನೂತನ ಮಹಾಪೌರ-ಉಪ ಮಹಾಪೌರರಾಗಿ ಬಿಜೆಪಿಯ ರಾಮಪ್ಪ ಬಡಿಗೇರ ಹಾಗೂ ದುರಗಮ್ಮ ಬಿಜವಾಡ ಆಯ್ಕೆಯಾದರು.
ಶನಿವಾರ ನಡೆದ ಮಹಾಪೌರ ಚುನಾವಣೆಗೆ ಬಿಜೆಪಿಯಿಂದ ರಾಮಪ್ಪ ಬಡಿಗೇರ, ಕಾಂಗ್ರೆಸ್ ನಿಂದ ಇಮ್ರಾನ್ ಎಲಿಗಾರ, ಎಂಐಎಎಂ ನಿಂದ ಹುಸೇನ್ ಬಿ ಸ್ಪರ್ಧಿಸಿದ್ದರು. ಬಿಜೆಪಿಯ ರಾಮಪ್ಪ ಬಡಿಗೇರಗೆ 47 ಮತ ಬಂದರೆ, ಕಾಂಗ್ರೆಸ್ ನ ಇಮ್ರಾನ್ ಎಲಿಗಾರಗೆ 36, ಎಂಐಎಎಂನ ಹುಸೇನ್ ಬಿ ಅವರಿಗೆ ಮೂರು ಮತಗಳು ಬಂದವು.
ಉಪ ಮಹಾಪೌರ ಸ್ಥಾನಕ್ಕೆ ಬಿಜೆಪಿಯ ದುರ್ಗಮ್ಮ ಬಿಜವಾಡ, ಕಾಂಗ್ರೆಸ್ ನ ಮಂಗಳಮ್ಮ ಹಿರೇಮನಿ ಸ್ಪರ್ಧಿಸಿದ್ದರು. ದುರ್ಗಮ್ಮ ಪರವಾಗಿ 47 ಮತ ಬಂದರೆ, ಮಂಗಳಮ್ಮ ಅವರಿಗೆ 36 ಮತ ಬಂದವು.
ಒಟ್ಟು 82 ಸದಸ್ಯ ಬಲದ ಪಾಲಿಕೆಯಲ್ಲಿ ಚುನಾವಣೆ ವೇಳೆ ನಾಲ್ವರು ಸದಸ್ಯರು ಗೈರು ಹಾಜರಿದ್ದರೆ, ಮೂವರು ಸದಸ್ಯರು ತಟಸ್ಥರಾಗಿ ಉಳಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಧಾನಸಭೆ ಸದಸ್ಯರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಮಹೇಶ ಟಗಿನಕಾಯಿ, ವಿಧಾನ ಪರಿಷತ್ತು ಸದಸ್ಯರಾದ ಎಸ್.ವಿ.ಸಂಕನೂರು, ಪ್ರದೀಪ ಶೆಟ್ಟರ ಮತದಾನದಲ್ಲಿ ಪಾಲ್ಗೊಂಡುದ್ದರು.
ಬೆಳಗಾವಿ ಪ್ರಾದೇಶಿಕ ಆಯಕ್ತ ಎಸ್.ಬಿ.ಶೆಟ್ಟೆಣ್ಣವರ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಎಸ್.ಎಸ್.ಬಿರಾದಾರ, ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ
Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ
Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Sharanas ವಚನಗಳ ಮೌಲ್ಯ ಮುಂದಿನ ಪೀಳಿಗೆಗೆ ತಲುಪಬೇಕು: ದತ್ತಾತ್ರೇಯ ಹೊಸಬಾಳೆ
MUST WATCH
ಹೊಸ ಸೇರ್ಪಡೆ
Belagavi; ರೈತರಿಗೆ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್ ಗೆ 5 ತಿಂಗಳ ಜೈಲುಶಿಕ್ಷೆ
Parliament; ಹಿಂದೂಗಳು ಎಂದು ಹೇಳಿಕೊಳ್ಳುವವರು… ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ
Video: ಯುವಕರ ಹುಚ್ಚಾಟಕ್ಕೆ ಕೊನೆ ಎಂದು; ಗೆಳೆಯರ ಎದುರು ಜಲಪಾತಕ್ಕೆ ಜಿಗಿದು ಕೊಚ್ಚಿ ಹೋದ…
New Criminal Laws: ಪೂರ್ಣ ಸ್ವದೇಶಿ, ನ್ಯಾಯ ಆಧಾರಿತ, ಸಂತ್ರಸ್ತರ ಪರ- ಅಮಿತ್ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.