Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ


Team Udayavani, Sep 16, 2024, 2:40 PM IST

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

ಹುಬ್ಬಳ್ಳಿ: ನಗರದ ಹಳೆಯ ಕೋರ್ಟ್ ವೃತ್ತದಲ್ಲಿ ಮೇಲ್ಸೇತುವೆ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಮೃತಪಟ್ಟ ಎಎಸ್‌ಐ ಪ್ರಕರಣಕ್ಕೆ ಸಂಬಂಧಿಸಿ ಉಪನಗರ ಪೊಲೀಸರು ಗುತ್ತಿಗೆ ಕಂಪನಿಯ 11 ಜನರನ್ನು ಬಂಧಿಸಿದ್ದಾರೆ.

ಝಂಡು ಕನ್‌ಸ್ಟ್ರಕ್ಷನ್ ಕಂಪನಿಯ ನೌಕರರಾದ ಸುಪರ್‌ವೈ‌ಜರ್ ಹರ್ಷಾ ಹೊಸಗಾಣಿಗೇರ, ಲೈಜನಿಂಗ್ ಇಂಜಿನಿಯರ್ ಜಿತೇಂದ್ರಪಾಲ ಶರ್ಮಾ, ಇಂಜಿನಿಯರ್ ಭೂಪೇಂದರ ಪಾಲ್, ಕ್ರೇನ್ ಚಾಲಕ ಅಸ್ಲಂ ಅಲಿ, ನೌಕರರಾದ ಮೊಹಮ್ಮದ ಇಮಾದರೂ, ಮೊಹಮ್ಮದ ಮಸೂದರ ರೆಹಮಾನ, ಸಬೀಬ ಶೇಖ, ರಿಜಾವುಲ್ ಹಕ್, ಶಮೀಮ ಶೇಖ, ಮೊಹಮ್ಮದ ಆರೀಫ, ಲೇಬರ್ ಕಾಂಟ್ರಾಕ್ಟರ್ ಮೊಹಮ್ಮದ ರಬಿವುಲ್ ಹಕ್ ಬಂಧಿತರಾಗಿದ್ದಾರೆ. ಈ ಅವಘಡಕ್ಕೆ ಸಂಬಂಧಿಸಿ ಇನ್ನೂ ಕೆಲವರನ್ನು ಪೊಲೀಸರು ವಶಕ್ಕೆ ಪಡೆಯುವುದು ಬಾಕಿ ಇದೆ.

ಸೆ. 10ರಂದು ಕರ್ತವ್ಯಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಉಪನಗರ ಠಾಣೆ ಎಎಸ್‌ಐ, ಧಾರವಾಡ ಸತ್ತೂರಿನ ರಾರಾಜಿನಗರ ನಿವಾಸಿ ನಾಬಿರಾಜ ಜಯಪಾಲ ದಯಣ್ಣವರ (59) ಅವರ ತಲೆಯ ಮೇಲೆ ಕಬ್ಬಿಣದ ರಾಡ್‌ ಬಿದ್ದು ತೀವ್ರ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ರವಿವಾರ ಬೆಳಗಿನ ಜಾವ ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಗುತ್ತಿಗೆ ಕಂಪನಿಯ ನೌಕರರು ಮೇಲ್ಸೇತುವೆ ಕಾಮಗಾರಿ ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೆ ಇದ್ದುದರಿಂದ ಸೇತುವೆ ಮೇಲೆ ಕಬ್ಬಿಣದ ಬಾರ್‌ ಗಳನ್ನು ಸಾಗಿಸುತ್ತಿದ್ದಾಗ ನೌಕರರ ನಿರ್ಲಕ್ಷ್ಯದಿಂದ ಕಬ್ಬಿಣದ ಬಾರ್ ಎಎಸ್ಐ ಅವರ ತಲೆಯ ಮೇಲೆ ಬಿದ್ದು, ಅವರ ಹೆಲ್ಮೆಟ್ ಒಡೆದು ತಲೆಗೆ ಬಲವಾದ ಗಾಯವಾಗಿತ್ತು.

ಈ ಅವಘಡಕ್ಕೆ ಸಂಬಂಧಿಸಿ ಕಾಮಗಾರಿಯ ಗುತ್ತಿಗೆದಾರ ಝಂಡು ಕನ್‌ಸ್ಟ್ರಕ್ಷನ್ ಕಂಪನಿಯ ಎಂಡಿ ಸೇರಿದಂತೆ 19ಕ್ಕೂ ಹೆಚ್ಚು ಜನರ ವಿರುದ್ಧ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ShreeKanth

Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್

Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್‌ ಬಿದ್ದು ಗಾಯಗೊಂಡಿದ್ದ ಎಎಸ್‌ಐ ಸಾವು

Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್‌ ಬಿದ್ದು ಗಾಯಗೊಂಡಿದ್ದ ಎಎಸ್‌ಐ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.