Hubli: ಕಾಂಗ್ರೆಸ್ ನಿಂದ ಚುನಾವಣೆ ವೇಳೆ ಬಡವರ ಪರ ಎಂಬ ನಾಟಕ: ಪ್ರಹ್ಲಾದ ಜೋಶಿ
Team Udayavani, Jul 19, 2024, 7:14 PM IST
ಹುಬ್ಬಳ್ಳಿ: ಕಾಂಗ್ರೆಸ್ ಗೆ ಬಡವರ ಬಗ್ಗೆ ನಿಜವಾದ ಕಾಳಜಿ ಇಲ್ಲವೇ ಇಲ್ಲ. ಚುನಾವಣೆ ವೇಳೆ ಬಡವರ ಪರ ಎಂಬ ನಾಟಕ ಮಾಡುತ್ತಿದೆ. ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಲು ಕಾಂಗ್ರೆಸ್ ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ಬಿಜೆಪಿ ಆಡಳಿತದಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚಲಾಗುತ್ತದೆ ಎಂದು ಅಪಪ್ರಚಾರ ಮಾಡಿದ್ದ ಕಾಂಗ್ರೆಸ್ ಇದೀಗ ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚುವ ಸ್ಥಿತಿಗೆ ತಂದಿದೆ ಎಂದು ಅವರು ಟ್ವೀಟ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದಿರಾ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆ ಮಾಡುವ ಗುತ್ತಿಗೆದಾರರಿಗೆ ಅಂದಾಜು 47 ಕೋಟಿ ರೂ.ಗಳ ಬಾಕಿ ನೀಡದೆ ಕ್ಯಾಂಟೀನ್ ಗಳಿಗೆ ಬೀಗ ಹಾಕುವ ಸ್ಥಿತಿಗೆ ತಂದಿದೆ. ಗ್ಯಾರಂಟಿಗಳನ್ನು ನಿಭಾಯಿಸಲು ಆಗದೆ ಪರಿಶಿಷ್ಟರಿಗೆ ಮೀಸಲಿಟ್ಟ ಹಣಕ್ಕೂ ಸರ್ಕಾರ ಕೈ ಹಾಕಿದೆ. ಬಡವರ ಪರವಾಗಿ ತಮ್ಮ ಪಕ್ಷ ಎಂಬುದು ಕಾಂಗ್ರೆಸ್ ಹೇಳಿಕೆ ಕೇವಲ ಚುನಾವಣೆಯಲ್ಲಿ ಮತ ಗಳಿಕೆಯ ತಂತ್ರವಾಗಿದೆಯೇ ವಿನಃ ನೈಜ ಕಾಳಜಿ ಇಲ್ಲವೇ ಇಲ್ಲ ಎಂದು ಅವರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ
Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.