Hubli: ನಕಲಿ ಗಾಂಧಿಗಳ ಪಾದ ನೆಕ್ಕಿದವರು ಬಿ.ಕೆ ಹರಿಪ್ರಸಾದ್: ಪ್ರಲ್ಹಾದ ಜೋಶಿ ತಿರುಗೇಟು


Team Udayavani, Oct 12, 2024, 5:09 PM IST

Hubli: BK Hariprasad licked the feet of fake Gandhis: Pralhad Joshi

ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ನಕಲಿ ಗಾಂಧಿಗಳ ಪಾದ ನೆಕ್ಕಿದವರು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದ್ದಾರೆ.

“ಪ್ರಲ್ಹಾದ ಜೋಶಿ ಇವತ್ತಿಗೂ ಗೋಡ್ಸೆ ಪೂಜೆ ಮಾಡುತ್ತಾರೆ” ಎಂಬ ಹರಿಪ್ರಸಾದ್ ಹೇಳಿಕೆಗೆ ಜೋಶಿ ತಿರುಗೇಟು ಕೊಟ್ಟರು.

ಹುಬ್ಬಳ್ಳಿಯಲ್ಲಿ ಶನಿವಾರ (ಅ.12) ಮಾದ್ಯಮದವರೊಂದಿಗೆ ಮಾತನಾಡುತ್ತ ಹರಿಪ್ರಸಾದ್ ವಿರುದ್ಧ ತೀವ್ರ ಹರಿಹಾಯ್ದರು.

ಈಗಿನ ಕಾಂಗ್ರೆಸ್‌ ನಲ್ಲಿ ಇರುವರೆಲ್ಲಾ ನಕಲಿ ಗಾಂಧಿಗಳು. ಇಂಥ ನಕಲಿ ಗಾಂಧಿಗಳ ಪಾದ ನೆಕ್ಕುವ ಹರಿಪ್ರಸಾದ್, ನಮ್ಮ ಬಗ್ಗೆ ಹೇಳುವುದೇನು ಎಂದು ತರಾಟೆ ತೆಗೆದುಕೊಂಡರು.

ಹರಿಪ್ರಸಾದ್ ಮೊದಲು ತಮ್ಮ ಯೋಗ್ಯತೆಯನ್ನು ಅರಿಯಲಿ. ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಚಡ್ಡಿ-ನಿಕ್ಕರ್ ಬಗ್ಗೆ ಮಾತನಾಡಿದ್ದರು, ಆಗಲೇ ಸಿಎಂ ಇವರನ್ನು ಹೊರ ಹಾಕಲು ತಯಾರಾಗಿದ್ದರು ಎಂಬುದನ್ನು ನೆನಪಿಸುತ್ತಾ ಜಾಡಿಸಿದರು.

ಸಿದ್ದರಾಮಯ್ಯ ನಿಕ್ಕರ್ ಹಾಕಲ್ಲ ಎಂದೆಲ್ಲ ಹೇಳಿದಂಥ ಈ ವ್ಯಕ್ತಿ ಇದೀಗ ಸಿಎಂ ಪರ ಧ್ವನಿ ಎತ್ತುತ್ತಿದ್ದಾರೆ. ಬಹುಶಃ ಸಿಎಂ ನಾಲ್ವರನ್ನು ತೆಗೆದು ಹಾಕಿ ಹರಿಪ್ರಸಾದ್ ಗೆ ಸಚಿವ ಸ್ಥಾನ ಕೊಡುವುದಾಗಿ ಹೇಳಿರಬೇಕು ಎಂದು ಪ್ರಲ್ಹಾದ್ ಜೋಶಿ ಛೇಡಿಸಿದರು.

ಕಾಂಗ್ರೆಸ್ ನಾಯಕರು ಹೀಗೆಲ್ಲ ಮಾತನಾಡುತ್ತಲೇ ದೇಶದಲ್ಲಿ ತಿರಸ್ಕೃತಗೊಳ್ಳುತ್ತಿದ್ದಾರೆ. ಬಿ.ಕೆ.ಹರಿಪ್ರಸಾದ್ ಮೊದಲು ದೇಶದಲ್ಲಿ ತಮ್ಮ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ನೋಡಿಕೊಳ್ಳಲಿ ಎಂದು ಸಚಿವರು ವಾಗ್ದಾಳಿ ನಡೆಸಿದರು.

ಬಿಜೆಪಿ ಯಾವತ್ತೂ ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭ ಬಾಯ್ ಪಟೇಲ್ ಅವರಂಥ ಮಹಾನ್ ನಾಯಕರನ್ನು ಅತ್ಯಂತ ಗೌರವದಿಂದಲೇ ಕಾಣುತ್ತಿದೆ. ಎಲ್ಲರಿಗೂ ಸಮಾನ ಗೌರವವನ್ನೇ ಕೊಡುತ್ತಿದೆ. ಬಿಜೆಪಿ ಅಸಲಿ ಗಾಂಧಿಗಳಿಗೆ, ಗಾಂಧಿವಾದಿಗಳಿಗೆ ಯಾವತ್ತೂ ಗೌರವ ನೀಡುತ್ತದೆ. ನಕಲಿ ಗಾಂಧಿಗಳಿಗಲ್ಲ ಎಂದು ಹೇಳಿದರು.

ಮಹಾತ್ಮ ಗಾಂಧಿ ಅವರನ್ನು ಪ್ರಧಾನಿ ಮೋದಿ ಆದಿಯಾಗಿ ಬಿಜಿಪಿಯ ಪ್ರತಿಯೊಬ್ಬರೂ ಅತ್ಯಂತ ಗೌರವದಿಂದಲೇ ನೋಡುತ್ತಾರೆ. ಈ ಅಸಲಿ ಗಾಂಧಿಯವರ ಜೀವನಧಾರೆಗಳನ್ನು ಸ್ವತಃ ಮೋದಿ ಅವರೂ ಅನುಸರಿಸುತ್ತಿದ್ದಾರೆ ಎಂದು ಪ್ರಲ್ಹಾದ ಜೋಶಿ ಹೇಳಿದರು.

ಅಂಬೇಡ್ಕರ್ ಗೆ ಕಾಂಗ್ರೆಸ್ ಏನು ಗೌರವ ಕೊಟ್ಟಿದೆ? ದಲಿತರ ನಾಯಕ, ಸಂವಿಧಾನ ಶಿಲ್ಪಿ, ಮಹಾನ್ ಗಾಂಧಿವಾದಿಯೂ ಆಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಏನು ಗೌರವ ಕೊಟ್ಟಿದೆ? ಭಾರತ ರತ್ನ ಸಹ ಕೊಡಲಿಲ್ಲ ಎಂದು ಟೀಕಿಸಿದರು.

ಟಾಪ್ ನ್ಯೂಸ್

Mysore-Press

Tax Injustice: ತೆರಿಗೆ ಹಂಚಿಕೆಯಲ್ಲಿ ಕಡೆಗಣಿಸಲು ಕರ್ನಾಟಕವೇನು ಅನ್ಯಾಯ ಮಾಡಿದೆ?: ಸಿಎಂ

Kharge (2)

Terrorist ಪಕ್ಷ ದೇಶವಾಳುತ್ತಿದೆ…: ಮಲ್ಲಿಕಾರ್ಜುನ ಖರ್ಗೆ ಕಿಡಿ

shettar

Hubli ಗಲಭೆ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವುದು ದೊಡ್ಡ ದುರಂತ: ಶೆಟ್ಟರ್ ಕಿಡಿ

ಮಹಿಷಮರ್ದನ ರೀತಿಯಲ್ಲೇ ರಾಜ್ಯ ಸರ್ಕಾರದ ಮರ್ದನ: ರೇಣುಕಾಚಾರ್ಯ

Davanagere: ಮಹಿಷಮರ್ದನ ರೀತಿಯಲ್ಲೇ ರಾಜ್ಯ ಸರ್ಕಾರದ ಮರ್ದನ: ರೇಣುಕಾಚಾರ್ಯ

Mangaluru: ಓವರ್‌ ಟೇಕ್‌ ಗಲಾಟೆ; ಬಸ್‌ ಗೆ ನುಗ್ಗಿ ಕಂಡಕ್ಟರ್‌ ಗೆ ಹಲ್ಲೆ

Mangaluru: ಓವರ್‌ ಟೇಕ್‌ ಗಲಾಟೆ; ಬಸ್‌ ಗೆ ನುಗ್ಗಿ ಕಂಡಕ್ಟರ್‌ ಮೇಲೆ ಹಲ್ಲೆ

1-a-vishwa

Megastar Chiranjeevi;ವಿಶ್ವಂಭರ ಟೀಸರ್ ಬಿಡುಗಡೆ: ಸದ್ಯದ ಟ್ರೆಂಡ್ ಗೋಚರ

Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ

Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: State govt working to breed terrorists: Aravind Bellad

Hubli: ರಾಜ್ಯ ಸರ್ಕಾರವು ಭಯೋತ್ಪಾದಕರನ್ನು ಹುಟ್ಟು ಹಾಕುವ ಕೆಲಸ ಮಾಡುತ್ತಿದೆ: ಬೆಲ್ಲದ್

Hubli: ಗೋಪನಕೊಪ್ಪ ಕೊಲೆ ಪ್ರಕರಣ; ಕಾಲಿಗೆ ಗುಂಡು ಹೊಡೆದು ಇಬ್ಬರ ಬಂಧನ

Hubli: ಗೋಪನಕೊಪ್ಪ ಕೊಲೆ ಪ್ರಕರಣ; ಕಾಲಿಗೆ ಗುಂಡು ಹೊಡೆದು ಇಬ್ಬರ ಬಂಧನ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

ಹುಬ್ಬಳ್ಳಿ: ರಾಜ್ಯದಲ್ಲೂ ದೇಸಿ ಹಸುವಿಗೆ “ರಾಜ್ಯಮಾತಾ’ ಸ್ಥಾನಕ್ಕೆ ಕೂಗು

ಹುಬ್ಬಳ್ಳಿ: ರಾಜ್ಯದಲ್ಲೂ ದೇಸಿ ಹಸುವಿಗೆ “ರಾಜ್ಯಮಾತಾ’ ಸ್ಥಾನಕ್ಕೆ ಕೂಗು

Hubli: ಎಡೆಬಿಡದೆ ಸುರಿದ ಮಳೆ; ಕೆರೆಯಂತಾದ ರಸ್ತೆಗಳು

Hubli: ಎಡೆಬಿಡದೆ ಸುರಿದ ಮಳೆ; ಕೆರೆಯಂತಾದ ರಸ್ತೆಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Malpe: ಕುಸಿದು ಬಿದ್ದು ವ್ಯಕ್ತಿ ಸಾವು

Malpe: ಕುಸಿದು ಬಿದ್ದು ವ್ಯಕ್ತಿ ಸಾವು

Bantwal: ಬಿ.ಸಿ.ರೋಡಿನ ವ್ಯಕ್ತಿ ಕುಸಿದು ಬಿದ್ದು ಮೃತ್ಯು

Bantwal: ಬಿ.ಸಿ.ರೋಡಿನ ವ್ಯಕ್ತಿ ಕುಸಿದು ಬಿದ್ದು ಮೃತ್ಯು

3

Hiriydaka: ಹಿರಿಯಡಕ ನಿವಾಸಿ, ಬೆಂಗಳೂರು ಉದ್ಯಮಿ ತೀರ್ಥಳ್ಳಿಯಲ್ಲಿ ಆತ್ಮಹತ್ಯೆ

Mysore-Press

Tax Injustice: ತೆರಿಗೆ ಹಂಚಿಕೆಯಲ್ಲಿ ಕಡೆಗಣಿಸಲು ಕರ್ನಾಟಕವೇನು ಅನ್ಯಾಯ ಮಾಡಿದೆ?: ಸಿಎಂ

Kharge (2)

Terrorist ಪಕ್ಷ ದೇಶವಾಳುತ್ತಿದೆ…: ಮಲ್ಲಿಕಾರ್ಜುನ ಖರ್ಗೆ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.