Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್
Team Udayavani, Oct 7, 2024, 4:08 PM IST
ಹುಬ್ಬಳ್ಳಿ: ಕ್ರಿಕೆಟಿಗ ಕೆ.ಎಲ್.ರಾಹುಲ್ (KL Rahul) ಅವರು ಇಲ್ಲಿನ ಪ್ರತಿಭಾವಂತ ಬಡ ವಿದ್ಯಾರ್ಥಿಯೊಬ್ಬರ ಎರಡನೇ ವರ್ಷದ ಶೈಕ್ಷಣಿಕ ಶುಲ್ಕ ಪಾವತಿಸುವ ಮೂಲಕ ಕೊಟ್ಟ ಭರವಸೆಯನ್ನು ಈಡೇರಿಸಿದ್ದಾರೆ.
ಇಲ್ಲಿನ ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಬಿಕಾಂ ಕಲಿಯುತ್ತಿರುವ ಅಮೃತ್ ಮಾವಿನಕಟ್ಟಿ ಎನ್ನುವ ವಿದ್ಯಾರ್ಥಿಯ ಎರಡನೇ ವರ್ಷದ ಶುಲ್ಕವನ್ನು ಕೆ.ಎಲ್.ರಾಹುಲ್ ಅವರು ಪಾವತಿ ಮಾಡಿದ್ದಾರೆ. 3 ಮತ್ತು 4 ನೇ ಸೆಮಿಸ್ಟರ್ ನ 75,504 ರೂ. ಪಾವತಿಸಿದ್ದಾರೆ. ಇದರ ಮೂಲಕ ಕಳೆದ ವರ್ಷ ಬಿಕಾಂ ಮೊದಲ ವರ್ಷದ ಶುಲ್ಕ ಪಾವತಿ ಮಾಡುವ ಸಂದರ್ಭದಲ್ಲಿ ಎರಡನೇ ವರ್ಷದ ಶುಲ್ಕ ಭರಿಸುವ ಭರವಸೆ ನೀಡಿದ್ದರು. ಬಡ ಪ್ರತಿಭಾನ್ವಿತ ವಿದ್ಯಾರ್ಥಿ ಅಮೃತ್ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದವರು.
ವಿದ್ಯಾರ್ಥಿ ಅಮೃತ ಮೊದಲನೇ ವರ್ಷದ ಬಿಕಾಂ ಪರೀಕ್ಷೆಯಲ್ಲಿ 9.3 ರಷ್ಟು CGPA ಪಡೆದಿದ್ದು, ಈ ವರ್ಷ ಇನ್ನಷ್ಟು ಹೆಚ್ಚಿನ ಅಂಕ ಗಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾನೆ. “ರಾಹುಲ್ ಸರ್ ಅವರು ಒಳ್ಳೆಯ ಉದ್ದೇಶ ಇಟ್ಟುಕೊಂಡು ನೆರವು ನೀಡಿದ್ದಾರೆ. ಅವರ ನಂಬಿಕೆ ಉಳಿಕೊಳ್ಳುತ್ತೇನೆ. ಮುಂದೆ ಇದಕ್ಕಿಂತ ಹೆಚ್ಚಿನ ಅಂಕ ಪಡೆಯುತ್ತೇನೆ” ಎಂದು ಅಮೃತ್ ಸಂತಸ ಹಾಗೂ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ಕೊಂಡಿಯಾದ ಮಂಜುನಾಥ: ಇಲ್ಲಿನ ಸಮಾಜ ಸೇವಕ ಮಂಜುನಾಥ ಹೆಬಸೂರ ಅವರ ಮೂಲಕ ಕೆ.ಎಲ್. ರಾಹುಲ್ ಮೊದಲನೇ ವರುಷದ ಕಾಲೇಜಿನ ಪೂರ್ತಿ ಶುಲ್ಕವನ್ನು ಭರಿಸಿದ್ದರು. ಅದೇ ರೀತಿ ಈಗ ಎರಡನೇ ವರುಷದ ಶುಲ್ಕವನ್ನು ಭರಿಸಿದ್ದಾರೆ. ಕಳೆದ ವರ್ಷ ವಿದ್ಯಾರ್ಥಿಯ ಸಂಕಷ್ಟದ ಕುರಿತು ದಾನಿಗಳ ಗಮನ ಸೆಳೆಯುವ ಕೆಲಸವಾಗಿತ್ತು. ಅದಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಸ್ಪಂದಿಸಿದ್ದರು. ವಿದ್ಯಾರ್ಥಿಯ ಪ್ರಗತಿ ಪರಿಗಣಿಸಿ ಅವರೇ ಕರೆ ಮಾಡಿ ಎರಡನೇ ವರ್ಷದ ಶುಲ್ಕವನ್ನು ಭರಿಸಿದ್ದಾರೆ. ವಿದ್ಯಾರ್ಥಿ ಅಮೃತ್ ಕೂಡ ಅವರ ವಿಶ್ವಾಸವನ್ನು ಉಳಿಸಿಕೊಂಡಿದ್ದಾನೆ ಎಂದು ಮಂಜುನಾಥ ಹೆಬಸೂರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ
Mangaluru: ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ
Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್
Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ
Chitradurga: ಮುರುಘಾ ಶರಣರಿಗೆ ಜಾಮೀನು ಮಂಜೂರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ
AAP;ಎಂಪಿ ಮೇಲೆ ಇಡಿ ದಾಳಿ: ಸೋಲಿಸಲಾಗದೆ ಮೋದಿ ಈ ರೀತಿ ಮಾಡುತ್ತಿದ್ದಾರೆ..
ನಶಿಸಿ ಹೋಗಿದ್ದ ಅಲಸಂದೆ ತಳಿಗೆ ಮರುಜೀವ! ಯಾವ ಜಿಲ್ಲೆಗೆ ಈ ತಳಿ ಸೂಕ್ತ?
By Polls: ವಿಧಾನ ಪರಿಷತ್ ಉಪಚುನಾವಣೆ: ಅಂತಿಮ ಕಣದಲ್ಲಿ ನಾಲ್ವರು ಅಭ್ಯರ್ಥಿಗಳು
Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.