ಹುಬ್ಬಳ್ಳಿ-ಧಾರವಾಡ ಬಂದ್ಗೆ ಉತ್ತಮ ಪ್ರತಿಕ್ರಿಯೆ
Team Udayavani, Jan 9, 2018, 6:50 AM IST
ಧಾರವಾಡ/ಹುಬ್ಬಳ್ಳಿ: ಕೋರೆಗಾಂವ್ ವಿಜಯೋತ್ಸವ ವೇಳೆ ಹಿಂಸಾಚಾರ, ವಿಜಯಪುರದ ದಲಿತ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಸಚಿವ ಅನಂತಕುಮಾರ ಅವರ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ವಿವಿಧ ದಲಿತ ಸಂಘಟನೆಗಳು ಸೋಮವಾರ ಕರೆ ನೀಡಿದ್ದ ಹುಬ್ಬಳ್ಳಿ ಧಾರವಾಡ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಧಾರವಾಡದ ಆಲೂರು ವೆಂಕಟರಾವ್ ವೃತ್ತದಲ್ಲಿ ಬೆಳಗ್ಗೆ ಪ್ರತಿಭಟನಾಕಾರರು ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಟೈರ್ ಸುಟ್ಟ ಹೊಗೆಯಿಂದ ಮಹಿಳೆಯರಿಬ್ಬರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆಯೂ ನಡೆಯಿತು. ಸಂಜೆ ವೇಳೆ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಕೈಗೊಂಡು ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಹುಬ್ಬಳ್ಳಿಯ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸಿದರು. ಕಾಂಗ್ರೆಸ್-ಜೆಡಿಎಸ್ನ ನಾಯಕರೂ ಬೆಂಬಲ ವ್ಯಕ್ತಪಡಿಸಿದರು. ನಂತರ ಕೇಶವಕುಂಜಕ್ಕೆ ಮುತ್ತಿಗೆ ಯತ್ನವೂ ನಡೆಯಿತು. ಹಳೇ ಹುಬ್ಬಳ್ಳಿ ಭಾಗದಲ್ಲಿ ರಸ್ತೆಯ ಮಧ್ಯೆ ಕಲ್ಲುಗಳನ್ನು ಇಟ್ಟು ಗಾಜಿನ ಬಾಟಲಿಗಳನ್ನು ರಸ್ತೆಗೆಸೆದು ಆಕ್ರೋಶ ವ್ಯಕ್ತಪಡಿಸಿದರು.
ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿರಲಿಲ್ಲ. ಆದರೆ, ಬಂದ್ ತೀವ್ರ ಸ್ವರೂಪ ಪಡೆದು ವಾಹನಗಳ ಸಂಚಾರ ಸ್ತಬ್ಧವಾಗುತ್ತಿದ್ದಂತೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಯಿತು. ಆಸ್ಪತ್ರೆ, ಮೆಡಿಕಲ್ ಶಾಪ್ ಹೊರತುಪಡಿಸಿ ಪೆಟ್ರೋಲ್ ಬಂಕ್ಗಳು, ಚಿತ್ರಮಂದಿರಗಳು ಸೇರಿದಂತೆ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಲಾಯಿತು.
ಕಲ್ಲು ತೂರಾಟ:
ಹುಬ್ಬಳ್ಳಿಯಲ್ಲಿ ರಸ್ತೆಗಿಳಿದ ಖಾಸಗಿ ಸಂಸ್ಥೆ ಬಸ್, ಕೋರ್ಟ್ ವೃತ್ತದಲ್ಲಿ ಆಟೋ ರಿಕ್ಷಾ ಹಾಗೂ ಮಿನಿ ಟೆಂಪೋಗಳಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದು, ಹಳೇ ಬಸ್ನಿಲ್ದಾಣದ ವಿಚಾರಣಾ ಕೊಠಡಿಯ ಗಾಜನ್ನು ಪುಡಿ ಮಾಡಿದ್ದಾರೆ. ಗಣೇಶ ಪೇಟೆಯ ಕ್ರಾಸ್ನಲ್ಲಿರುವ ಜನೆರಿಕ್ ಔಷಧ ಮಳಿಗೆಗೂ ಪ್ರತಿಭಟನಾಕಾರರು ಕಲ್ಲು ಎಸೆದು ಜಖಂಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್ ತಯಾರಿ
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.