ಕಲ್ಪವೃಕ್ಷ ವಾಗಿ ಅರಳಲಿದೆ ಫ‌ಲದಾಯಕ ಗಣೇಶ


Team Udayavani, Sep 9, 2018, 5:10 PM IST

9-sepctember-27.jpg

ಹುಬ್ಬಳ್ಳಿ: ಪರಿಸರಸ್ನೇಹಿ ಗಣೇಶಮೂರ್ತಿ ಜತೆಗೆ ವೃಕ್ಷಾರೋಹಣ ನಿಟ್ಟಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ವದ ಹೆಜ್ಜೆ ಇರಿಸಿದೆ. ತೆಂಗಿನಕಾಯಿಯಲ್ಲಿ ಗಣೇಶಮೂರ್ತಿ ರಚಿಸಲು ಸುಮಾರು 60 ಜನರಿಗೆ ತರಬೇತಿ ನೀಡಲಾಗಿದ್ದು, ತೆಂಗಿನಲ್ಲಿ ರಚಿಸಲಾದ 2,500ಕ್ಕೂ ಹೆಚ್ಚು ಗಣೇಶನನ್ನು ಮಾರಾಟ ಮಾಡಲು ಮುಂದಾಗಿದೆ.

ಈಗ ಪಿಒಪಿ ಗಣೇಶ ಮೂರ್ತಿಗಳ ಬದಲಾಗಿ ಮಣ್ಣಿನಲ್ಲಿ ಮಾಡಿದ, ರಾಸಾಯನಿಕ ಬಣ್ಣಗಳನ್ನು ಬಳಸದ ಗಣೇಶಮೂರ್ತಿಗಳ ಬಳಕೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಆದರೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಂದು ಹೆಜ್ಜೆ ಮುಂದೆ ಹೋಗಿ ಗಣೇಶಮೂರ್ತಿಯ ಜತೆಗೆ ಭವಿಷ್ಯದಲ್ಲಿ ಒಂದು ತೆಂಗಿನ ಮರ ಬೆಳೆಸುವ ಮಹತ್ವದ ಪರಿಸರ ಸ್ನೇಹಿ ಕಾರ್ಯ ಕೈಗೊಂಡಿದೆ.

ಪರಸರಸ್ನೇಹಿ ಮಣ್ಣಿನ ಗಣೇಶಮೂರ್ತಿಗಳು ನೀರಿನಲ್ಲಿ ಸುಲಭವಾಗಿ ಕರಗುತ್ತವೆ. ಅವುಗಳನ್ನು ಪ್ರತಿಷ್ಠಾಪಿಸುವ ಜನರು ನಂತರ ನೀರಿನಲ್ಲಿ ವಿಸರ್ಜಿಸುತ್ತಾರೆ. ಆದರೆ, ತೆಂಗಿನಕಾಯಿಯಲ್ಲಿ ತಯಾರಾಗುವ ಗಣೇಶಮೂರ್ತಿ ಸಂಪ್ರದಾಯದಂತೆ ವಿಸರ್ಜನೆ ನಂತರ ಅದನ್ನು ಮೊಳಕೆ ಬರುವಂತೆ ಮಾಡಿ ಹೊಲ, ದೇವಸ್ಥಾನ ಅಥವಾ ಮನೆ ಆವರಣದಲ್ಲಿ ನೆಡಬಹುದಾಗಿದೆ. ಮಟ್ಟೆಕಾಯಿಯಲ್ಲಿ ಗಣೇಶನಮೂರ್ತಿ ಕೆತ್ತನೆ ಮಾಡಲಾಗುತ್ತದೆ. ಕಾಯಿ ಮೇಲ್ಭಾಗದಲ್ಲಿ ಯಾವುದೇ ಧಕ್ಕೆಯಾಗದಂತೆ ಮೂರ್ತಿ ರಚಿಸಲಾಗುತ್ತದೆ. ಇದರಿಂದ ತೆಂಗಿನಕಾಯಿಗೆ ನೀರು ಹಾಕುತ್ತ ಇದ್ದರೆ ಅದು ಮೊಳಕೆಯೊಡೆದು ಸಸಿಯಾಗಿ, ಮುಂದೆ ಕಲ್ಪವೃಕ್ಷವಾಗಿ ತೆಂಗಿನಕಾಯಿಗಳನ್ನು ನೀಡುತ್ತದೆ. ಅಲ್ಲದೇ ಪರಿಸರಕ್ಕೂ ತನ್ನದೇ ಕೊಡುಗೆ ನೀಡಲಿದೆ.

ಧಾರವಾಡದ ಕೆಲಗೇರಿಯ ಮಲ್ಲಪ್ಪ ಬಾವಿಕಟ್ಟಿ ಎಂಬುವರು ಹವ್ಯಾಸವಾಗಿ ತೆಂಗಿನಕಾಯಿಯಲ್ಲಿ ಗಣೇಶ, ಈಶ್ವರ ಸೇರಿದಂತೆ ಇನ್ನಿತರ ದೇವರ ಮೂರ್ತಿಗಳನ್ನು ರಚಿಸಿರುವುದನ್ನು ಗಮನಿಸಿದ ಗ್ರಾಮಾಭಿವೃದ್ಧಿ ಯೋಜನೆಯವರು ತಮ್ಮ ಕೌಶಲಾಭಿವೃದ್ಧಿ ಕೇಂದ್ರದಲ್ಲಿ ಈ ಕುರಿತು ತರಬೇತಿಗೆ ನಿರ್ಧರಿಸಿದರು. ಆರಂಭದಲ್ಲಿ ಕೆಲವರನ್ನು ಮಲ್ಲಪ್ಪ ಅವರ ಬಳಿ ಕೆತ್ತನೆ ತರಬೇತಿಗೆ ಕಳುಹಿಸಿದ್ದರು. ನಂತರ ಕೌಶಲಾಭಿವೃದ್ಧಿ ಕೇಂದ್ರದಲ್ಲಿ ಕಳೆದ ವರ್ಷ ಸುಮಾರು 30 ಜನರಿಗೆ ತರಬೇತಿ ನೀಡಲಾಗಿತ್ತು. ಈ ವರ್ಷ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಯ ಸುಮಾರು 25-30 ಜನರಿಗೆ ತರಬೇತಿ ನೀಡಲಾಗಿದೆ. ಒಂದು ವಾರದ ತರಬೇತಿ ಪಡೆದ ಅನೇಕರು, ಸ್ವತಃ ಗಣೇಶಮೂರ್ತಿ ತಯಾರಿ ಕಾರ್ಯದಲ್ಲಿ ತೊಡಗಿದ್ದಾರೆ.

ಒಬ್ಬರು ದಿನಕ್ಕೆ 4-5 ತೆಂಗಿನಕಾಯಿ ಗಣೇಶಮೂರ್ತಿಗಳನ್ನು ಕೆತ್ತನೆ ಮಾಡುತ್ತಿದ್ದು, ವಿಶೇಷವೆಂದರೆ ಈಶ್ವರನ ಮುಖದಲ್ಲಿಯೇ ಗಣೇಶಮೂರ್ತಿಯನ್ನು ಕೆತ್ತನೆ ಮಾಡಲಾಗುತ್ತದೆ. ಒಂದು ಗಣೇಶಮೂರ್ತಿಯನ್ನು 400ರೂ. ಗೆ ಮಾರಾಟ ಮಾಡಲಾಗುತ್ತಿದೆ. ಕಳೆದ ವರ್ಷ ಸುಮಾರು 870 ತೆಂಗಿನಕಾಯಿ ಗಣೇಶಮೂರ್ತಿಗಳನ್ನು ಮಾರಾಟ ಮಾಡಿದ್ದರೆ, ಈ ವರ್ಷ 2,500ಕ್ಕೂ ಹೆಚ್ಚು ಗಣೇಶಮೂರ್ತಿಗಳ ಮಾರಾಟದ ಗುರಿ ಹೊಂದಲಾಗಿದೆ. ಇದಕ್ಕಾಗಿ ಶಾಂತಾ ಗಡಕರ ಸೇರಿದಂತೆ ಅನೇಕರನ್ನೊಳಗೊಂಡ ಫ‌ಲದಾಯಕ ಗಣಪತಿ ಕೆತ್ತನೆಗಾರರ ಸಮಿತಿ ರಚಿಸಲಾಗಿದ್ದು, ಸಮಿತಿ ಮೂಲಕ ಮಾರಾಟ ಮಾಡಲಾಗುತ್ತದೆ. ಮುಂದಿನ ವರ್ಷ ಇದರ ಪ್ರಮಾಣ ಮೂರ್‍ನಾಲ್ಕು ಪಟ್ಟು ಹೆಚ್ಚಳವಾಗುವ ನಿರೀಕ್ಷೆಯಿದೆ. 

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪ್ರೇರಣೆಯಂತೆ ಪರಿಸರಸ್ನೇಹಿ ಆಗಿರಬೇಕು, ಗಣೇಶಮೂರ್ತಿ ಫ‌ಲದಾಯಕವೂ ಆಗಿರಬೇಕೆಂದು ಕಳೆದ ವರ್ಷದಿಂದ ತೆಂಗಿನಕಾಯಿಯಲ್ಲಿ ಗಣೇಶಮೂರ್ತಿ ಕೆತ್ತನೆ ತರಬೇತಿ-ಮಾರಾಟ ಕೈಗೊಳ್ಳಲಾಗಿದೆ. ವಿವಿಧ ಜಿಲ್ಲೆಯವರು ಈ ಬಾರಿ ತರಬೇತಿ ಪಡೆದಿದ್ದು, ಮುಂದಿನ ವರ್ಷ ಉಕದ ಅನೇಕ ಜಿಲ್ಲೆಗಳಲ್ಲಿ ತೆಂಗಿನ ಗಣೇಶಮೂರ್ತಿ ತಯಾರು ದೊಡ್ಡ ಪ್ರಮಾಣದಲ್ಲಿ ಆಗಲಿದೆ. ಇದೇ ವರ್ಷವೇ ಸುಮಾರು 1 ಸಾವಿರ ತೆಂಗಿನ ಗಣೇಶಮೂರ್ತಿಗಳು ಬೇಕು ಎಂದು ಮೈಸೂರಿನಿಂದ ಬೇಡಿಕೆ ಬಂದಿದೆ. ಈ ಬಾರಿ ನೀಡಲು ಸಾಧ್ಯವಾಗದು. ಮುಂದಿನ ವರ್ಷದಿಂದ ಧರ್ಮಸ್ಥಳದ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮೂಲಕ ರಾಜ್ಯಾದ್ಯಂತ ಮಾರಾಟಕ್ಕೆ ಪೂಜ್ಯರ ಪ್ರೇರಣೆಯಾಗಿದೆ.
ದಿನೇಶ, ಜಿಲ್ಲಾ ನಿರ್ದೇಶಕ, ಗ್ರಾಮಾಭಿವೃದ್ಧಿ ಯೋಜನೆ 

ಅಮರೇಗೌಡ ಗೋನವಾರ 

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.