Hubli; ಜನಜೀವನ ಅಸ್ತವ್ಯಸ್ತಗೊಂಡರೂ ಸರ್ಕಾರಕ್ಕೆ ಕಾಳಜಿಯಿಲ್ಲ: ಕುಮಾರಸ್ವಾಮಿ


Team Udayavani, Jul 20, 2024, 12:45 PM IST

hd-kumarswaamy

ಹುಬ್ಬಳ್ಳಿ: ರಾಜ್ಯದ ಹಲವೆಡೆ ಅತಿವೃಷ್ಟಿಯಿಂದಾಗಿ ಹಲವರು ಸಾವನ್ನಪ್ಪಿದ್ದಾರೆ. ಅನೇಕರು ಮನೆ ಕಳೆದು ಕೊಂಡಿದ್ದಾರೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಂಬಂಧಪಟ್ಟ ಸಚಿವರು ಸ್ಥಳಕ್ಕೆ ತೆರಳಿ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ ಮಾಡಬೇಕಿತ್ತು. ‌ಆದರೆ ಈ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಅನಾಹುತದಿಂದ ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡ್ಡ ಕುಸಿದು ಏಳಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಇದುವರೆಗೆ ಸರ್ಕಾರದ ಸಿಎಂ ಹಾಗೂ ಯಾವ ಸಚಿವರು ಅಲ್ಲಿಗೆ ಭೇಟಿ ನೀಡಿಲ್ಲ. ನಾನು ಮೂರು ದಿನಗಳ ಹಿಂದೆಯೇ ಅಲ್ಲಿಗೆ ಭೇಟಿ ಕೊಡಲು ಯೋಜಿಸಿದ್ದೆ. ಆದರೆ ದೆಹಲಿಯಲ್ಲಿ ಇಲಾಖೆಯ ನಿಗದಿತ ಕಾರ್ಯಕ್ರಮದ ನಿಮಿತ್ತ ಬರಲಾಗಲಿಲ್ಲ. ಇಂದು ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಮಾಡುತ್ತಿದ್ದೇನೆ. ರವಿವಾರ ಸಕಲೇಶಪುರಕ್ಕೆ ಭೇಟಿ ಕೊಡುತ್ತಿದ್ದು, ಅಲ್ಲಿನ ಪರಿಸ್ಥಿತಿ ಅವಲೋಕಿಸುವೆ ಎಂದರು.

ಮಳೆಯಿಂದಾಗಿ ಹಲವರು ಮನೆಗಳನ್ನು ಕಳೆದುಕೊಂಡಿದ್ದಾರೆ. ಮನೆಗಳಿಗೆ ನೀರು ನುಗ್ಗಿದೆ. ಆದರೆ ಕಂದಾಯ ಸಚಿವರು ಜಿಲ್ಲಾಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ ಕೊಡುತ್ತಿದ್ದಾರೆ. ಏನಾದರೂ ಕೇಳಿದರೆ ಪಿಡಿ ಖಾತೆಯಲ್ಲಿ ಹಣವಿದೆ ಎನ್ನುತ್ತಿದ್ದಾರೆ. ಹಣ ಇಟ್ಟರೆ ಸಾಲದು. ಸ್ಥಳಕ್ಕೆ ತೆರಳಿ ಪರಿಶೀಲಿಸಿ ಜನರಿಗೆ ಧೈರ್ಯ ತುಂಬುವ,‌ ಸಾಂತ್ವನ ಹೇಳುವ ಕಾರ್ಯ ಮಾಡಬೇಕಿತ್ತು. ಇವರ ಈ ನಡೆಯಿಂದ ಸರ್ಕಾರಕ್ಕೆ ಜನರ ಮೇಲಿರುವ ಕಾಳಜಿ ಎಷ್ಟಿದೆ ಎಂಬುದು ಗೊತ್ತಾಗುತ್ತದೆ ಎಂದು ಕುಟುಕಿದರು.

ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಏನೇ ಇರಲಿ. ಜನ ಸಂಕಷ್ಟ ಅನುಭವಿಸುತ್ತಿರು ಈ ಸಂದರ್ಭದಲ್ಲೂ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಅಲ್ಲಿನ ವಸ್ತುಸ್ಥಿತಿ ಪರಿಶೀಲಿಸದಿರುವುದು ದುರ್ದೈವದ ಸಂಗತಿ. ಈ ಸರ್ಕಾರ ಆಡಳಿತ ಹೇಗೆ ನಡೆಸಬೇಕೆಂಬುದು ಮರೆತು ಹೋಗಿದೆ ಎಂದರು.

ಮುಡಾದಲ್ಲಿ ಸಿಎಂ ನೇರ ಕೈವಾಡ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿಯವರ ನೇರ ಕೈವಾಡವಿದೆ. 1992ರಲ್ಲಿ ಆರಂಭಿಕವಾಗಿ ನೋಟಿಫಿಕೇಶನ್ ಆಗಿದೆ. 1993ರಲ್ಲಿ ಮೃತರ ಮಗನ ಹೆಸರಲ್ಲಿ ಖಾತೆ ಆಗಿದೆ. 1998ರಲ್ಲಿ ಮೃತರ ಹೆಸರಲ್ಲಿ ಡಿನೋಟಿಫಿಕೇಶನ್ ಆಗಿದೆ. ಇದನ್ನು ಮಾಡಿಸಿದವರು ಯಾರು?. ಈಗ ಸಿದ್ದರಾಮಯ್ಯ ವಿಪಕ್ಷಗಳಿಗೆ ತನಿಖೆಯ ಗುಮ್ಮ ಬಿಡುತ್ತಿದ್ದಾರೆ. 2012ರಲ್ಲಿ ಬಿಜೆಪಿ ಆಡಳಿತದಲ್ಲಿನ 21 ಹಗರಣಗಳ ಬಗ್ಗೆ ಮಾತನಾಡುವವರು ಐದು ವರ್ಷಗಳ ಹಿಂದೆ ತಮ್ಮ ಹಾಗೂ‌ ಈಗಿನ‌ ಒಂದು ವರ್ಷದ ಆಡಳಿತದಲ್ಲಿ ಈ ಬಗ್ಗೆ ಏಕೆ ಸುಮ್ಮನಿದ್ದರು. ತಾವು ಮಾಡಿದ ತಪ್ಪುಗಳನ್ನು ಮುಚ್ಚಿಕೊಳ್ಳಲು ವಿಪಕ್ಷಗಳ ಮೇಲೆ ತನಿಖೆಯ ಗುಮ್ಮ ಬಿಡುತ್ತಿದ್ದಾರೆ ಎಂದು ಹರಿಹಾಯ್ದರು.

ಮುಡಾದಲ್ಲಿ ಅಕ್ರಮ ಆಗಲು ಕಾರಣವೇನು? ಅಧಿಕಾರಿಗಳು ಅಕ್ರಮ ಮಾಡಿದರೂ ಅದಕ್ಕೆ ಸರ್ಕಾರವೇ ಹೊಣೆ. ಇವರ ದೌರ್ಬಲ್ಯಗಳಿಂದ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ನಿಗಮದ ಅಧಿಕಾರಿ ಬರೆದ ಡೆತ್‌ ನೋಟ್‌ ನಲ್ಲಿ ಮಂತ್ರಿಗಳು ಮೌಖಿಕವಾಗಿ ಆದೇಶ ಮಾಡಿದ್ದರೆಂದು ಹೇಳಿದ್ದಾರೆ. ಇದರ ಬಗ್ಗೆ ಮಂತ್ರಿಗಳಿಗೆ ಗೊತ್ತಿರಲಿಲ್ಲವೇ? ಸಿಎಂ ಈ ರೀತಿ ಉಡಾಫೆ ಉತ್ತರ ಕೊಡುವುದು ಸರಿಯಲ್ಲ. ವಿಧಾನಸಭೆ ಕಲಾಪದಲ್ಲಿ ಯಾರೋ ಬರೆದು ಕೊಟ್ಟದ್ದನ್ನು ಓದಿದ್ದಾರೆ.‌ ನಮ್ಮ ರಾಜ್ಯದಲ್ಲಿ ಈ ರೀತಿಯ ಆಡಳಿತ ನಿರೀಕ್ಷಿಸಿರಲಿಲ್ಲ ಎಂದರು.

ಇಡಿಯವರು ಸಿಎಂ ಹೆಸರು ಹೇಳುವಂತೆ ಬಂಧಿತರ‌ ಮೇಲೆ‌ ಒತ್ತಡ ಹಾಕುತ್ತಿದ್ದಾರೆ ಎಂಬ ಮಾಹಿತಿ ಅವರಿಗೆ ಎಲ್ಲಿಂದ ಬಂತು? ಇ.ಡಿಯವರ ತನಿಖೆ ವಿಚಾರಗಳು ಸಿಎಂ ಹೇಗೆ ಗೊತ್ತಾಯಿತು? ಅವರು ಏನೂ ತಪ್ಪು ಮಾಡದಿದ್ದರೆ, ಪ್ರಕರಣದಲ್ಲಿ ಭಾಗಿಯಾಗಿರದಿದ್ದರೆ ಅವರು ಏಕೆ ಊಹೆ ಮಾಡಿಕೊಂಡು ನಾಲ್ಕು‌ ಸಚಿವರ ಕೈಯಿಂದ ಉತ್ತರ ಕೊಡಿಸಿದ್ದು? ಅವರಿಗೆ ಇಂತಹ ಪರಿಸ್ಥಿತಿ ಏಕೆ ಬಂತು ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.