ಹುಬ್ಬಳ್ಳಿ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಎರಡನೇ ಬಹುಮಾನ
Team Udayavani, Jun 26, 2017, 3:50 PM IST
ಹುಬ್ಬಳ್ಳಿ: ಟೈ ಗ್ಲೋಬಲ್ ಆಯೋಜಿಸಿದ್ದ ಯುವ ಉದ್ಯಮಿಗಳ ಜಾಗತಿಕ ಮಟ್ಟದ ಸ್ಪರ್ಧೆಯಲ್ಲಿ ಹುಬ್ಬಳ್ಳಿ ವಿದ್ಯಾರ್ಥಿಗಳ ತಂಡ ವಾಯು ಮಾಲಿನ್ಯ ತಡೆ ಉಪಕರಣದ ಪ್ರದರ್ಶನ ನೀಡಿ, ವಿಶ್ವಮಟ್ಟದಲ್ಲಿ ಎರಡನೇ ಸ್ಥಾನದೊಂದಿಗೆ 2000 ಡಾಲರ್ ಬಹುಮಾನ ಬಾಚಿಕೊಂಡಿದೆ.
ಜಾಗತಿಕ ಮಟ್ಟದಲ್ಲಿ ಶನಿವಾರ ರಾತ್ರಿ ಅಮೆರಿಕಾದಲ್ಲಿ ನಡೆದ ಅಂತಿಮ ಸ್ಪರ್ಧೆಯಲ್ಲಿ ವಿವಿಧ ದೇಶಗಳ ಒಟ್ಟು 19 ತಂಡಗಳು ಪಾಲ್ಗೊಂಡಿದ್ದವು. ಹುಬ್ಬಳ್ಳಿ ವಿದ್ಯಾರ್ಥಿಗಳ ತಂಡ ವೀಡಿಯೊ ಕಾನ್ಫರೆನ್ಸ್ ಮೂಲಕ ತಾವು ತಯಾರಿಸಿದ ಏರೋಕ್ಲೀನೆಸ್ ಉಪಕರಣ ಪ್ರದರ್ಶಿಸಿದರಲ್ಲದೆ, ವಾಹನಗಳ ಮೇಲೆ ಇದನ್ನು ಅಳವಡಿಸಿಕೊಂಡು ವಾಯು ಮಾಲಿನ್ಯವನ್ನು ತಕ್ಕ ಮಟ್ಟಿಗೆ ತಡೆಯಬಹುದು ಎಂಬುದನ್ನು ವಿಶ್ಲೇಷಿಸುವ ಮೂಲಕ ತೀರ್ಪುಗಾರರ ಗಮನ ಸೆಳೆದಿದ್ದರು.
ಯುವ ಉದ್ಯಮಿಗಳ ಜಾಗತಿಕ ಮಟ್ಟದ ಸ್ಪರ್ಧೆಯ ಫಲಿತಾಂಶ ಶನಿವಾರ ತಡರಾತ್ರಿ ಹೊರಬಿದ್ದಿದ್ದು, ಇದರಲ್ಲಿ ಅಟ್ಲಾಂಟಾ ತಂಡ ಮೊದಲ ಬಹುಮಾನದೊಂದಿಗೆ 4000 ಡಾಲರ್ ಬಹುಮಾನ ಪಡೆದರೆ, ಹುಬ್ಬಳ್ಳಿ ವಿದ್ಯಾರ್ಥಿಗಳ ತಂಡ ಎರಡನೇ ಸ್ಥಾನದ ಸಾಧನೆ ತೋರಿದೆ.
8ರಿಂದ 12ನೇ ತರಗತಿಯೊಳಗಿನ ವಿದ್ಯಾರ್ಥಿಗಳಾದ ಮಾನ್ಸಿ ಮೆಳವಂಕಿ, ಹರೀಶ ನಾಯ್ಕ, ಶ್ರೇಯಸಿ ಪಾಟೀಲ,ಅನನ್ಯಾ ನಿಡವಣಿ, ಪವನ್ ಕರ್ನಮ್, ಸಾಕ್ಷಿ ಮಹಾಜನ್, ಮಾನವಿ ಟಾಕೆ, ಅಂಜಲಿ ನೀರಲಗಿ, ಆದಿತ್ಯ ಅಮೀನಗಡ ಅವರ ತಂಡ ಟೈ ಹುಬ್ಬಳ್ಳಿ ಘಟಕದ ಮಾರ್ಗದರ್ಶನ ಹಾಗೂ ಪ್ರೋತ್ಸಾಹದೊಂದಿಗೆ ವಿಶ್ವದ ವಿವಿಧ ದೇಶಗಳ ಪೈಪೋಟಿಯನ್ನು ಮೆಟ್ಟಿ ನಿಂತು ಹುಬ್ಬಳ್ಳಿ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಬೆಳಗಿಸುವ ಸಾಧನೆ ತೋರಿದೆ.
ವಿದ್ಯಾರ್ಥಿಗಳ ಸಾಧನೆಗೆ ಸಂದೀಪ ಬಿಡಸಾರಿಯಾ, ಗೌತಮ್ ಓಸ್ತ್ವಾಲ್, ವಿಜಯ ಮಾನೆ, ಶಶಿಧರ ಶೆಟ್ಟರ ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ
Priya Shatamarshan: ಇನ್ಸ್ ಪೆಕ್ಟರ್ ಗಿರಿಜಾ ರಿಪೋರ್ಟಿಂಗ್ ಸಾರ್..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.