Hubli: ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು ಇನ್ನಿಲ್ಲ
Team Udayavani, Sep 23, 2024, 2:40 PM IST
ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರ ಕಲ್ಯಾಣ ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ರಘುವೀರಾನಂದ ಮಹಾರಾಜರು (60 ವ) ಸೋಮವಾರ (ಸೆ.23) ಬೆಳಗ್ಗೆ 10 ಗಂಟೆಗೆ ಸುಮಾರಿಗೆ ರಾಮಕೃಷ್ಣ ಚರಣದಲ್ಲಿ ಲೀನರಾದರು.
ಶ್ರೀ ಸ್ವಾಮಿ ರಘುವೀರಾನಂದ ಮಹಾರಾಜರ ಪಾರ್ಥಿವ ಶರೀರವನ್ನು ಭಕ್ತರ ದರ್ಶನಕ್ಕೆಂದು ಆಶ್ರಮದ ಆವರಣದಲ್ಲಿ ಇಡಲಾಗಿದೆ. ಈ ಸಂದರ್ಭದಲ್ಲಿ ಧಾರವಾಡ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಪರಮಪೂಜ್ಯ ವಿಜಯಾನಂದ ಸರಸ್ವತಿ, ಹುಬ್ಬಳ್ಳಿಯ ಸ್ವಾಮಿ ಬುದ್ಧಿಯೋಗಾನಂದಜಿ ಮಹಾರಾಜ, ತೇಜಸಾನಂದಜಿ ಮಹಾರಾಜ, ಹರಿದ್ವಾರದ ಪ್ರಣವಾನಂದ ಸರಸ್ವತಿ, ರಾಣಿಬೆನ್ನೂರಿನ ಆತ್ಮದೀಪಾನಂದಜಿ ಮಹಾರಾಜ, ಗುರುದೇವ ಚರಣಾನಂದಜಿ ಮಹಾರಾಜ, ಮಾತಾ ಆಶ್ರಮದ ಮಾತಾ ತೇಜೋಮಯಿ, ಅಮೂಲ್ಯಮಯಿ, ಆಶ್ರಮದ ಧರ್ಮದರ್ಶಿ ಸಂಭಾಜಿ ಕಲಾಲ, ಪರಮ ಭಕ್ತರಾದ ಎಂ.ಎ. ಸುಬ್ರಹ್ಮಣ್ಯ, ನಾಗಲಿಂಗ ಮೂರಗಿ, ಸಂಗಣ್ಣ ಬೆಳಗಾವಿ, ಶರಣಪ್ಪ ಕೊಟಗಿ, ಮಹೇಶ ದ್ಯಾವಪ್ಪನವರ, ಕೆಎಲ್ಇ ಎಫ್ಎಂನ ಗೋಪಾಲ ಹೆಗಡೆ, ಡಾ. ನವೀನ ಕಬ್ಬೂರ, ದಯಾನಂದ ರಾವ್, ಡಾ. ರಾಮು ಮೂಲಗಿ ಸೇರಿದಂತೆ ಆಶ್ರಮದ ಅಪಾರ ಭಕ್ತ ವೃಂದ ಸೇರಿದ್ದಾರೆ. ಮಹಿಳೆಯರು ಸ್ವಾಮೀಜಿಯವರ ಪಾರ್ಥಿವ ಶರೀರ ನೋಡುತ್ತಿದ್ದಂತೆ ಕಣ್ಣೀರಾದರು.
ನಾಳೆ ಅಂತ್ಯಸಂಸ್ಕಾರ
ಶ್ರೀ ಸ್ವಾಮಿ ರಘುವೀರಾನಂದ ಮಹಾರಾಜರ ಅಂತ್ಯಸಂಸ್ಕಾರವು ಸೆ. 24ರಂದು ಬೆಳಗ್ಗೆ 10 ಗಂಟೆಗೆ ಕೇಶ್ವಾಪುರದ ಮುಕ್ತಿಧಾಮದಲ್ಲಿ ರಾಮಕೃಷ್ಣ ಆಶ್ರಮದ ಪರಂಪರೆಯಂತೆ ನಡೆಯಲಿದೆ ಎಂದು ಆಶ್ರಮದ ಮೂಲಗಳು ತಿಳಿಸಿವೆ.
ಸ್ವಾಮೀಜಿ ಹಿನ್ನೆಲೆ
1964ರಲ್ಲಿ ಜನಿಸಿದ್ದ ಶ್ರೀ ಸ್ವಾಮಿ ರಘುವೀರಾನಂದರು ಬಿಇ ಪದವೀಧರರಾಗಿದ್ದರು. 1988ರಲ್ಲಿ ತಮ್ಮ ಕಾಲೇಜು ದಿನಗಳಲ್ಲಿ ಬೆಂಗಳೂರಿನ ರಾಮಕೃಷ್ಣ ಮಠ ಸಂಪರ್ಕಕ್ಕೆ ಬಂದರು. ವಿವೇಕಾನಂದ ಯುವಕ ಸಂಘದ ಸದಸ್ಯರಾಗುವ ಮೂಲಕ ತಮ್ಮನ್ನು ಆಶ್ರಮದ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು. ಸ್ವಾಮಿ ಪುರುಷೋತ್ತಮಾನಂದಜಿ ಮಹಾರಾಜ್ ಅವರಿಂದ ಸ್ಫೂರ್ತಿಗೊಂಡು ದಿವ್ಯತ್ರಯರ ಸೇವೆಗೆ ತಮ್ಮ ಜೀವನ ಸಮರ್ಪಿಸಿದರು. ಸ್ವಾಮಿಗಳ ಮಾರ್ಗದರ್ಶನದಂತೆ 1992ರಲ್ಲಿ ಬೆಂಗಳೂರಿನಲ್ಲಿ ರಾಮಕೃಷ್ಣ ಸಂಕೀರ್ತನ ಸಭೆ ಪ್ರಾರಂಭಿಸಿದರು. ಭಜನೆ, ಸಂಕೀರ್ತನೆಗಳ ಮೂಲಕ ದಿವ್ಯತ್ರಯರ ಸಂದೇಶ ಮನೆ ಮನೆಗೂ ಮನಮನಕ್ಕೂ ತಲುಪಿಸುವ ಕಾರ್ಯ ಆರಂಭಿಸಿದರು. 1993ರಲ್ಲಿ ಸ್ವಾಮಿ ಪುರುಷೋತ್ತಮಾನಂದಜಿಯವರು ಪೊನ್ನಂಪೇಟೆಗೆ ಹೋದಾಗ ಅವರೊಂದಿಗೆ ಅಲ್ಲಿಗೆ ಹೋಗಿ ಸೇವೆ ಸಲ್ಲಿಸಿದರು. 1994ರಲ್ಲಿ ಬೆಂಗಳೂರಿಗೆ ಹಿಂದಿರುಗಿ ರಾಮಕೃಷ್ಣ ಯೋಗಾಶ್ರಮ ಪ್ರಾರಂಭಿಸಿದರು. 2000ರಲ್ಲಿ ಧಾರವಾಡದ ರಾಮಕೃಷ್ಣ ವಿವೇಕಾನಂದ ಆಶ್ರಮಕ್ಕೆ ಬಂದು ಅಲ್ಲಿ ಒಂದು ವರ್ಷ ಸೇವೆ ಸಲ್ಲಿಸಿದರು. ನಂತರ ಸ್ವಾಮಿ ಪುರುಷೋತ್ತಮಾನಂದಜಿಯವರ ಆದೇಶದಂತೆ ಹುಬ್ಬಳ್ಳಿಗೆ ಬಂದು 2002ರ ಮೇ 13ರಂದು ರಾಮಕೃಷ್ಣ ವಿವೇಕಾನಂದ ಆಶ್ರಮ ಸ್ಥಾಪಿಸಿದರು. ಉತ್ತರ ಕರ್ನಾಟಕದಾದ್ಯಂತ ದಿವ್ಯತ್ರಯರ ಸಂದೇಶ ಪ್ರಚಾರ ಮಾಡಿದರು. ತಮ್ಮ ಸುಮಧುರ ಕಂಠದಿಂದ ಭಕ್ತಿಪೂರ್ವಕ ಭಜನೆ, ಉಪನ್ಯಾಸ ಮೂಲಕ ಪ್ರಖ್ಯಾತಿ ಹೊಂದಿದ್ದ ಅಪಾರ ಭಕ್ತ ವೃಂದ ಹೊಂದಿದ್ದರು. ಸ್ವಾಮೀಜಿ ಕಳೆದ ಒಂದೂವರೆ ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು
Hubli: ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ: ಶಾಸಕ ಟೆಂಗಿನಕಾಯಿ
Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು
Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ
Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?
America: 1951ರಲ್ಲಿ ಕಿಡ್ನಾಪ್ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!
Aditya Shashikumar: ʼರಾಶಿʼ ಪ್ರೀತಿಗೆ ಬಿದ್ದ ಆದಿತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.