ಹುಬ್ಬಳ್ಳಿ: ಆರ್‌ಪಿಐ ಅಭ್ಯರ್ಥಿಗೆ ಇರಿದು ಹತ್ಯೆಗೆ ಯತ್ನ!


Team Udayavani, May 12, 2023, 9:18 PM IST

police

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಕುಂದಗೋಳ ವಿಧಾನಸಭಾ ಮತಕ್ಷೇತ್ರದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ಅಭ್ಯರ್ಥಿಗೆ ಸ್ನೇಹಿತನೇ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಶುಕ್ರವಾರ ಸಂಜೆ ಇಲ್ಲಿನ ವಿದ್ಯಾನಗರ ರಾಜೀವನಗರದ ಚಂದ್ರಗಿರಿ ಲೇಔಟ್‌ನಲ್ಲಿ ನಡೆದಿದೆ.

ಘಟನೆಯಲ್ಲಿ ಆರ್‌ಪಿಐ ಅಭ್ಯರ್ಥಿ, ಉಣಕಲ್ಲ ಬಳಿಗಾರ ಓಣಿಯ ಮಲ್ಲಿಕಾರ್ಜುನ ಕೆ. ತೋಟಗೇರ (46) ಹಲ್ಲೆಗೊಳಗಾಗಿದ್ದು, ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರ ಸ್ನೇಹಿತ, ಚಂದ್ರಗಿರಿ ಲೇಔಟ್‌ನ ಸುನಿಲ ಎಂಬಾತ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಹಲ್ಲೆಗೊಳಗಾದ ಮಲ್ಲಿಕಾರ್ಜುನ ಅವರು ಪಕ್ಷೇತರಾಗಿ ಕುಂದಗೋಳ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾರೆ. ಎರಡು ವರ್ಷಗಳ ಹಿಂದೆ ಹು-ಧಾ. ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲೂ ವಾರ್ಡ್ ನಂ. 37 ರಲ್ಲಿ ಆರ್‌ಪಿಐ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಹಣಕಾಸಿನ ವಿಷಯವಾಗಿ ಭೇಟಿಯಾಗಲೆಂದು ಮಲ್ಲಿಕಾರ್ಜುನರು ಸುನಿಲ ಮನೆಗೆ ಹೋದಾಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವುಂಟಾಗಿದೆ. ಅದು ವಿಕೋಪಕ್ಕೆ ಹೋಗುತ್ತಿದ್ದಂತೆ ಅವಾಚ್ಯ ಶಬ್ದಗಳಿಂದ ಪರಸ್ಪರರ ಮಧ್ಯೆ ವಾಗ್ವಾದ ನಡೆದಿದೆ. ಆಗ ಕೋಪಗೊಂಡ ಸುನಿಲನು ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಹಲ್ಲೆಗೊಳಗಾದ ಮಲ್ಲಿಕಾರ್ಜುನರು ಹನುಮಂತ ನಗರದಲ್ಲಿ ಕಿರಾಣಿ ಅಂಗಡಿ ಇಟ್ಟುಕೊಂಡು ಉಪಜೀವನ ಸಾಗಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಹಾಗೂ ಕಿಮ್ಸ್ ಆಸ್ಪತ್ರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು, ವಿದ್ಯಾನಗರ ಪೊಲೀಸರು ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ಷುಲ್ಲಕ ವಿಷಯವಾಗಿ ಸ್ನೇಹಿತನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದವನು ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡ : ಹೆಸರು ಬೆಳೆ ಬಂಪರ್‌..ಬೆಲೆ ಪಾಪರ್‌..!

ಧಾರವಾಡ : ಹೆಸರು ಬೆಳೆ ಬಂಪರ್‌..ಬೆಲೆ ಪಾಪರ್‌..!

Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ

Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ

GN-5

ಯೋಗೀಶ್ ಗೌಡ ಕೊಲೆ ಆರೋಪಿ ಮುತ್ತಗಿಗೆ ಜೀವ ಬೆದರಿಕೆ:ಮುತ್ತಗಿ ಮನೆಗೆ ಸಿಬಿಐ ಅಧಿಕಾರಿಗಳ ಭೇಟಿ

2-alnawar

Alnavar: ಹಳ್ಳದಲ್ಲಿ ತೇಲಿ ಹೋಗಿ ಮೃತಪಟ್ಟ ಎಮ್ಮೆಗಳು

S.-Lad

By Poll: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‌ ಪಕ್ಷಕ್ಕೆ ಬಂದ್ರೆ ಸ್ವಾಗತಿಸುವೆ: ಸಂತೋಷ್ ಲಾಡ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

POlice

Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

complaint

Kasaragod: ಸಚಿತಾ ರೈ ವಿರುದ್ಧ ಇನ್ನೆರಡು ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.