Hubli; ಪಿಎಫ್ಐ ಮಾದರಿಯಲ್ಲಿ‌ ಎಸ್‌ಡಿಪಿಐ ಪಕ್ಷವನ್ನೂ ನಿಷೇಧಿಸಬೇಕು: ಪ್ರಮೋದ ಮುತಾಲಿಕ್


Team Udayavani, Sep 9, 2024, 12:02 PM IST

Hubli; ಪಿಎಫ್ಐ ಮಾದರಿಯಲ್ಲಿ‌ ಎಸ್‌ಡಿಪಿಐ ಪಕ್ಷವನ್ನೂ ನಿಷೇಧಿಸಬೇಕು: ಪ್ರಮೋದ ಮುತಾಲಿಕ‌

ಹುಬ್ಬಳ್ಳಿ: ಎಸ್ ಡಿಪಿಐ‌ ದೇಶದ್ರೋಹಿ‌ ಪಕ್ಷವಾಗಿದ್ದು, ಕೇಂದ್ರ ಸರ್ಕಾರ ಕೂಡಲೇ ಪಿಎಫ್ಐ ಮಾದರಿಯಲ್ಲಿ‌ ಅದನ್ನೂ ನಿಷೇಧಿಸಬೇಕು ಎಂದು ಶ್ರೀ ರಾಮಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ‌ ಆಗ್ರಹಿಸಿದರು.

ಸೋಮವಾರ (ಸೆ.09) ಇಲ್ಲಿನ ಈದ್ಗಾ ಮೈದಾನದಲ್ಲಿ ರಾಣಿ ಚನ್ನಮ್ಮ ಗಜಾನನ ಮಹಾಮಂಡಳ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮ ವೇಳೆ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ‌ ಮಾತನಾಡಿದರು.

ಹಿಂದೂಗಳು ಶಾಂತಿಪ್ರಿಯರು ಎಂಬುದನ್ನು ತೋರಿಸುತ್ತ ಬಂದಿದ್ದೇವೆ. ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ ಗಲಭೆ-ಗಲಾಟೆ ಆಗುತ್ತವೆ ಎಂದು ಹೇಳಿದ್ದರು ಆದರೆ ಮೂರು ವರ್ಷಗಳಿಂದ ಶಾಂತಿಯುತ ಆಚರಣೆಯಾಗಿದೆ. ಗಣೇಶೋತ್ಸವ ವಿರೋಧಿಗಳು ಸಹಕಾರಕ್ಕೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಸುಪ್ರೀಂ ಕೋರ್ಟ್ ತೀರ್ಪು ನೆಪದಲ್ಲಿ‌ ಗಣೇಶ ಮೂರ್ತಿ ವಿಸರ್ಜನೆ ವೇಳೆ ಡಿ.ಜೆ ಬಳಕೆಗೆ ನಿರ್ಬಂಧಿಸಿರುವುದು ಸರಿಯಲ್ಲ. ಮಸೀದಿ ಧ್ವನಿವರ್ಧಕಕ್ಕೂ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿದೆ. ಅಲ್ಲಿ ಕ್ರಮವಿಲ್ಲದೆ ವರ್ಷಕ್ಕೊಮ್ಮ ಆಚರಿಸುವ ಗಣೇಶೋತ್ಸವಕ್ಕೆ ಮಾತ್ರ ಯಾಕೆ? ಡಬಲ್ ಡಿ.ಜೆ. ಹಾಕಿ ಸಂಭ್ರಮಿಸಿ ಎಂದು ಗಣೇಶೋತ್ಸವ ಸಮಿತಿಗಳಿಗೆ ಕರೆ ನೀಡುತ್ತೇನೆ ಎಂದರು.

ಗಣೇಶ ಪ್ರಸಾದಕ್ಕೆ ನಿರ್ಬಂಧ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯಾಗಿದೆ. ಬಿಜೆಪಿಯೂ ಅಧಿಕಾರದಲ್ಲಿದ್ದಾಗ ಹಿಂದೂ ವಿರೋಧಿ ನೀತಿ ಅನುಸರಿಸಿ ನಮ್ಮನ್ನು ಬಂಧಿಸಿತ್ತು. ಮೋದಿಗೆ ನಮ್ಮ ಬೆಂಬಲ ಅಚಲ; ಸ್ಥಳೀಯ ಬಿಜೆಪಿ ನಾಯಕರಿಗಲ್ಲ. ಮೋದಿ ಇಲ್ಲವಾದರೆ ದೇಶ ಮಾರಾಟ ಮಾಡುವ ರಾಹುಲ್ ಗಾಂಧಿ ಬರುತ್ತಾನೆ ಎಂದು ಕಿಡಿಕಾರಿದರು.

ವಿಸರ್ಜನೆ ಮೆರವಣಿಗೆ

ರಾಣಿ ಚನ್ನಮ್ಮ ಗಜಾನನ ಮಹಾಮಂಡಳ‌ವು ಇಲ್ಲಿನ‌ ಈದ್ಗಾ‌ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆಗೆ ಸೋಮವಾರ ಬೆಳಿಗ್ಗೆ11:50 ಗಂಟೆ ಸುಮಾರಿಗೆ ಆರಂಭಗೊಂಡಿತು. ಮೂರು ದಿನಗಳಿಂದ ಪ್ರತಿಷ್ಠಾಪಿಸಿರುವ ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆ ಹಿನ್ನೆಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ ಸೇರಿದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಆರ್ ಎಸ್ ಎಸ್ ಪ್ರಮುಖ‌ ಮಂಗೇಶ ಭೇಂಡೆ, ಮಾಜಿ ಸಚಿವರಾದ ಸಿ.ಟಿ.ರವಿ, ಶಂಕರ ಪಾಟೀಲ‌ ಮುನೇನಕೊಪ್ಪ ಇನ್ನಿತರರು‌ ಪಾಲ್ಗೊಂಡರು.

ಟಾಪ್ ನ್ಯೂಸ್

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

puಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ

ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.