ಪಾಲಿಕೆ ಆವರಣದಲ್ಲಿ ಹೈಡ್ರಾಮಾ


Team Udayavani, Sep 8, 2017, 11:55 AM IST

hub2.jpg

ಹುಬ್ಬಳ್ಳಿ: ಇಡೀ ಪಾಲಿಕೆ ಆವರಣ ಗುರುವಾರ ಹಲವು ಗೊಂದಲ, ಹೈಡ್ರಾಮಾಕ್ಕೆ ವೇದಿಕೆಯಾಯಿತು. ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಶುಕ್ರವಾರ ಬೆಳಗ್ಗೆ ಕೈಗೊಳ್ಳುವುದಾಗಿ ಪಾಲಿಕೆ ಆಯುಕ್ತರು ಭರವಸೆ ನೀಡಿದ್ದರಿಂದ ಬಿಜೆಪಿಯವರು ಹಾಗೂ ಪಾಲಿಕೆ ಬಿಜೆಪಿ ಸದಸ್ಯ ಕ್ಷಮೆಯಾಚಿಸಿದ್ದರಿಂದ ಪಾಲಿಕೆ ಸಿಬ್ಬಂದಿ ಪ್ರತಿಭಟನೆ ಹಿಂಪಡೆದುಕೊಂಡರು.

ಸರಕಾರಿ ಕರ್ತವ್ಯಕ್ಕೆ ಅಡ್ಡಿ  ಆರೋಪದ ಮೇರೆಗೆ ಪಾಲಿಕೆ ಆಯುಕ್ತರು ನೀಡಿದ್ದ ದೂರು ಕುರಿತಾಗಿ ಪೊಲೀಸರು ಪಾಲಿಕೆ ಬಿಜೆಪಿಸದಸ್ಯನನ್ನು ವಶಕ್ಕೆ ಪಡೆದಿದ್ದರಾದರೂ, ಕೆಲ ಗಂಟೆ ಪೊಲೀಸ್‌ ಠಾಣೆಯಲ್ಲಿ ಇರಿಸಿಕೊಂಡ ನಂತರ ವಿಚಾರಣೆಗೆ ಸಹಕಾರ ನೀಡುವುದಾಗಿ ಮುಚ್ಚಳಿಕೆ ಪತ್ರ ಬರೆದು ಕೊಟ್ಟಿದ್ದರಿಂದ ಸದಸ್ಯರನ್ನು ಬಿಡುಗಡೆ ಮಾಡಿದರು. 

ಆಗಿದ್ದೇನು..?: ಇಲ್ಲಿನ 57ನೇ ವಾರ್ಡ್‌ನ ವೀರಾಪುರ ಓಣಿಯ ಸರಕಾರಿ ಶಾಲೆ ಹಾಗೂ ರಸ್ತೆ ಒತ್ತುವರಿ ತೆರವುಗೊಳಿಸಿವಂತೆ ಒತ್ತಾಯಿಸಿ ಪಾಲಿಕೆ  ಸದಸ್ಯ ಶಿವಾನಂದ ಮುತ್ತಣ್ಣವರ ಬುಧವಾರ ಸಂಜೆ ಪಾಲಿಕೆ ಆಯುಕ್ತರ ಕಚೇರಿಗೆ ಬೀಗ ಹಾಕಿದ್ದರು. 

ಸರಕಾರಿ ಕೆಲಸಕ್ಕೆ ಅಡ್ಡಿ ಆರೋಪದಡಿ ಪಾಲಿಕೆ ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ ಉಪನಗರ ಠಾಣೆಯಲ್ಲಿ ಮುತ್ತಣ್ಣನವರ ಹಾಗೂ ಇತರೆ ಐವರ ಮೇಲೆ ದೂರು ದಾಖಲಿಸಿದ್ದರು. ಮುತ್ತಣ್ಣನವರನ್ನು ಪೊಲೀಸರು ವಿಚಾರಣೆಗೆಂದು ವಶಕ್ಕೆ ಪಡೆದರು. ಇದನ್ನು ಖಂಡಿಸಿ ಪಾಲಿಕೆ ಬಿಜೆಪಿ ಸದಸ್ಯರು ಹಾಗೂ ಮುಖಂಡರು ಪ್ರತಿಭಟನೆ ಆರಂಭಿಸಿದರು. 

ಬಿಜೆಪಿ ಸದಸ್ಯರ ಸಭೆ: ಸದಸ್ಯ ಶಿವಾನಂದ ಮುತ್ತಣ್ಣವರ ಅವರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಮೇಯರ್‌ ಕಚೇರಿಯಲ್ಲಿ ವಿಪ ಸದಸ್ಯ ಪ್ರದೀಪ ಶೆಟ್ಟರ ನೇತೃತ್ವದಲ್ಲಿ ಸಭೆ ನಡೆಯಿತು. ನಂತರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು ಶಿವಾನಂದ ಮುತ್ತಣ್ಣವರ ವಿರುದ್ಧ ನೀಡಿರುವ ದೂರು ವಾಪಸ್‌ ಪಡೆಯುವಂತೆ ಒತ್ತಾಯಿಸಿದರಾದರೂ ಆಯುಕ್ತರು ನಿರಾಕರಿಸಿದರು. 

ಪ್ರದೀಪ ಶೆಟ್ಟರ ಮಾತನಾಡಿ, ಪಾಲಿಕೆ ಆಯುಕ್ತರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸರಕಾರಿ ಜಾಗ ಒತ್ತುವರಿ ತೆರವುಗೊಳಿಸುವಲ್ಲಿ ವಿಫ‌ಲರಾಗಿದ್ದಾರೆ. ಸರಕಾರಿ ಜಾಗ ಅತಿಕ್ರಮಣ ತೆರವು ಬಗ್ಗೆ ಹಲವು ಬಾರಿ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪವಾಗಿದೆ. ಕೋರ್ಟ್‌ ಆದೇಶವಿದ್ದರೂ ತೆರವು ಕಾರ್ಯ ಆಗುತ್ತಿಲ್ಲ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಕೆಲ ಬಿಜೆಪಿಯವರು ಪಾಲಿಕೆ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾಂಗ್ರೆಸ್‌ ನಾಯಕರ ಒತ್ತಡಕ್ಕೆ ಮಣಿದು ತೆರವು ಕೈಗೊಳ್ಳದೆ, ಪ್ರಕರಣ ಹೈಕೋರ್ಟ್‌ನಲ್ಲಿದೆ ಎಂಬ ನೆಪ ಹೇಳುತ್ತಿದ್ದಾರೆಂದು ಕಿಡಿಕಾರಿದರು.

 ಇದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ, ಯಾರ ಒತ್ತಡವೂ ಇಲ್ಲ. ಪ್ರಕರಣ ಹೈಕೋರ್ಟ್‌ನಲ್ಲಿರುವುದು ನಿಜ. ಕಾನೂನಿನ ಸಾಧಕ-ಬಾಧಕ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಈಗಾಗಲೇ ಕಟ್ಟಡ ತೆರವಿಗೆ ಆದೇಶಿಸಲಾಗಿದ್ದು, ಗಣೇಶ ಹಬ್ಬ ಹಾಗೂ ಬಕ್ರೀದ್‌ ಇದ್ದ ಕಾರಣ ಪೊಲೀಸ್‌ ಭದ್ರತೆ ಸಾಧ್ಯವಾಗದ್ದರಿಂದ ಕೆಲ ದಿನ ಮುಂದೂಡಲಾಗಿತ್ತಷ್ಟೆ ಎಂದು ಸ್ಪಷ್ಟಪಡಿಸಿದರು.  

ಮತ್ತೂಮ್ಮೆ ಪ್ರತಿಭಟನೆ ಸಜ್ಜು: ಅತಿಕ್ರಮಣ ತೆರವುಗೊಳಿಸದ ಹೊರತು ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸಂಜೆ ವೇಳೆಗೆ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಬಿಜೆಪಿಯವರು ಹೋರಾಟ ಮುಂದುವರಿಕೆಗೆ ಮುಂದಾದರು. ಪಾಲಿಕೆ ಕಚೇರಿಗೆ ಆಗಮಿಸಿದ ಶಾಸಕ ಬೆಲ್ಲದ, ಆಯುಕ್ತರೊಂದಿಗೆ ಚರ್ಚಿಸಿ ಪ್ರಕರಣದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಆಯುಕ್ತರು ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾದ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಸೆ. 8ರಂದು ಬೆಳಗ್ಗೆ ತೆರವು ಕಾರ್ಯಾಚರಣೆ ನಡೆಯಲಿದೆ ಎಂದು ಖಚಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿಯವರು ಹೋರಾಟ ಹಿಂಪಡೆದರು. ಇದಕ್ಕೂ ಮೊದಲು ಪಾಲಿಕೆ ಆಯುಕ್ತರ ಕಚೇರಿಗೆ ಹಾಕಿದ್ದ ಕೀಲಿಯನ್ನು ಉಪನಗರ ಠಾಣೆ ಪೊಲೀಸರ ಸಮ್ಮುಖದಲ್ಲಿ ಒಡೆದು ತೆಗೆಯಲಾಯಿತು.  

ಟಾಪ್ ನ್ಯೂಸ್

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.