ನ್ಯಾಯಕ್ಕೆ ರಾಹುಲ್ ಕರೆತರುವೆ: ಡಿಕೆಶಿ


Team Udayavani, May 18, 2019, 10:03 AM IST

hubali-tdy-3..

ಹುಬ್ಬಳ್ಳಿ: ಕುಂದಗೋಳದ ಸಂಶಿ ಜಿಪಂ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಯುವ ಮುಖಂಡರು ಸಚಿವ ಡಿ.ಕೆ. ಶಿವಕುಮಾರ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು.

ಹುಬ್ಬಳ್ಳಿ: ರಾಹುಲ್ ಗಾಂಧಿಯವರು ಘೋಷಿಸಿರುವ ನ್ಯಾಯ ಯೋಜನೆಯನ್ನು ರಾಜ್ಯದಲ್ಲಿ ಕುಂದಗೋಳ ಕ್ಷೇತ್ರದಿಂದ ಆರಂಭಿಸುತ್ತೇವೆ. ಸ್ವತಃ ರಾಹುಲ್ ಗಾಂಧಿಯವರನ್ನು ಈ ಕ್ಷೇತ್ರಕ್ಕೆ ಕರೆದುಕೊಂಡು ಬಂದು ಅನುಷ್ಠಾನ ಮಾಡುತ್ತೇವೆ ಎಂದು ಸಚಿವ ಡಿ.ಕೆ. ಶಿವಕುಮಾರ ಹೇಳಿದರು.

ಕುಂದಗೋಳದ ಗಾಂಧಿ ವೃತ್ತದಲ್ಲಿ ನಡೆದ ಮೈತ್ರಿ ಅಭ್ಯರ್ಥಿ ಪರ ಪ್ರಚಾರಾರ್ಥ ಸಮಾವೇಶದಲ್ಲಿ ಮಾತನಾಡಿದ ಅವರು, ಕಡುಬಡವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಈ ಯೋಜನೆಯನ್ನು ನಿಮ್ಮಿಂದ ಆರಂಭಿಸುತ್ತೇವೆ. ಕ್ಷೇತ್ರದ ಅಭಿವೃದ್ಧಿಗೆ ಮೈತ್ರಿ ಸರಕಾರ ಇರುತ್ತದೆ. ಇಲ್ಲಿನ ಪ್ರಮುಖ ಬೇಡಿಕೆಯಾದ ಕುಡಿಯುವ ನೀರು, ಮೂಲ ಸೌಲಭ್ಯ ಸೇರಿದಂತೆ ಜ್ವಲಂತ ಸಮಸ್ಯೆಗಳಿಗೆ ಮೈತ್ರಿ ಸರಕಾರ ಪರಿಹಾರ ಕಲ್ಪಿಸಲಿದೆ. ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಒಟ್ಟಾಗಿ ನಿಮ್ಮ ಸೇವೆ ಮಾಡುವುದಾಗಿ ಹೇಳಿದರು.

ಕ್ಷೇತ್ರದ ಎಲ್ಲ ಸಮಾಜದ ಮುಖಂಡರ ಸಭೆ ಮಾಡಿದ್ದು, ಕುಸುಮಾವತಿ ಶಿವಳ್ಳಿ ಅವರಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಕ್ಷೇತ್ರದಲ್ಲಿ ಮಣ್ಣಿನ ಮನೆಗಳ ಬದಲಿಗೆ ರಾಜೀವ ಗಾಂಧಿ ಆವಾಸ್‌ ಯೋಜನೆಯಲ್ಲಿ ಮನೆ ನಿರ್ಮಿಸಿಕೊಡಲಾಗುವುದು. ಈ ಕ್ಷೇತ್ರದ ಜನರ ಅಭಿವೃದ್ಧಿಗೆ ಮೈತ್ರಿ ಸರಕಾರ ಶ್ರಮಿಸಲಿದೆ. ಸುಮಾರು 30 ಸಾವಿರ ಮತಗಳಿಂದ ಕುಸುಮಾವತಿ ಅವರನ್ನು ಆಯ್ಕೆ ಮಾಡುವ ಮೂಲಕ ಸಿ.ಎಸ್‌. ಶಿವಳ್ಳಿ ಅವರ ಋಣ ತೀರಿಸಬೇಕು ಎಂದು ಮನವಿ ಮಾಡಿದರು.

ಹುಬ್ಬಳ್ಳಿಯತ್ತ ಮೈತ್ರಿ ನಾಯಕರ ದಂಡು: ಕ್ಷೇತ್ರದ ಮತದಾರರಲ್ಲದವರು ಶುಕ್ರವಾರ ಸಂಜೆ 6 ಗಂಟೆ ನಂತರ ಕುಂದಗೋಳ ಕ್ಷೇತ್ರದಲ್ಲಿ ಇರುವಂತಿಲ್ಲ ಎನ್ನುವ ಚುನಾವಣಾ ಆಯೋಗದ ಸೂಚನೆಯಂತೆ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಸಭೆ ಮುಗಿಯುತ್ತಿದ್ದಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಹುಬ್ಬಳ್ಳಿಯತ್ತ ಪ್ರಯಾಣ ಬೆಳೆಸಿದರು. ಬಹಿರಂಗ ಪ್ರಚಾರ ಮುಗಿಸಲು ಇನ್ನು 10 ನಿಮಿಷ ಇರುವಾಗಲೇ ಸಚಿವ ಡಿ.ಕೆ. ಶಿವಕುಮಾರ ತಮ್ಮ ಭಾಷಣ ಮೊಟಕುಗೊಳಿಸಿದರು. ಅವರ ಕಾರು ಜನರ ಮಧ್ಯೆ ಸಿಲುಕಿದ ಪರಿಣಾಮ ಸಮಯ ಮೀರುತ್ತಿದ್ದರಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಸಿದ್ದರಾಮಯ್ಯ ಅವರ ಕಾರಿನಲ್ಲಿ ಹೊರಟರು.

ಮನೆ ಮನೆ ಪ್ರಚಾರ ಆರಂಭ: ಕಳೆದ 15 ದಿನಗಳಿಂದ ಅಬ್ಬರದ ಪ್ರಚಾರಕ್ಕೆ ಸಾಕ್ಷಿಯಾಗಿದ್ದ ಕುಂದಗೋಳ ಕ್ಷೇತ್ರ ಸಂಜೆ 6 ಗಂಟೆ ನಂತರ ಶಾಂತವಾಗಿದೆ. ನಾಯಕರ ವಾಹನಗಳ ಭರಾಟೆ, ಕಾರ್ಯಕರ್ತರ ಕೂಗು, ಧ್ವನಿವರ್ಧಕ ಯಾವುದೂ ಇರಲಿಲ್ಲ. ಸಂಜೆ 6 ಗಂಟೆಯ ನಂತರ ಕಾಂಗ್ರೆಸ್‌ ಕಾರ್ಯಕರ್ತರು, ಸ್ಥಳೀಯ ನಾಯಕರು ಮನೆ ಮನೆ ಪ್ರಚಾರ ನಡೆಸುತ್ತಿರುವುದು ಕಂಡುಬಂತು.

ಕಳಸಾ-ಬಂಡೂರಿ ವಿಚಾರದಲ್ಲಿ ಅಧಿಸೂಚನೆ ಹೊರಡಿಸದೆ ಕೇಂದ್ರ ಸರಕಾರ ಅನ್ಯಾಯ ಮಾಡಿದ್ದು, ಈ ಭಾಗದಲ್ಲಿ ಮತಯಾಚನೆಗೆ ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಅಧಿಸೂಚನೆ ಹೊರಡಿಸಿದರೆ, ತಕ್ಷಣಕ್ಕೆ ಟೆಂಡರ್‌ ಕರೆಯಲು ತಾವು ಬದ್ಧ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಹದಾಯಿ ನ್ಯಾಯಾಧೀಕರಣ ತೀರ್ಪು ನೀರು ಹಂಚಿಕೆ ಮಾಡಿದೆ. ಹಂಚಿಕೆಯಾದ ನೀರಿನ ಬಳಕೆಗೆ ಅಧಿಸೂಚನೆ ಹೊರಡಿಸಲು ಯಾವುದೇ ಅಡ್ಡಿ ಇಲ್ಲ. ಆದರೆ, ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸದೆ ಈ ಭಾಗಕ್ಕೆ ಅನ್ಯಾಯ ಮಾಡಿದೆ ಎಂದರು.

ನ್ಯಾಯಾಧೀಕರಣದ ತೀರ್ಪು ಕುರಿತಾಗಿ ನಮ್ಮ ಆಕ್ಷೇಪ ಸಲ್ಲಿಕೆಗೂ ಅಧಿಸೂಚನೆ ಹೊರಡಿಸುವುದಕ್ಕೂ ಸಂಬಂಧವಿಲ್ಲ. ಆಕ್ಷೇಪ ಸಲ್ಲಿಸಿದರೂ ಅಧಿಸೂಚನೆ ಹೊರಡಿಸಬಹುದಾಗಿದೆ. ರಾಜ್ಯ ಸರಕಾರ ಆಕ್ಷೇಪ ಸಲ್ಲಿಸಿದ್ದು, ಅಧಿಸೂಚನೆ ಹೊರಡಿಸಲು ಬರುವುದಿಲ್ಲ ಎಂದು ಬಿಜೆಪಿ ನಾಯಕರು ದಾರಿತಪ್ಪಿಸುವ ಯತ್ನ ಮಾಡುತ್ತಿದ್ದಾರೆ. ಅಧಿಸೂಚನೆ ಹೊರಡಿಸಲು ಏನು ಅಡ್ಡಿ ಇದೆ ಅವರು ಸ್ಪಷ್ಟಪಡಿಸಲಿ. ಜಲಸಂಪನ್ಮೂಲ ಸಚಿವನಾಗಿ ಅಗತ್ಯ ಮಾಹಿತಿಯೊಂದಿಗೆ ನಾನು ಮಾತನಾಡುತ್ತಿದ್ದೇನೆ ಎಂದು ಹೇಳಿದರು.

ಮಹದಾಯಿ ವಿಚಾರದಲ್ಲಿ ಮಧ್ಯಪ್ರವೇಶ ಹಾಗೂ ಸೌಹಾರ್ದ ಇತ್ಯರ್ಥಕ್ಕೆ ಪ್ರಧಾನಿ ಬಳಿ ನಿಯೋಗ ಹೋದರು ಪ್ರಯೋಜನವಾಗಲಿಲ್ಲ. ಇದೇ ಯಡಿಯೂರಪ್ಪ, ಜಗದೀಶ ಶೆಟ್ಟರ, ಪ್ರಹ್ಲಾದ ಜೋಶಿ ಯಾರೊಬ್ಬರು ಪ್ರಧಾನಿ ಮುಂದೆ ಬಾಯಿ ತರೆಯಲಿಲ್ಲ. ಇಲ್ಲಿ ಬಂದು ರಾಜ್ಯ ಸರಕಾರದ ಮೇಲೆ ಆರೋಪ ಹೊರಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದರೆ ತಕ್ಷಣವೇ ಟೆಂಡರ್‌ ಕರೆದು ಕಾಮಗಾರಿ ಆರಂಭಿಸಲು ರಾಜ್ಯ ಸರಕಾರ ಸಿದ್ಧವಿದೆ ಎಂದರು.

ಪ್ರಧಾನಿ ಸ್ಪಷ್ಟಪಡಿಸಬೇಕು: ಗೋಡ್ಸೆಯನ್ನು ದೇಶಭಕ್ತ ಎಂದು ಕೆಲ ಬಿಜೆಪಿಯವರು ಕರೆದಿರುವುದು ಅತ್ಯಂತ ಅಪಾಯಕಾರಿಯಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮೊದಲು ಸ್ಪಷ್ಟನೆ ನೀಡಬೇಕಾಗಿದೆ. ರಾಜೀವ್‌ಗಾಂಧಿ ಅವರ ಬಗ್ಗೆ ಪ್ರಧಾನಿ ಸೇರಿದಂತೆ ಬಿಜೆಪಿ ನಾಯಕರು ಭ್ರಷ್ಟಾಚಾರಿ, ಕೊಲೆಗಡುಕ ಎಂಬಂಥ ಹೇಳಿಕೆ ನೀಡುವುದು ನಾಚಿಕೆಗೇಡಿನ ಸಂಗತಿ. ಮೋದಿಯವರಿಗೆ ಸೋಲಿನ ಅರಿವಾಗಿ ಇಂತಹ ಹೇಳಿಕೆ ನೀಡಲು ಮುಂದಾಗಿದ್ದು, ಬಿಜೆಪಿಯವರ ಮನೋಸ್ಥಿತಿ, ಸಂಸ್ಕೃತಿ ಎಂತಹದ್ದೆಂಬುದು ವ್ಯಕ್ತವಾಗುತ್ತಿದೆ ಎಂದರು.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.