Eshwarappa: ಬಿಜೆಪಿಯಲ್ಲಿ ಎಲ್ಲಾ ಸರಿಯಾದರೆ ಶೀಘ್ರ ಪಕ್ಷಕ್ಕೆ ಮರಳುವೆ: ಕೆ.ಎಸ್.ಈಶ್ವರಪ್ಪ
Team Udayavani, Sep 12, 2024, 2:39 PM IST
ಹುಬ್ಬಳ್ಳಿ: ತವರು ಮನೆಗೆ ಹೋಗಲು ಯಾವ ಮಹಿಳೆಯಾದರು ಒಲ್ಲೆ ಎನ್ನುತ್ತಾಳೆಯೆ? ಬಿಜೆಪಿಗೆ ಮರಳಲು ನಾನೇಕೆ ಒಲ್ಲೆ ಎನ್ನಲಿ. ತವರು ಮನೆಯಲ್ಲಿ ಕೆಲ ಸಹೋದರರು ಇಲ್ಲಸಲ್ಲದ ಸ್ಥಿತಿ ನಿರ್ಮಿಸಿದ್ದು, ಶೀಘ್ರ ಅದು ಸರಿಯಾಗಿ ಮತ್ತೆ ತವರಿಗೆ ಮರಳುವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಕುಟುಂಬದ ಕೈಯಲ್ಲಿಪಕ್ಷ ಸಿಲುಕಿದೆ. ಎಲ್ಲವೂ ಸರಿಯಾಗಲಿದೆ ಎಂಬ ನನಗೆ ವಿಶ್ವಾಸವಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಆರು ತಿಂಗಳಿಂದ ಖಾಲಿಯಿತ್ತು, ಯಡಿಯೂರಪ್ಪ ಏನೋ ಮಾಡಿ ಶಾಸಕನಾಗಿದ್ದ ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಿದ್ದು, ಇದು ಬಹಳ ದಿನ ಉಳಿಯುವುದಿಲ್ಲ ಎಂದರು.
ಕುಟುಂಬ ಹಿಡಿತಕ್ಕೆ ಪಕ್ಷ ಸಿಲುಕಬಾರದು ಎಂಬ ಪ್ರಧಾನಿ ಮೋದಿ ಆಶಯಕ್ಕೆ ವಿರುದ್ದವಾಗಿ ಕರ್ನಾಟಕದಲ್ಲಿ ಬಿಜೆಪಿ ಸ್ಥಿತಿಯಿದೆ. ಯಡಿಯೂರಪ್ಪ ಕುಟುಂಬ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡಿದೆ ಎಂಬುದನ್ನು ನಾನು ಹೇಳುತ್ತಿಲ್ಲ. ಸ್ವತಃ ಡಿಸಿಎಂ ಡಿ.ಕೆ.ಶಿವಕುಮಾರ ಬಹಿಂಗವಾಗಿ ವಿಜಯೇಂದ್ರ ನಮ್ಮ ಭಿಕ್ಷೆಯಿಂದ ನೀನು ಗೆದ್ದಿದ್ದೀಯ ಎಂದಿದ್ದು, ಯಡಿಯೂರಪ್ಪ ಬಿಜೆಪಿಗೆ, ಡಿಕೆ ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರಿಗೆ ದ್ರೋಹ ಬಗೆದಿದ್ದಾರೆ ಎಂದರು.
ಮುಡಾ ಹಗರಣದಲ್ಲಿ ಸಿಎಂ ವಿರುದ್ದ ಯಾವ ತೀರ್ಪು ಬರುತ್ತದೋ ಗೊತ್ತಿಲ್ಲ. ವ್ಯತಿರಿಕ್ತ ತೀರ್ಪು ಬಂದರೆ ಕೇಜ್ರಿವಾಲ್ ರೀತಿ ಭಂಡತನ ತೋರದೆ ಸಿಎಂ ಮರ್ಯಾದೆಯಿಂದ ರಾಜೀನಾಮೆ ನೀಡಬೇಕು. ಕಾಂಗ್ರೆಸ್ ನಲ್ಲಿ ಸಿಎಂ ಆಕಾಂಕ್ಷಿಗಳ ದೊಡ್ಡ ಪಟ್ಟಿಯಿದೆ. ಬಹಿರಂಗವಾಗಿ ಸಿಎಂ ಬೆಂಬಲ ಎನ್ನುವ ನಾಯಕರು, ಸಿಎಂ ಸ್ಥಾನ ಕ್ಕೆ ನಾನು ಸಿದ್ದ ಎನ್ನುತ್ತಿದ್ದಾರೆ ಎಂದು ಈಶ್ವರಪ್ಪ ಹೇಳಿದರು.
ಹಿಂದೂ ವಿರೋಧಿ ಸರ್ಕಾರ
ನಾಗಮಂಗಲದಲ್ಲಿ ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು, ಪೆಟ್ರೋಲ್ ಬಾಂಬ್ ತೂರಾಟ ಮಾಡಿದರೂ ಗೃಹ ಸಚಿವರು ಇದೊಂದು ಸಣ್ಣ ಘಟನೆ ಎಂದು ಉದಾಸೀನ ತೋರಿದ್ದಾರೆ. ಗಲಭೆ ಮಾಡಿದ ಗೂಂಡಾಗಳನ್ನು ಬಿಟ್ಟು ಅಮಾಯಕ ಹಿಂದೂಗಳನ್ನು ಬಂಧಿಸುತ್ತಿರುವುದು ನೋಡಿದರೆ ಇದಕ್ಕೆ ಹಿಂದೂ ವಿರೋಧಿ ಸರ್ಕಾರ ಎನ್ನದೆ ಮತ್ತೆ ಏನನ್ನಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಮಾಡಬಾರದೆಂದು, ಮಸೀದಿ ಮುಂದೆ ಹೋಗುವಾಗ ಡೊಳ್ಳು, ವಾದ್ಯಗಳನ್ನ ಬಾರಿಸಬಾರದೆಂದು ಏನಾದರು ಕಾನೂನು ಇದೆಯೇ? ರಾಜ್ಯ ಸರ್ಕಾರ ಓಲೈಕೆ ರಾಜಕಾರಣ ಬಿಟ್ಟು ಕಲ್ಲು ತೂರಾಟ ಮಾಡಿದ ರಾಷ್ಟ್ರದ್ರೋಹ ಮನಸ್ಥಿತಿಯ ಗೂಂಡಾಗಳನ್ನು ಕೂಡಲೇ ಬಂಧಿಸಬೇಕು ಎಂದರು.
ಹಿಂದೂಗಳನ್ನ ದುರ್ಬಲರು ಎಂದು ಭಾವಿಸಿದರೆ ಬೇರೆ ರೀತಿಯ ಪರಿಣಾಮ ಎದುರಿಸಬೇಕಾಗುತ್ತದೆ. ಕಲ್ಲು ತೂರಾಟ ಮಾಡಿದ ಗೂಂಡಾಗಳ ಕೃತ್ಯವನ್ನು ಸಿಎಂ, ಡಿಸಿಎಂ, ಗೃಹ ಸಚಿವರು ಸಣ್ಷ ಖಂಡನೆಯೂ ಮಾಡಿಲ್ಲ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi ಕ್ಯಾಬಿನೆಟ್ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Bellary; ಜೈಲಿನಲ್ಲಿ ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್, ಹೇಮಂತ್
Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.