ಶ್ರದ್ಧೆಯಿದ್ದರೆ ಕೃಷಿಯಲ್ಲಿ ಯಶಸ್ಸು: ವಿನಯ್‌


Team Udayavani, Apr 26, 2017, 1:34 PM IST

hub5.jpg

ಧಾರವಾಡ: ಇಂದಿನ ಮಕ್ಕಳು ಮತ್ತು ಯುವ ಪೀಳಿಗೆಗೆ ಪರಿಸರ, ಕೃಷಿ ಹಾಗೂ ಪ್ರಕೃತಿ ಕುರಿತು ಜಾಗೃತಿ ಮೂಡಿಸಿ, ಅವರನ್ನು ಮುಂದಿನ ದಿನಗಳಲ್ಲಿ ಪರಿಸರದ ಸಂರಕ್ಷಣೆಯಲ್ಲಿ ಕ್ರಿಯಾತ್ಮಕವಾಗಿ ಪಾಲ್ಗೊಳ್ಳುವಂತೆ ಮಾಡಬೇಕಾದ ಹೊಣೆ ಎಲ್ಲರ ಮೇಲಿದೆ ಎಂದು ಸಚಿವ ವಿನಯ ಕುಲಕರ್ಣಿ ಹೇಳಿದರು. 

ತಾಲೂಕಿನ ಹಳ್ಳಿಗೇರಿಯ ಸಮೀಪದ ನೇಚರ್‌ ಫಸ್ಟ್‌ ಇಕೋವಿಲೇಜ್‌ನಲ್ಲಿ ಪಂಚವಟಿ ವನದ ಸಸಿಗಳನ್ನು ನೆಟ್ಟು ಉದ್ಘಾಟಿಸಿ ಮಾತನಾಡಿದ ಅವರು, ಈ ದಿಸೆಯಲ್ಲಿ ಇಂತಹ ಧ್ಯೇಯೋದ್ದೇಶಗಳನ್ನಿಟ್ಟುಕೊಂಡು ಒಂದು ಮಾದರಿಯ ಸ್ಥಳವಾಗಿ ನಿರ್ಮಾಣವಾಗುತ್ತಿರುವ ನೇಚರ್‌ ಫಸ್ಟ್‌ ಇಕೋ ವಿಲೇಜ್‌ ಧಾಡವಾಡದ ಹೆಮ್ಮೆಯ ಪ್ರತೀಕವಾಗಲಿ ಎಂದರು.  

ಇಂದಿನ ಯುವ ಜನಾಂಗ ಕೃಷಿಯಿಂದ ವಿಮುಖರಾಗದೆ, ಶ್ರದ್ಧೆಯಿಂದ ಮಾಡಿದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದರು. ಇದಕ್ಕೂ ಮುಂಚೆ ಇಕೋವಿಲೇಜ್‌ನಲ್ಲಿ ನಿರ್ಮಾಣಗೊಂಡ ಉದ್ಯಾನ, ಸಾಂಪ್ರದಾಯಿಕ ಆಹಾರ ಮನೆ, ಅದರಲ್ಲಿ ಉತ್ಪತ್ತಿಯಾಗುವ ತರಕಾರಿ ತ್ಯಾಜ್ಯದಿಂದ ಉಪಯೋಗಿಸಲ್ಪಡುವ ಗ್ಯಾಸ್‌, ಗೋಬರ್‌ ಗ್ಯಾಸ್‌ ಬಳಕೆ,

ಮಳೆ ನೀರು ಸಂಗ್ರಹದ ಮಾದರಿ, ಎರೆಹುಳು ಗೊಬ್ಬರದ ಉತ್ಪಾದನೆ,  ಸೌರಶಕ್ತಿ ಮತ್ತು ಪವನ ಶಕ್ತಿಗಳ ಜಂಟಿ ಮಿಶ್ರಣದಿಂದ ಉತ್ಪಾದನೆಯಾಗುವ ವಿದ್ಯುತ್ಛಕ್ತಿ, ಔಷಧಿಧಿ ಸಸ್ಯಗಳ ವನ, ಮಕ್ಕಳ ಉದ್ಯಾನ, ಹಗ್ಗದ ಸಾಹಸ ಕ್ರೀಡೆಗಳ ಸ್ಥಳ, ಸಸಿಗಳ ನರ್ಸರಿ, ಸಾವಯವ ಉತ್ಪನ್ನಗಳ ಮಳಿಗೆ ಎಲ್ಲವನ್ನೂ ಸಚಿವರು ವೀಕ್ಷಿಸಿದರು. 

ಇಕೋವಿಲೇಜ್‌ನ ಸಾವಯವ ಮಳಿಗೆಯ ಉದ್ಘಾಟಿಸಿದ ವೈಶುದೀಪ ಫೌಂಡೇಶನ್‌ ಮುಖ್ಯಸ್ಥೆ ಶಿವಲೀಲಾ ಕುಲಕರ್ಣಿ ಮಾತನಾಡಿ, ಇಂದಿನ ದಿನಗಳಲ್ಲಿ ಆಹಾರ ಪದಾರ್ಥಗಳಲ್ಲಿ ರಾಸಾಯನಿಕ ಪ್ರಮಾಣದ ಮಿಶ್ರಣ ಅತಿಯಾಗಿರುವುದು ಎಲ್ಲರಿಗೂ ತಿಳಿದ ವಿಷಯ. ಹೀಗಾಗಿ ಸಾವಯವ ರೈತರನ್ನು ಉತ್ತೇಜಿಸುವ ಕಾರ್ಯವಾಗಬೇಕಿದೆ.

ಹೀಗಾದಲ್ಲಿ ಮಾತ್ರ ಸಾವಯವ ಕೃಷಿ ಇನ್ನಷ್ಟು ಸಮೃದ್ಧವಾಗಿ ಬೆಳೆಯಲು ಸಾಧ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ ಇಕೋ ವಿಲೇಜ್‌ನ ಮುಖ್ಯಸ್ಥ ಪಂಚಯ್ಯ ಹಿರೇಮಠ ಮಾತನಾಡಿ, ಇಕೋವಿಲೇಜ್‌ ಒಂದು ಪರಿಸರ, ಕೃಷಿ, ಆರೋಗ್ಯ ಮತ್ತು ಆಹಾರದ ಒಂದು ಪ್ರಾಯೋಗಿಕ ಪಾಠಶಾಲೆಯಾಗಬೇಕೆಂಬ ಗುರಿ ಹೊಂದಿದ್ದು, ಇದಕ್ಕೆ ಸ್ವಲ್ಪ ಮನರಂಜನೆಯ ಲೇಪನವನ್ನು ನೀಡಿ ಇಂದಿನ ಮಕ್ಕಳಿಗೆ ಪರಿಸರದ ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿದೆ. 

ಸಾರ್ವಜನಿಕರು ಮತ್ತು ಪರಿಸರ ಪ್ರೇಮಿಗಳು ಸ್ವಯಂ ಸ್ಫೂಧಿರ್ತಿಯಿಂದ ಇಕೋ ವಿಲೇಜ್‌ನೊಂದಿಗೆ ಕೈ ಜೋಡಿಸಿ, ಇದರ ಸದುಪಯೋಗ ಪಡೆದು ಇದೊಂದು ಮಾದರಿ ಸ್ಥಳವಾಗಿ ಹೊರಹೊಮ್ಮಲು ಸಹಕರಿಸಬೇಕು ಎಂದು ಮನವಿ ಮಾಡಿದರು. 

ಡಾ|ಸಂಜೀವ ಕುಲಕರ್ಣಿ,ಉಪಾಧ್ಯಕ್ಷರಾದ ಚಂದ್ರಶೇಖರ ಬೈರಪ್ಪನವರ, ನೇಚರ ಫಸ್ಟ್‌ ಸಂಸ್ಥೆಯ ವೀಣಾ ಹಿರೇಮಠ, ಡಾ| ಧೀರಜ ವೀರನಗೌಡರ, ಶಿವಾಜಿ ಸೂರ್ಯವಂಶಿ, ಅಸ್ಲಂಜಹಾನ ಅಬ್ಬಿಹಾಳ,  ಹೇಮಾಕ್ಷಿ ರೇಸೂರ, ಡಾ|ಶಕುಂತಲಾ ಮಾಸೂರಸೇರಿದಂತೆ ನೂರಾರು ಪರಿಸರ ಪ್ರೇಮಿಗಳು ಇದ್ದರು. ಇಕೋ ವಿಲೇಜ್‌ನ ಸಂಚಾಲಕ ಪ್ರಕಾಶ ಗೌಡರ ನಿರೂಪಿಸಿದರು. ಅನೀಲ ಅಳ್ಳೋಳ್ಳಿ ವಂದಿಸಿದರು.  

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.