ಸ್ಯಾನಿಟೈಜರ್‌ ಸೇವಿಸಿದರೆ ಸಾಯುವ ಸ್ಥಿತಿ ಸಂಭವ


Team Udayavani, Apr 17, 2020, 1:34 PM IST

huballi-tdy-3

ಹುಬ್ಬಳ್ಳಿ/ಧಾರವಾಡ: ಲಾಕ್‌ಡೌನ್‌ ಸಂದರ್ಭದಲ್ಲಿ ಹು-ಧಾ ಅವಳಿನಗರದಲ್ಲಿ ಹಲವು ಮದ್ಯವ್ಯಸನಿಗಳುತಮ್ಮ ಜೀವಕ್ಕೆ ಎರವಾಗುವ ಕಳ್ಳಭಟ್ಟಿ, ಸ್ಪಿರಿಟ್‌ ಹಾಗೂ ಸ್ಯಾನಿಟೈಸರ್‌ ಸೇವನೆಗೆ ಮುಂದಾಗುತ್ತಿರುವುದು ಆಘಾತಕಾರಿಯಾಗಿದೆ. ಮದ್ಯ ಮಾರಾಟ ನಿಷೇಧವಾಗಿದ್ದರಿಂದಕೆಲವರು ಕಳ್ಳಭಟ್ಟಿ ಹಾಗೂ ಸ್ಪಿರಿಟ್‌ ಬೆರೆಸಿದನೀರಿನ ಸೇವನೆಗೆ ಮುಂದಾಗಿದ್ದರೆ, ಇನ್ನು ಕೆಲವರು ಸ್ಯಾನಿಟೈಸರ್‌ಗೆ ತಂಪು ಪಾನೀಯ ಸೇರಿಸಿ ಸೇವನೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಆರೋಗ್ಯ ಇಲಾಖೆ ಎಚ್ಚರಿಕೆ: ಆಲ್ಕೋಹಾಲ್‌ ಮಿಶ್ರಿತ ಸ್ಯಾನಿಟೈಸರ್‌ ಗಳು ಬಾಹ್ಯ ಉಪಯೋಗಕ್ಕೆ ಮಾತ್ರ ಸೀಮಿತವಾಗಿದ್ದು, ಯಾವುದೇ ಕಾರಣಕ್ಕೂ ಸೇವನೆಗೆ ಯೋಗ್ಯವಲ್ಲ. ಇದರಿಂದ ಲಿವರ್‌ ಮತ್ತು ಬಹು ಅಂಗಾಂಗಗಳು ವೈಫಲ್ಯವಾಗಲಿವೆ ಎಂದು ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಸಿದೆ.

ಸ್ಯಾನಿಟೈಜರ್‌ ಸೇವನೆಗೆ ಯೋಗ್ಯವಲ್ಲ: ಸ್ಯಾನಿಟೈಜರ್‌ದಲ್ಲಿ ಅಲ್ಕೋಹಾಲ್‌ ಮಾತ್ರ ಇರಲ್ಲ. ಇದು ಶೇ.95 ಇಥೈಲ್‌ ಅಲ್ಕೋಹಾಲ್‌, ಶೇ.0.125 ಹೈಡ್ರೋಜನ್‌ ಪೆರಾಕ್ಸೈಡ್‌, ಶೇ.1.45 ಗ್ಲಿಸರಾಲ್‌ ಒಳಗೊಂಡಿರುತ್ತದೆ.ಹೆಚ್ಚಿನ ಪ್ರಮಾಣದಲ್ಲಿ ಇಥೆನಾಲ್‌ ಇರುವುದರಿಂದ ಕುಡಿಯಲು ಇದು ಯಾವುದೇ ಕಾರಣಕ್ಕೂ ಯೋಗ್ಯವಲ್ಲ. ಇದರ ಸೇವನೆಯಿಂದ ಅನ್ನನಾಳ, ಜಠರ, ಸಣ್ಣಕರಳು, ದೊಡ್ಡಕರಳು, ಪಿತ್ತಜನಕಾಂಗ (ಲೀವರ್‌) ಮತ್ತು ಮೇದೋಜ್ಜೀರಕ ಗ್ರಂಥಿಗಳಿಗೆ ತೀವ್ರ ಹಾನಿಯಾಗುತ್ತದೆ. ಪ್ರಾಣ ಹಾನಿಯಾಗುವ ಸಾಧ್ಯತೆಗಳು ಇರುತ್ತವೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಶಿವಕುಮಾರ್‌ ಮಾನಕರ ತಿಳಿಸಿದ್ದಾರೆ.

ಸಾಯುವ ಸ್ಥಿತಿ ಬರಬಹುದು: ಸ್ಯಾನಿಟೈಸರ್‌ ಹೊಟ್ಟೆಯಲ್ಲಿ ಹೋದರೆ ಅನ್ನನಾಳ ತೂತು ಬೀಳುತ್ತದೆ. ಲೀವರ್‌ಗಳ ಕ್ರಿಯೆಗೂ ಧಕ್ಕೆ ಬರುತ್ತದೆ. ಮನುಷ್ಯ ಸಾಯುವ ಪರಿಸ್ಥಿತಿ ಬರಬಹುದು. ಆದ್ದರಿಂದ ಸ್ಯಾನಿಟೈಜರ್‌ ಸೇವಿಸಬಾರದು. ಇದು ಕುಡಿಯುವ ವಸ್ತು ಅಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಯಶವಂತ ಮದೀನಕರ ಎಚ್ಚರಿಕೆ  ನೀಡಿದ್ದಾರೆ.

ಅಬಕಾರಿ ಕಾಯ್ದೆ ಮೇಲೆ ಕ್ರಮ: ಔಷಧಿ ಅಂಗಡಿಯವರು ಯಾರಿಗೆ ಮತ್ತು ಎಷ್ಟು ಪ್ರಮಾಣದಲ್ಲಿ ಹ್ಯಾಂಡ್‌ ಸ್ಯಾನಿಟೈಸರ್‌ ಮಾರಾಟ ಮಾಡುತ್ತಿದ್ದೇವೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಬೇಜವಾಬ್ದಾರಿ ತೋರುವ ಔಷಧಿ ಅಂಗಡಿಗಳ ಮೇಲೆ ಅಬಕಾರಿ ಕಾಯ್ದೆ 1965ರ ಕಲಂ 33 ಹಾಗೂ 38ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಈ ಪ್ರಕರಣಗಳ ಅಡಿ ಎಸಗುವ ಅಪರಾಧಕ್ಕೆ 4 ವರ್ಷ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ ಎಂದು ಧಾರವಾಡ ಅಬಕಾರಿ ಉಪ ಆಯುಕ್ತ ಶಿವನಗೌಡರ ತಿಳಿಸಿದ್ದಾರೆ.

ಸಾರ್ವಜನಿಕರು ಕಳ್ಳಭಟ್ಟಿ, ಸ್ಪಿರಿಟ್‌ ಹಾಗೂ ಹ್ಯಾಂಡ್‌ ಸ್ಯಾನಿಟೈಸರ್‌ಗಳ ಅಕ್ರಮ ಮಾರಾಟ ಕಂಡು ಬಂದರೆ ಟೋಲ್‌ ಫ್ರೀ ಸಂಖ್ಯೆ 18004250742ಗೆ ಕರೆ ಮಾಡಬಹುದು. ಇದರ ಜತೆಗೆಜಿಲ್ಲಾಡಳಿತ ಸಹಾಯವಾಣಿ 1077 ಕರೆ ಮಾಡಬಹುದು. ವಾಟ್ಸ್‌ಅಪ್‌ ಸಂಖ್ಯೆಗಳಾದ 9449847646, 9449847641ಗೆ ಸಂದೇಶ ಕಳುಹಿಸಬಹುದು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.