Hubli; ಆಕ್ರಮ ಬಡ್ಡಿ ವ್ಯವಹಾರ; 25 ದಂಧೆಕೋರರನ್ನು ಬಂಧಿಸಿದ ಪೊಲೀಸರು
Team Udayavani, Aug 22, 2024, 1:18 PM IST
ಹುಬ್ಬಳ್ಳಿ: ಅಕ್ರಮ ಬಡ್ಡಿ ವ್ಯವಹಾರದಲ್ಲಿ ತೊಡಗಿರುವ ಕುಳಗಳಿಗೆ ಮಹಾನಗರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಮೀಟರ್ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದ 25 ದಂಧೆಕೋರರನ್ನು ಬಂಧಿಸಿದ್ದಾರೆ.
ಇತ್ತೀಚೆಗೆ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಮೀಟರ್ ಬಡ್ಡಿ ಹಾವಳಿಯ ಬಗ್ಗೆ ನೋವು ತೋಡಿಕೊಂಡಿದ್ದರು. ಇದನ್ನು ಗಂಭೀರವಾಗಿ ತಗೆದುಕೊಂಡ ಪೊಲೀಸರು ತಮ್ಮ ಠಾಣೆ ವ್ಯಾಪ್ತಿಯಲ್ಲಿ ಮೀಟರ್ ಬಡ್ಡಿ ದಂಧೆಕೋರರ ಪತ್ತೆಗೆ ಮುಂದಾಗಿದ್ದರು. ಈ ಕುರಿತು ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ 7 ಪ್ರಕರಣ ದಾಖಲಿಸಿ 25 ಜನರನ್ನು ಬಂಧಿಸಿದ್ದಾರೆ.
ಧಾರವಾಡದ ಉಪನಗರ ಠಾಣೆ-2, ಶಹರ ಠಾಣೆ-2, ಪ್ರಕರಣ ವಿದ್ಯಾನಗರ ಠಾಣೆ-2 ಹಾಗೂ ಹುಬ್ಬಳ್ಳಿ ಬೆಂಡಿಗೇರಿ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿವೆ. ಬಂಧಿತರಿಂದ 10 ದ್ವಿಚಕ್ರ ವಾಹನಗಳು, 10 ಮೊಬೈಲ್, ಹರಿತವಾದ ಆಯುಧ, ಮೀಟರ್ ಬಡ್ಡಿ ದಂಧೆಯ ವಿವರ ನಮೋದಿಸಿದ ದಾಖಲೆಗಳು, ಬಾಂಡ್ ಗಳನ್ನು ಜಪ್ತು ಮಾಡಲಾಗಿದೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಆರಂಭಿಕ ಹಂತದಲ್ಲಿ ಇಷ್ಟು ಪ್ರಕರಣಗಳನ್ನು ದಾಖಲಿಸಿ ದಂಧೆಯಲ್ಲಿ ತೊಡಗಿರುವ ಬಗ್ಗೆ ಸೂಕ್ತ ದಾಖಲೆಗಳು ದೊರೆತ ಹಿನ್ನೆಲೆಯಲ್ಲಿ 25 ಜನರನ್ನು ಬಂಧಿಸಲಾಗಿದೆ. ಸಾರ್ವಜನಿಕರು ಯಾವುದಾದರೂ ಮೀಟರ್ ಬಡ್ಡಿ ದಂಧೆಗೆ ಸಿಲುಕಿದ್ದರೆ ಸೂಕ್ತ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಠಾಣೆಯಲ್ಲಿ ಪ್ರಕರಣ ದಾಖಲಿಸಬಹುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.