ನಿಸರ್ಗ ಉಳಿವಿಗಾಗಿ ಪಕ್ಷಿ ಸಂಕುಲದ ಪಾತ್ರ ಮುಖ್ಯ


Team Udayavani, Feb 15, 2017, 1:29 PM IST

hub3.jpg

ಧಾರವಾಡ: ನಿಸರ್ಗ ಉಳಿವಿಗಾಗಿ ಪಕ್ಷಿ ಸಂಕುಲದ ಪಾತ್ರ ಬಹುಮುಖ್ಯವಾಗಿದೆ ಎಂದು ಪಕ್ಷಿತಜ್ಞ ಎಸ್‌.ಎಂ.ಪಾಟೀಲ ಹೇಳಿದರು. ನೇಚರ ರಿಸರ್ಚ್‌ ಸೆಂಟರ್‌ ಹಾಗೂ ಸುಸ್ಥಿರ ಅಭಿವೃದ್ಧಿ ವೇದಿಕೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪರಿಸರ ಚಲನಚಿತ್ರೋತ್ಸವದ ಜಾಗೃತಿಗಾಗಿ ಕವಿವಿಯ ಸಸ್ಯೋದ್ಯಾನದಲ್ಲಿ ಹಮ್ಮಿಕೊಂಡಿದ್ದ ಪಕ್ಷಿ ವೀಕ್ಷಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಪಕ್ಷಿಗಳು ಮತ್ತು ಮನುಷ್ಯನ ನಡುವೆ ಸಾವಿರಾರು ವರ್ಷಗಳಿಂದ ಅವಿನಾಭಾವ ಸಂಬಂಧವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಮನುಷ್ಯನ ಸ್ವಾರ್ಥದಿಂದ ಕಾಡು, ಮರ ಗಿಡಗಳು ನಾಶವಾಗುತ್ತಿದ್ದು,ಇದರ ಪರಿಣಾಮ ಪಕ್ಷಿ ಸಂಕುಲ ಮೇಲೆಯೂ ಆಗಿದೆ. ಆದರೆ ಪಕ್ಷಿಗಳಿಲ್ಲದೆ ಮನುಷ್ಯ ಸಹಿತ ಬದುಕುವುದು ಸಾಧ್ಯವಿಲ್ಲ ಎಂಬ ಸತ್ಯದ ಅರಿವು ಆಗುವ ಕಾಲ ಬಹಳ ಸಮೀಪದಲ್ಲಿದೆ ಎಂದರು. 

ಅತಿಥಿಯಾಗಿದ್ದ ಪಕ್ಷಿತಜ್ಞ ಆರ್‌.ಜಿ. ತಿಮ್ಮಾಪುರ ಮಾತನಾಡಿ, ನಶಿಸಿ ಹೋಗುತ್ತಿರುವ ಗುಬ್ಬಿಗಳನ್ನು ಮತ್ತೆ ಮರಳಿ ನಮ್ಮೊಡನೆ ಬದುಕುವ ಅವಕಾಶ ಮಾಡಿಕೊಡುವ ಅಗತ್ಯತೆಯಿದೆ. ಅವುಗಳಿಗೆ ಬೇಕಾದ ಪೂರಕ ವಾತಾವರಣವನ್ನು ಇಂದಿನ ಯುವಕರು ಮತ್ತು ಮಕ್ಕಳು ಮಾಡಿಕೊಡಬೇಕಿದೆ ಎಂದರು. 

ಡಾ| ಸಂಜೀವ ಕುಲಕರ್ಣಿ ಮಾತನಾಡಿ, ಮಕ್ಕಳು ಪಕ್ಷಿ, ಪ್ರಕೃತಿ, ಗಿಡ-ಮರ, ನೀರು, ವಾಯು, ಕಾಡು ಇವೆಲ್ಲವುದರ ಮಹತ್ವ, ಪ್ರಾಮುಖ್ಯತೆ, ಅವಶ್ಯಕತೆ ಏಕೆಂಬುದನ್ನು ತಿಳಿಯಬೇಕಾದರೆ ಬರುವ ಪರಿಸರ ಚಲನ ಚಿತ್ರೋತ್ಸವದಲ್ಲಿ ಭಾಗವಹಿಸಿ ಪರಿಸರದ ಹಲವಾರು ಮಹತ್ತರ ಸಂಗತಿಗಳನ್ನು ತಿಳಿಯಬೇಕು ಎಂದರು. 

ನೇಚರ್‌ ರಿಸರ್ಚ್‌ ಸೆಂಟರ್‌ನ ಅಧ್ಯಕ್ಷ ಪಂಚಯ್ಯ ಹಿರೇಮಠ, ಉಪಾಧ್ಯಕ್ಷ  ಚಂದ್ರಶೇಖರ ಬೈರಪ್ಪನವರ, ಕಾರ್ಯದರ್ಶಿ ಪ್ರಕಾಶ ಗೌಡರ, ಕಾರ್ಯಕ್ರಮದ ಸಂಚಾಲಕ ಧೀರಜ ವೀರನಗೌಡರ, ಅನಿಲ ಅಳ್ಳೊಳ್ಳಿ, ಅಸ್ಲಂಜಹಾನ ಅಬ್ಬಿಹಾಳ ಇದ್ದರು. ಇದಕ್ಕೂ ಮುನ್ನ ಬೆಳಗಿನ ಜಾವದಲ್ಲಿ 150ಕ್ಕೂ ಹೆಚ್ಚು ಮಕ್ಕಳನ್ನು ಪಕ್ಷಿ ತಜ್ಞರಾದ ಪಂಡಿತ ಮುಂಜಿ, ವೈದೇವಿ ಗುಂಜಾಳ, ಪವನ್‌ ಮಿಸ್ಕಿನ್‌, ಹೇಮಂತ ಮತ್ತು

ಎಸ್‌.ಬಿ.ಅಣ್ಣಿಗೇರಿ ಅವರು ಐದಾರು ತಂಡಗಳಾಗಿ ವಿಂಗಡಿಸಿ ವಿವಿಧ ಮಾರ್ಗಗಳಲ್ಲಿ ಕರೆದುಕೊಂಡು ಹೋಗಿ ಪಕ್ಷಿ ವೀಕ್ಷಣೆ ಮಾಡಿಸಿದರು. ವಿವಿಧ ಪಕ್ಷಿಗಳಾದ ಗೋಲ್ಡನ್‌ ಓರಿಯಾಲ, ಡ್ರಾಂಗೊ, ಕ್ಲೊರೆಪ್ಸಿಸ್‌, ಪರ್ಪಲ್‌ ಸನ್‌ ಬರ್ಡ್‌, ಗ್ರೀನ್‌ ಬಾರ್ಬಟ್‌, ಮೇಲ್‌ ಕೋಯಲ್‌, ವೈಟ್‌ ಹೆಡೆಡ್‌ ವ್ಯಾಬ್ಲಿರ್‌, ಇಂಡಿಯನ್‌ ಗೆ ಹಾರ್ನ್ ಬಿಲ್‌, ಆಶಿ ರೆಡ್‌ ವ್ಯಾಬ್ಲಿರ್‌, ಬು ರಾಕ್‌ ಪಿಜನ್‌ನಂತಹ ಪಕ್ಷಿಗಳನ್ನು ಗುರುತಿಸಿ ಅವುಗಳ ಮಹತ್ವಗಳನ್ನು ಮಕ್ಕಳಿಗೆ ತಿಳಿಸಿದರು.   

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.