ಅವಳಿನಗರದಲ್ಲಿ ಸುಧಾರಿತ ಬೀಟ್‌ ಪದ್ಧತಿ ಜಾರಿ


Team Udayavani, Apr 8, 2017, 1:30 PM IST

hub5.jpg

ಹುಬ್ಬಳ್ಳಿ: ಅವಳಿ ನಗರದಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ಶಾಂತಿ- ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಅವಳಿನಗರದ 15 ಪೊಲೀಸ್‌ ಠಾಣೆಗಳಲ್ಲಿ ಸುಧಾರಿತ ಬೀಟ್‌ ಪದ್ಧತಿ ಮೂಲಕ “ಜನಸ್ನೇಹಿ ಮತ್ತು ಸಮುದಾಯದತ್ತ ಪೊಲೀಸ್‌’ ವ್ಯವಸ್ಥೆ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಪಾಂಡುರಂಗ ರಾಣೆ ಹೇಳಿದರು. 

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪೊಲೀಸ್‌ ಇಲಾಖೆಯ ಪ್ರಧಾನ ಕಚೇರಿ ಆದೇಶದ ಮೇರೆಗೆ ಈ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಹು-ಧಾ ಪೊಲೀಸ್‌ ಕಮಿಷ°ರೇಟ್‌ ಘಟಕ ವ್ಯಾಪ್ತಿಯ 15 ಪೊಲೀಸ್‌ ಠಾಣೆಗಳಿಂದ ಒಟ್ಟು 659 ಬೀಟ್‌ ರಚಿಸಲಾಗಿದೆ. ಒಂದೊಂದುಬೀಟ್‌ಗೆ ಕನಿಷ್ಠ 50 ಸಾರ್ವಜನಿಕರಂತೆ ಒಟ್ಟು 17856 ಜನರನ್ನು ಬೀಟ್‌ನ ಸದಸ್ಯರನ್ನಾಗಿ ನೇಮಿಸಲಾಗಿದೆ.

ಆಯಾ ಬೀಟ್‌ನ ಜವಾಬ್ದಾರಿ, ಉಸ್ತುವಾರಿ ಆಯಾ ಪೊಲೀಸ್‌ ಠಾಣೆ ವ್ಯಾಪ್ತಿಯ ಅಧಿಕಾರಿಗಳದ್ದಾಗಿರುತ್ತದೆ. ಅವರಿಗೆ ಅಧಿಕಾರಿ, ಜವಾಬ್ದಾರಿ, ಕರ್ತವ್ಯಗಳ ಬಗ್ಗೆ ನಾಲ್ಕು ಬ್ಯಾಚ್‌ ಗಳಲ್ಲಿ ತರಬೇತಿ ನೀಡಲಾಗಿದೆ. ಅದೇ ರೀತಿ ಬೀಟ್‌ಗೆ ನೇಮಕವಾದ ಸದಸ್ಯರಿಗೆ ಶನಿವಾರದಿಂದಲೇ ತರಬೇತಿ ನೀಡಲಾಗುತ್ತದೆ ಎಂದರು.

ಬೀಟ್‌ಗೆ ನೇಮಿಸಿದ ಸಿಬ್ಬಂದಿ ಹೆಸರು, ಹುದ್ದೆ, ಉಸ್ತುವಾರಿ ಅಧಿಕಾರಿಗಳ ಹೆಸರು, ಹುದ್ದೆ, ಫೋನ್‌ ಸಂಖ್ಯೆಗಳ ಮಾಹಿತಿ ಹಾಗೂ ಸರಹದ್ದಿನ ಮಾಹಿತಿಯನ್ನು ಹು-ಧಾ ಪೊಲೀಸ್‌ ಕಮೀಷನರೇಟ್‌ ಘಟಕದ ವೆಬ್‌ಸೈಟ್‌ www.hublidharwadpolice.com ದಲ್ಲಿ ನೀಡಲಾಗಿದೆ. ಸಾರ್ವಜನಿಕರು ಇದನ್ನು ವೆಬ್‌ಸೈಟ್‌ ಮೂಲಕ ತಿಳಿಯಬಹುದು. 

ಆಯಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ಸುಸ್ಥಿರ ಮನಸ್ಥಿತಿಯ ಯುವಕರು,  ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ನಿವೃತ್ತ ಪೊಲೀಸ್‌ ಸಿಬ್ಬಂದಿ ಬೀಟ್‌ ನಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಅಪರಾಧ ಹಿನ್ನೆಲೆಯುಳ್ಳವರಿಗೆ ಇದರಲ್ಲಿ ಅವಕಾಶವಿಲ್ಲ. ಸಾರ್ವಜನಿಕರ ಜೊತೆ ಹೇಗೆ ನಡೆದುಕೊಳ್ಳಬೇಕು,  ತುರ್ತು ಸಂದರ್ಭದಲ್ಲಿ ಯಾವ ಕ್ರಮ ಕೈಗೊಳ್ಳಬೇಕೆನ್ನುವ ಕುರಿತು ಅವರಿಗೆ ಸೂಕ್ತ ತರಬೇತಿ ನೀಡಲಾಗುವುದು.

ಪ್ರತಿಯೊಬ್ಬ ಬೀಟ್‌ ನಾಗರಿಕ ಸಿಬ್ಬಂದಿಗೆ ಪೊಲೀಸ್‌ ಇಲಾಖೆಯಿಂದ ಗುರುತಿನ ಚೀಟಿ ನೀಡಲಾಗುವುದು ಎಂದರು. ದಿನದ ಎಲ್ಲ ಸಮಯದಲ್ಲೂ 50 ಸದಸ್ಯರಲ್ಲಿ ಒಬ್ಬರಲ್ಲ ಒಬ್ಬರೂ ಗಸ್ತಿನಲ್ಲಿರುತ್ತಾರೆ. ಇದರಿಂದ ಅಪರಾಧ ಚಟುವಟಿಕೆಗಳು ಎಲ್ಲೇ ನಡೆದರೂ ಇಲ್ಲವೆ ನಡೆಯುವ ಮುನ್ಸೂಚಗಳಿದ್ದರೂ ತಕ್ಷಣವೇ ಪೊಲೀಸ್‌ ಇಲಾಖೆಗೆ ಮಾಹಿತಿ ರವಾನೆಯಾಗುತ್ತದೆ.

ಆ ಮೂಲಕ ಅವಳಿ ನಗರದಲ್ಲಿ ಸಹಜವಾಗಿ ಅಪರಾಧ ಪ್ರಕರಣಗಳನ್ನು ಕಡಿವಾಣ ಹಾಕಬಹುದಾಗಿದೆ. ಜೊತೆಗೆ ಪೊಲೀಸರು ನಾಗರಿಕ ಸಮುದಾಯದೊಂದಿಗೆ ಉತ್ತಮ  ಬಾಂಧವ್ಯ ಹೊಂದಲು ಸಹಕಾರಿಯಾಗುತ್ತದೆ. ಬೀಟ್‌ನಲ್ಲಿರುವ ನಾಗರಿಕರು ಸಮಾಜದಲ್ಲಿ ಎಲ್ಲರಂತೆಯೇ ಸಾಮಾನ್ಯರಂತೆ ಕರ್ತವ್ಯ ನಿರ್ವಹಿಸುತ್ತ ಅಪರಾಧ ಚಟುವಟಿಕೆ ಕುರಿತು ಮಾಹಿತಿ ನೀಡಲಿದ್ದಾರೆ.

ಆದರೆ ಮಾಹಿತಿ ನೀಡಿದವರ ಹೆಸರು ಮಾತ್ರ ತುಂಬಾ ಗೌಪ್ಯವಾಗಿರುತ್ತದೆ. ಇವರೆಲ್ಲ ಮμ¤ಯಲ್ಲೇ ಕಾರ್ಯ ನಿರ್ವಹಿಸಲಿದ್ದಾರೆ ಎಂದರು. ಬೀಟ್‌ ಸಿಬ್ಬಂದಿಗೆ 110 ಪರಿಪೂರ್ಣ ಮಾಹಿತಿಗಳುಳ್ಳ ಪುಸ್ತಕ ನೀಡಲಾಗಿದೆ. ಬೀಟ್‌ ನಲ್ಲಿ ಓರ್ವ ಎಎಸ್‌ಐ, ಮುಖ್ಯಪೇದೆ ಹಾಗೂ ಇನ್ನುಳಿದಂತೆ 50 ಸದಸ್ಯರು ಇರುತ್ತಾರೆ. ಆಯಾ ಪೊಲೀಸ್‌ ಠಾಣೆ ಅಧಿಕಾರಿ ಇಲ್ಲವೆ ಮೇಲ್ವಿಚಾರಕರು ವಾರಕ್ಕೊಮ್ಮೆ ಸಭೆ ಸೇರಿ ಸ್ಥಳೀಯ ಪ್ರದೇಶಗಳಲ್ಲಿ ನಡೆಯುವ ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ಪಡೆಯಲಿದ್ದಾರೆ.

ಬೀಟ್‌ ಸಿಬ್ಬಂದಿಯಾಗಿ ಆಯ್ಕೆಯಾದ ಸದಸ್ಯರ ನಡವಳಿಕೆ ಬಗ್ಗೆಯೂ ಇಲಾಖೆ ವಿಶೇಷ ಗಮನಹರಿಸಿ ಅವರಿಂದ ಇನ್ನುಳಿದವರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತದೆ. ಒಂದು ವೇಳೆ ಅವರಿಂದಲೇ ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಅವರ ಮೇಲೆ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.   

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.