![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 22, 2021, 10:09 PM IST
ಹುಬ್ಬಳ್ಳಿ: ಫೋಟೋ ಶೂಟಿಗಾಗಿ ತೆರಳಿದ್ದ ನಗರದ ಐವರ ಪೈಕಿ ಮೂವರು ಮಲಪ್ರಭಾ ಕಾಲುವೆಯಲ್ಲಿ ನಾಪತ್ತೆಯಾಗಿದ್ದು, ಸಾವಿನ ದವಡೆಯಲ್ಲಿದ್ದ ಯುವತಿಯನ್ನು ಸ್ಥಳದಲ್ಲಿ ಕುರಿಗಾಯಿಗಳು ರಕ್ಷಿಸಿದ ಘಟನೆ ತಾಲೂಕಿನ ಕಿರೆಸೂರು ಗ್ರಾಮದ ಬಳಿ ನಡೆದಿದೆ.
ಫೊಟೋ ಶೂಟಿಗಾಗಿ ನಗರದಿಂದ ಐವರು ತೆರಳಿದ್ದರು. ಈ ವೇಳೆ ಜೇನು ನೊಣಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ ಅವುಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಕಾಲುವೆಯಲ್ಲಿ ಮೂವರು ಯುವಕರು ಬಿದ್ದಿದ್ದಾರೆ. ಇನ್ನೋರ್ವ ಯುವಕರ ದಡದಲ್ಲಿ ಉಳಿದಿದ್ದ. ಅವರೊಂದಿಗೆ ತೆರಳಿದ್ದ ಯುವತಿ ಪೈಪ್ ಹಿಡಿದು ಜೋತಾಡುತ್ತಿದ್ದಳು. ಇದನ್ನು ಕಂಡ ಸ್ಥಳದಲ್ಲಿದ್ದ ಕುರಿಗಾಯಿಗಳು ಯುವತಿಯನ್ನು ರಕ್ಷಿಸಿದ್ದಾರೆ.
ಜೋಶಿ ಜಂಗಮ (21), ಸನ್ನಿ ಜಾಕ್ಸನ್ ಕಲ್ಲಕುಂಟ್ಲಾ (21), ಗಜಾನನ ರಾಜಶೇಖರ (21) ನೀರು ಪಾಲಾಗಿರುವ ಯುವಕರಾಗಿದ್ದಾರೆ. ನತಾಶಾ ಭಂಡಾರಿ (19), ಸಲ್ಮಾನ್ ಪಿಳ್ಳೆ (20 ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನೀರು ಪಾಲಾಗಿರುವ ಯವಕರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳಕ್ಕೆ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ, ಇನ್ಸ್ಪೆಕ್ಟರ್ ಚಂದ್ರಶೇಖರ ಮಠಪತಿ, ಪಿಎಸ್ಐ ಜಯಪಾಲ ಪಾಟೀಲ ಆಗಮಿಸಿದ್ದು, ಸ್ಥಳೀಯರ ಸಹಕಾರದಿಂದ ಕಾರ್ಯಾಚರಣೆ ನಡೆಯುತ್ತಿದೆ.
(ಕುರಿಗಾಯಿ ಸಾಹಸದಿಂದ ಪ್ರಾಣಾಪಾಯದಿಂದ ಪಾರಾದ ಇಬ್ಬರು )
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.