![Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ](https://www.udayavani.com/wp-content/uploads/2024/07/Exchange-415x219.jpg)
Hubli; ಇಂಡಿಯಾ ಮೈತ್ರಿಕೂಟ ಅಸ್ತಿತ್ವದಲ್ಲೇ ಇಲ್ಲ: ಪ್ರಹ್ಲಾದ ಜೋಶಿ ವ್ಯಂಗ್ಯ
Team Udayavani, Jan 15, 2024, 11:23 AM IST
![Hubli; ಇಂಡಿಯಾ ಮೈತ್ರಿಕೂಟ ಅಸ್ತಿತ್ವದಲ್ಲೇ ಇಲ್ಲ: ಪ್ರಹ್ಲಾದ ಜೋಶಿ ವ್ಯಂಗ್ಯ](https://www.udayavani.com/wp-content/uploads/2024/01/joshi-2-620x342.jpg)
ಹುಬ್ಬಳ್ಳಿ: ಇಂಡಿಯಾ ಮೈತ್ರಿಕೂಟ ಅಸ್ತಿತ್ವದಲ್ಲೇ ಇಲ್ಲವಾಗಿದೆ. ಆ ಮೈತ್ರಿಕೂಟ ಒಳಜಗಳಕ್ಕೆ ಸಿಲುಕಿದೆ. ಲೋಕಸಭಾ ಸ್ಪರ್ಧಗೆ ಕೆಲವೊಂದು ರಾಜ್ಯಗಳಲ್ಲಿ ಅತ್ಯಂತ ಕಡಿಮೆ ಸ್ಥಾನ ಒಪ್ಪಿಕೊಳ್ಳಲು ಕಾಂಗ್ರೆಸ್ ಸಿದ್ಧವೆನ್ನುವ ಸ್ಥಿತಿಗೆ ತಲುಪಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ.
ಸೋಮವಾರ ಇಲ್ಲಿನ ಸಾಯಿನಗರದಲ್ಲಿ ಸಿದ್ಧಪ್ಪಜ್ಜನ ಮಠ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಇಂಡಿಯಾ ಮೈತ್ರಿ ಕೂಟದಲ್ಲಿ ಪಶ್ಚಿಮ ಬಂಗಾಲ, ಮಹಾರಾಷ್ಟ್ರ, ಉತ್ತರ ಪ್ರದೇಶ ಗಳಲ್ಲಿ ಜಗಳ ಹೆಚ್ಚಿದೆ. ಇದೊಂದು ರೀತಿ ಮನೆಮುರುಕ ಘಟಬಂಧನ. ರಾಹುಲ್ ಗಾಂಧಿ ಭಾರತ ಜೋಡೊ ಯಾತ್ರೆ ಮಾಡಿದಷ್ಟು ಒಳ್ಳೆಯದು ಎಂದು ನುಡಿದರು.
ಶ್ರೀರಾಮ ಮಂದಿರ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವವರು ಯಾರು ಎಂಬುದು ಜನತೆಗೆ ತಿಳಿದಿದೆ. ಶ್ರೀರಾಮ ಮಂದಿರ ಸಮಾರಂಭಕ್ಕೆ ಎಲ್ಲಿಗೂ ಆಹ್ವಾನ ನೀಡಲಾಗಿದೆ. ಸಹಜವಾಗಿ ಬಂದಿದ್ದರೆ ಇಷ್ಟು ಚರ್ಚೆ ಆಗುತ್ತಿರಲಿಲ್ಲ. ಸಂಸದ ಅನಂತಕುಮಾರ ಹೆಗ್ಡೆ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಸಲಾರೆ. ಒಳ್ಳೆ ವಾತಾವರಣದಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಆಗಬೇಕೆಂಬುದಷ್ಟೆ ನಮ್ಮ ಉದ್ದೇಶವಾಗಿದೆ ಎಂದರು.
ನೈತಿಕ ಪೊಲೀಸ್ ಗಿರಿ ಬಗ್ಗೆ ಈ ಹಿಂದೆ ದೊಡ್ಡದಾಗಿ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಹಾನಗಲ್ಲ ಘಟನೆಯಲ್ಲಿ ಮೌನಕ್ಕೆ ಜಾರಿದ್ದಾರೆ. ಹಾನಗಲ್ಲ ಘಟನೆಯಲ್ಲಿ ರಾಜ್ಯ ಸರ್ಕಾರದ ನಡೆ ನೋಡಿದರೆ ಯಾರನ್ನೋ ರಕ್ಷಿಸಲು ಮುಂದಾದಂತಿದೆ ಎಂದರು.
ಟಾಪ್ ನ್ಯೂಸ್
![Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ](https://www.udayavani.com/wp-content/uploads/2024/07/Exchange-415x219.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Prahalad-Joshi](https://www.udayavani.com/wp-content/uploads/2024/07/Prahalad-Joshi-1-150x90.jpg)
Bharath Rice, ಹಿಟ್ಟು ಬಂದ್ ಆಗಿಲ್ಲ, 2 ದಿನದಲ್ಲಿ ಪುನರಾರಂಭ: ಕೇಂದ್ರ ಸಚಿವ ಜೋಶಿ
![Joshi](https://www.udayavani.com/wp-content/uploads/2024/07/Joshi-2-150x90.jpg)
Congress Government ಬಳಿ ಅಕ್ಕಿ ಖರೀದಿಗೂ ಹಣವಿಲ್ಲ: ಕೇಂದ್ರ ಸಚಿವ ಜೋಶಿ
![Hubli; CM-DCM issue not to be debated on sidewalks: RB Thimmapura](https://www.udayavani.com/wp-content/uploads/2024/07/RB-150x83.jpg)
Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
![Ronny](https://www.udayavani.com/wp-content/uploads/2024/07/Ronny-150x83.jpg)
Ronny; ಕಿರಣ್ ರಾಜ್ ನಟನೆಯ ಸಿನಿಮಾದ ಹಾಡು ಬಂತು
![Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ](https://www.udayavani.com/wp-content/uploads/2024/07/Exchange-150x79.jpg)
Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ
![Why did he ignore the BCCI instruction to play Ranji? Ishaan replied](https://www.udayavani.com/wp-content/uploads/2024/07/ishan-150x83.jpg)
IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್
![Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/haryana-150x84.jpg)
Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು
![Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ](https://www.udayavani.com/wp-content/uploads/2024/07/11-5-150x90.jpg)
Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.